ಕಟ್ಟುಮಸ್ತಾದ ದೇಹಕ್ಕೆ ವ್ಯಾಯಮ


Team Udayavani, Jan 22, 2019, 8:35 AM IST

sudi-6.jpg

ಕಟ್ಟುಮಸ್ತಾದ ದೇಹವಿರಬೇಕು ಎಂಬುದು ಬಹುತೇಕ ಎಲ್ಲ ಯುವಕರ ಬಯಕೆ. ಕಟ್ಟುಮಸ್ತಾದ ದೇಹವನ್ನು ಪಡೆಯುವುದರ ಮೂಲಕ ಆರೋಗ್ಯವಾಗಿರುವುದು ಕೂಡ ಬಹಳ ಮುಖ್ಯ. ಆದರೆ ಇದು ಅಷ್ಟು ಸುಲಭವಲ್ಲ. ಸತತ ವ್ಯಾಯಾಮ, ಸೂಕ್ತ ಆಹಾರ, ನಿದ್ರೆ ಕೂಡ ಇಲ್ಲಿ ಬಹುಮುಖ್ಯ. ಎದೆ, ಕೈಕಾಲುಗಳು ಮತ್ತು ಭುಜದ ಸ್ನಾಯುಗಳನ್ನು ಹುರಿಗಟ್ಟಿಸುವ ಮೂಲಕ ಸುಂದರ ಶರೀರವನ್ನು ಪಡೆಯಬಹುದು.

ಇದಕ್ಕಾಗಿ ಅತ್ಯುತ್ತಮ ವ್ಯಾಯಾಮಗಳು

•ಬಸ್ಕಿ
ತೊಡೆ ಮತ್ತು ಮೀನಖಂಡಗಳ ಸ್ನಾಯುಗಳನ್ನು ಹುರಿಗಟ್ಟಿಸಲು ಬಸ್ಕಿ, ತೂಕದೊಂದಿಗೆ ಬಸ್ಕಿ ನೆರವಾಗುತ್ತದೆ. ಬಸ್ಕಿಯಲ್ಲಿ ಯಾವುದೇ ತೂಕವಿಲ್ಲದೇ ಕೇವಲ ಕೈಗಳನ್ನು ಭೂಮಿಗೆ ಸಮಾನಾಂತರವಾಗಿ ಚಾಚುವ ಮೂಲಕ, ಸರಳ ತೂಕವನ್ನು ಹಿಡಿಯುವ ಮೂಲಕ ಉತ್ತಮ ವ್ಯಾಯಾಮ ದೊರಕುತ್ತದೆ. ತೂಕದೊಂದಿಗಿನ ಬಸ್ಕಿಯಲ್ಲಿ ಮಾತ್ರ ಹೆಚ್ಚಿನ ತೂಕದೊಂದಿಗೆ ನಿಲ್ಲುವ ಮೂಲಕ ತೊಡೆ ಮತ್ತು ಮೀನಖಂಡಗಳ ಸ್ನಾಯುಗಳು ಕೊಂಚ ಹೆಚ್ಚಿನ ಸೆಳೆತ ಪಡೆಯುತ್ತವೆ.

• ಅಲ್ಪದೂರವನ್ನು ಅತಿವೇಗವಾಗಿ ಕ್ರಮಿಸುವುದು
ದೇಹದ ಎಲ್ಲ ಸ್ನಾಯುಗಳಿಗೂ ಪೂರ್ಣ ಪ್ರಮಾಣದ ಸೆಳೆತ ನೀಡಲು ಸ್ಪ್ರಿಂಟ್ ಓಟ ಅತ್ಯುತ್ತಮವಾಗಿದೆ. ಆದರೆ ಈ ಓಟಕ್ಕೂ ಮೊದಲು ಶರೀರ ಸಂಪೂರ್ಣವಾಗಿ ಬೆಚ್ಚಗಾಗಿರುವುದು, ಎಲ್ಲ ಸೆಳೆತದ ವ್ಯಾಯಾಮಗಳನ್ನು ಪೂರ್ಣಗೊಳಿಸಿರುವುದು ಮುಖ್ಯ. ದಿನದ ವ್ಯಾಯಾಮದ ಕೊನೆಯ ಹಂತದಲ್ಲಿ ಈ ಓಟವನ್ನು ಓಡಿ ಶರೀರವನ್ನು ಪೂರ್ಣವಾಗಿ ದಣಿಸಿ ಬಳಿಕ ವಿಶ್ರಾಂತಿ ಪಡೆಯುವುದು ಆರೋಗ್ಯಕರ.

•  ಕಡಿಮೆ ತೂಕವನ್ನು ಬಳಸುವ ವ್ಯಾಯಾಮಗಳು
ಹೆಚ್ಚು ತೂಕವನ್ನು ಬಳಸಿ ಹತ್ತು ಬಾರಿ ಮಾಡುವ ವ್ಯಾಯಾಮಕ್ಕಿಂತ ಕಡಿಮೆ ತೂಕ ಬಳಸಿ ಪ್ರತಿಸಲ ಹತ್ತರಂತೆ ಐದು ಅಥವಾ ಹತ್ತು ಬಾರಿ ಪುನರಾವರ್ತಿಸುವುದರಿಂದ ಸ್ನಾಯುಗಳು ಹೆಚ್ಚು ಹುರಿಗಟ್ಟುತ್ತವೆ.

• ಸರಿಯಾಗಿ ನೀರು ಸೇವಿಸಿ
ದ್ರವ ಆಹಾರ ಮತ್ತು ನೀರನ್ನು ಹೆಚ್ಚು ಸೇವಿಸುವುದರಿಂದ ದೇಹದಾಡ್ಯರ್ ಮತ್ತು ಸ್ನಾಯುಗಳ ಬೆಳವಣಿಗೆ ಸದೃಢವಾಗಿ ಆಗುತ್ತದೆ. ದಿನವಿಡೀ ತುಂಬಾ ನೀರು ಕುಡಿಯಿರಿ. ಇದರಿಂದ ವ್ಯಾಯಾಮದ ವೇಳೆ ನಿರ್ಜಲೀಕರಣವಾಗುವುದು ತಪ್ಪುತ್ತದೆ. ವ್ಯಾಯಾಮದ ವೇಳೆ ಪ್ರತೀ 10- 20 ನಿಮಿಷಕ್ಕೊಮ್ಮೆ ನೀರು ಕುಡಿಯಿರಿ. ನಿರ್ಜಲೀಕರಣವಾದರೆ ಅದು ನಿಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ.

ಸ್ನಾಯುಗಳ ಬೆಳವಣಿಗೆಗೆ ಸೇವಿಸಬೇಕಾದ ಆಹಾರಗಳು
ಕೆಂಪು ಮಾಂಸದಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದೆ. ಇದು ಮಾಂಸಖಂಡಗಳ ಬೆಳವಣಿಗೆಗೆ ಮುಖ್ಯ. ದೇಹವನ್ನು ಕಟ್ಟು ಮಸ್ತಾಗಿಸಲು ಮೊಟ್ಟೆ ಕೂಡ ಮುಖ್ಯ. ವ್ಯಾಯಾಮದೊಂದಿಗೆ ಆಹಾರದಲ್ಲಿ ಪ್ರೋಟೀನ್‌ಗೆ ಹೆಚ್ಚಿನ ಆದ್ಯತೆ ಕೊಟ್ಟಾಗ ಕಟ್ಟುಮಸ್ತಾದ ದೇಹವನ್ನು ಪಡೆಯಲು ಸಾಧ್ಯವಿದೆ.

••ಕಾರ್ತಿಕ್‌ ಚಿತ್ರಾಪುರ

ಟಾಪ್ ನ್ಯೂಸ್

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.