ಪ್ರಪಂಚದ 3ನೇ ಶರ್ಕರಪಿಷ್ಟದ ಮೂಲ ಮರಗೆಣಸು


Team Udayavani, Apr 28, 2017, 11:44 PM IST

Maragenasu-28-4.jpg

ನಮ್ಮ ಅಪ್ಪ- ಅಮ್ಮ, ಅಜ್ಜ- ಅಜ್ಜಿಂದಿರ ಬಾಲ್ಯ ಕಾಲದಲ್ಲಿ ಹೆಚ್ಚಿನ ಮನೆಗಳಲ್ಲಿ ಕಡು ಬಡತನವಿದ್ದಾಗ ಆಹಾರವಾಗಿ ಬಳಸುತ್ತಿದ್ದದ್ದು ಮರಗೆಣಸನ್ನು ಅಂದರೆ ನೀವು ನಂಬಲೇಬೇಕು. 

ಹಸಿವನ್ನು ನೀಗಿಸಲು ಆ ಕಾಲದಲ್ಲಿ ಈ ಬಗೆಯ ಬೇರಿನ ಆಹಾರ ಸಹಾಯ ಮಾಡುತ್ತಿದ್ದುದರ ಜೊತೆಗೆ ಈ ಗೆಣಸಿನ ವಿಪರೀತ ಸೇವನೆ ಕೆಲವೊಂದು ಸಾರಿ ಆರೋಗ್ಯ ಸಮಸ್ಯೆಗೂ ಕಾರಣವಾಗುತ್ತಿತ್ತಂತೆ. ಏನೇ ಆದರೂ ಹೊಟ್ಟೆಗಿಲ್ಲದ ಹೊತ್ತು ನಮ್ಮ ಪ್ರಾಣ ಉಳಿಸಿತ್ತು ಅಂದಿದ್ದಳು ಅಜ್ಜಿ ಮರಗೆಣಸಿನ ಕುರಿತು ವಿವರಿಸುತ್ತ. ಕಾಡು- ಮೇಡುಗಳಲ್ಲಿ ನೈಸರ್ಗಿಕವಾಗೇ ಬೆಳೆಯುವ ಈ ಮರಗೆಣಸು ಅಪಾರ ಪ್ರಮಾಣದ ಶರ್ಕರಪಿಷ್ಟವನ್ನು ಹೊಂದಿದೆ. ಈ ಕಾರಣಕ್ಕಾಗಿಯೇ ಮರ ಗೆಣಸು ಕೆಲವು ದೇಶಗಳಲ್ಲಿ ಪ್ರಮುಖ ಆಹಾರವಾಗಿ – ಖಾದ್ಯವಾಗಿ ಬಳಸಲಾಗುತ್ತಿದೆ.

ಅಮೆರಿಕಾ ಮೂಲ
ಅಂದ ಹಾಗೆ ಈ ಮರಗೆಣಸು ಅಮೆರಿಕಾ ಮೂಲದ ಪೊದೆಯಂತಹ ಸಸ್ಯ. ಪ್ರಪಂಚದ ಮೂರನೇ ಮುಖ್ಯ ಶರ್ಕರಪಿಷ್ಟದ ಮೂಲವಾಗಿರುವ ಮರಗೆಣಸನ್ನು ನೈಜೀರಿಯಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಾರೆ. ಭಾರತದ ಕೇರಳದಲ್ಲೂ ಮರಗೆಣಸನ್ನು ಹೆಚ್ಚಾಗಿ ಆಹಾರವಾಗಿ ಬಳಸಲಾಗುತ್ತದೆ. ಮರ ಗೆಣಸು ಒಂದುರೀತಿಯ ಕಹಿ-ಸಿಹಿ ರುಚಿಯನ್ನು ಒಳಗೊಂಡಿರುವುದರಿಂದ ಇದನ್ನು ಬೇಯಿಸಿ ತಿನ್ನಲು ಮತ್ತು ಚಿಪ್ಸ್‌ ನಂತಹ ಖಾದ್ಯಗಳ ತಯಾರಿಯಲ್ಲಿ ಹೆಚ್ಚಾಗಿ ಬಳಸುತ್ತಾರೆ.

ಪೌಷ್ಟಿಕಾಂಶ ಅಪಾರ
ಅತೀ ಹೆಚ್ಚಿನ ಪ್ರಮಾಣದಲ್ಲಿ ಕಾರ್ಬೋಹೈಡ್ರೇಟನ್ನು ಹೊಂದಿರುವ ಆಹಾರಗಳ ಸಾಲಿನಲ್ಲಿ ಅಕ್ಕಿ ಮತ್ತು ಮೆಕ್ಕೆ ಜೋಳಗಳು ಸ್ಥಾನವನ್ನು ಪಡೆದಿದ್ದರೆ, ಮರಗೆಣಸಿಗೆ ಈ ಸಾಲಿನಲ್ಲಿ ಪದಕ ಪಟ್ಟಿಯಲ್ಲಿ ಕಂಚು ಲಭಿಸುತ್ತದೆ. ಮರಗೆಣಸು ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಪ್ರಮುಖ ಆಹಾರವಾಗಿ ಅರ್ಧ ಬಿಲಿಯನ್‌ ಜನರಿಗೆ ಮೂಲಭೂತ ಆಹಾರವಾಗಿ ಬಳಸ್ಪಡುತ್ತಿದೆ. ನೈಜೀರಿಯಾ ದೇಶವೇ ಮರಗೆಣಸಿನ ಪ್ರಥಮ ಸ್ಥಾನಿಗ ಉತ್ಪಾದಕ ದೇಶವಾದರೆ, ಥೈಲ್ಯಾಂಡ್‌ ದೇಶ ಒಣಗಿದ ಮರಗೆಣಸಿನ ಅತಿದೊಡ್ಡ ರಫ್ತುದಾರನಾಗಿದೆ. ಮನಿಹಾಟ್‌ ಎಸ್ಕಾಲೆಂಟ (Manihot esculenta) ಎಂದು ವೈಜ್ಞಾನಿಕವಾಗಿ ಹೆಸರಿಸಲಾಗುವ  ಮರಗೆಣಸಿನಲ್ಲಿ  ಶಕ್ತಿ 160 ಕ್ಯಾಲರಿ, ಕಾರ್ಬೋಹೈಡ್ರೇಟ್‌ 38.06 ಗ್ರಾಂ., ಪ್ರೊಟೀನ್‌ 1.36 ಗ್ರಾಂ., ನಾರಿನಾಂಶ 1.8 ಗ್ರಾಂ.,  ವಿಟಮಿನ್‌ ಸಿ 20.06 ಮಿ.ಗ್ರಾಂ., ಸೋಡಿಯಂ 14 ಮಿ.ಗ್ರಾಂ., ಕ್ಯಾಲ್ಷಿಯಂ 16 ಮಿ.ಗ್ರಾಂ., ಕಬ್ಬಿಣಾಂಶ 0.27 ಮಿ.ಗ್ರಾಂ. ಇನ್ನಿತರ ಪೋಷಕಾಂಶಗಳನ್ನು ಒಳಗೊಂಡಿದೆ.

– ಸದಾ ಸಕಲೇಶಪುರ

ಟಾಪ್ ನ್ಯೂಸ್

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.