ಹೀಟರ್‌ ಬಳಕೆ ಆರೋಗ್ಯಕ್ಕೆ ಅಪಾಯ


Team Udayavani, Feb 5, 2019, 4:56 AM IST

yoga-2.jpg

ಚಳಿಗಾಲ ಬಂದರೆ ಸಾಕು ಜನರು ಬೆಚ್ಚಗಿರಲು ನೂರಾರು ಮಾರ್ಗಗಳನ್ನು ಹುಡುಕುವುದು ಸಾಮಾನ್ಯ. ಹಿಂದಿನ ಕಾಲದ ಹಳ್ಳಿ ಮನೆಗಳಾದರೆ ಒಲೆ ಮುಂದೆ ಕುಳಿತು ಚಳಿಯಿಂದ ಮುಕ್ತಿ ಪಡೆಯುವುದನ್ನು ಕಾಣಬಹುದಾಗಿತ್ತು. ಆದರೆ ಆಧುನಿಕತೆ ಬೆಳೆಯುತ್ತಿದ್ದಂತೆ ವಿದ್ಯುತ್‌ ಹೀಟರ್‌ಗಳು ಅನೇಕರ ಮನೆ ಸೇರಿವೆ. ಹೀಟರ್‌ಗಳ ಮುಂದೆ ಕುಳಿತರೆ ಸಾಕು ಬೆಚ್ಚಗಿನ ಅನುಭವವನ್ನು ಒಮ್ಮೆಲೇ ಸಿಗುತ್ತದೆ. ಕೋಣೆ ತುಂಬೆಲ್ಲ ಬಿಸಿ ಹವೆ ನೀಡುವ ಹೀಟರ್‌ಗಳ ಮುಂದೆ ಗಂಟೆಗಟ್ಟಲೆ ಕುಳಿತುಕೊಳ್ಳುವ ಹವ್ಯಾಸ ಅನೇಕರಿಗಿದೆ. ಆದರೆ ದೇಹವನ್ನು ಬೆಚ್ಚಗೆ ಮಾಡುವ ಹೀಟರ್‌ಗಳು ದೇಹಾರೋಗ್ಯದ ಮೇಲೆ ಯಾವ ರೀತಿ ವ್ಯತಿರಿಕ್ತ ಪರಿಣಾಮ ಬೀರುತ್ತವೆ ಎಂಬುವುದು ಹೆಚ್ಚಿನವರಿಗೆ ತಿಳಿದಿಲ್ಲ.

ಆಧುನಿಕ ಕಾಲದ ತಂತ್ರಜ್ಞಾನಗಳು ಒಂದು ಕಡೆ ಉಪಕಾರಿಯಾದರೆ, ಇನ್ನೊಂದೆಡೆ ಆರೋಗ್ಯಕ್ಕೆ ಮಾರಕವಾಗಿವೆ. ಬೇಸಗೆ ಕಾಲದಲ್ಲಿ ಬಳಸುವ ಎಸಿಗಳಂತೆ ಚಳಿಗಾಲದಲ್ಲಿ ಚಳಿಯಿಂದ ರಕ್ಷಿಸಲು ಬಳಸುವ ಹೀಟರ್‌ಗಳೂ ಕೂಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಹೀಟರ್‌ಗಳ ಬಳಕೆಯಿಂದ ಆರೋಗ್ಯಕ್ಕೆ ಆಗುವ ಸಮಸ್ಯೆಗಳೇನು? ಎನ್ನುವ ಮಾಹಿತಿ ಇಲ್ಲಿದೆ.

ಉಸಿರಾಟದ ತೊಂದರೆ

ಚಳಿಗಾಲದ ಸಮಯದಲ್ಲಿ ಹೀಟರ್‌ಬಳಸುವುದರಿಂದ ಅಸ್ತಮಾ, ಉಸಿರಾಟದ ತೊಂದರೆ ಅನುಭವಿಸುತ್ತಿರುವವರಿಗೆ ಅದರ ಶಾಖ ಅಪಾಯಕಾರಿ. ಇದರ ಜತೆಗೆ ನ್ಯೂಮೋನಿಯಾ, ತಲೆನೋವಿನ ಸಮಸ್ಯೆ ಇರುವವರಿಗೂ ಇದು ಮಾರಕ.

ಗಾಳಿ ಹಾಗೂ ದೇಹದ ತೇವಾಂಶ

ವಿದ್ಯುತ್‌ಚಾಲಿತ ಹೀಟರ್‌ಗಳು ನೈಸರ್ಗಿಕ ಗಾಳಿಯಲ್ಲಿರುವ ತೇವಾಂಶವನ್ನು ಕಡಿಮೆಗೊಳಿಸುತ್ತವೆ. ನೈಸರ್ಗಿಕ ಗಾಳಿ ಹಾಗೂ ತ್ವಚೆ ಒಣಗಿ ತುರಿಕೆಗೆ ಕಾರಣವಾಗುತ್ತದೆ. ಹೀಗಾಗಿ ಹೀಟರ್‌ಗಳ ಬಳಕೆ ಆದಷ್ಟು ಕಡಿಮೆ ಮಾಡುವುದು ಒಳಿತು. ತಣ್ಣೀರಿನಲ್ಲಿ ಸ್ನಾನ ಮಾಡಿದ ಅನಂತರ ಅಥವಾ ಚಳಿಯಿಂದ ರಕ್ಷಣೆ ನೀಡುವ ಹೀಟರ್‌ ದೇಹದ ತೇವಾಂಶವನ್ನು ಹೀರಿಕೊಳ್ಳುತ್ತದೆ.

ಚರ್ಮದ ಸಮಸ್ಯೆ

ಹೆಚ್ಚು ಹೀಟರ್‌ಗಳನ್ನು ಬಳಸುವುದರಿಂದ ಚರ್ಮದ ಜೀವಕೋಶಗಳ ಮೇಲೆ ಪರಿಣಾಮವನ್ನು ಬೀರುತ್ತದೆ. ಇದು ಚರ್ಮದ ಕಾಯಿಲೆಗಳಿಗೆ ಕಾರಣವಾಗಬಹುದು. ಚರ್ಮ ಹೆಚ್ಚು ಮೃದುವಾಗಿರುವುದರಿಂದ ಬಿಸಿ ಗಾಳಿ ಯನ್ನು ತಡೆದುಕೊಳ್ಳುವ ಶಕ್ತಿ ಕಡಿಮೆ ಇರುತ್ತದೆ.

ದೇಹದ ತಾಪಮಾನ

ಹೀಟರ್‌ಗಳ ಬಳಕೆಯಿಂದ ಕೋಣೆಯ ತುಂಬೆಲ್ಲ ಉಷ್ಣಾಂಶ ಹೆಚ್ಚಾಗಿ ಅಲ್ಲಿನ ತಾಪಮಾನದಲ್ಲಿ ವ್ಯತ್ಯಾಸ ಗೊಂಡು ಆರೋಗ್ಯದ ಮೇಲೆ ಪರಿಣಾಮ ಉಂಟಾಗ ಬಹುದು.

ಸುಟ್ಟಗಾಯಗಳು

ಹೀಟರ್‌ಗಳ ಮುಂದೆ ಕೈ ಚಾಚಿ ನಿಂತುಕೊಳ್ಳುವ ಅಭ್ಯಾಸ ಅನೇಕ ಮಂದಿಗಿದೆ. ಈ ಸಂದರ್ಭದಲ್ಲಿ ಹೀಟರ್‌ ಕೈಗೆ ತಾಗುವ ಸಂಭವ ಹೆಚ್ಚು. ಇದರಿಂದ ಸುಟ್ಟಗಾಯಗಳಾಗಬಹುದು. 

••ಧನ್ಯ ಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.