ಉತ್ತಮ ಆರೋಗ್ಯಕ್ಕಾಗಿ ತಪ್ಪದೇ ಪಾಲಿಸಿ ಕೆಲವು ನಿಯಮ


Team Udayavani, Jan 22, 2019, 8:22 AM IST

sudi-5.jpg

ಆರೋಗ್ಯವಾಗಿರಬೇಕು ಎಂಬುದು ಎಲ್ಲರ ಆಸೆ. ಆದರೆ ಅದಕ್ಕಾಗಿ ಏನೇನೆಲ್ಲ ಕಸರತ್ತು ಮಾಡುತ್ತೇವೆ. ಆದರೆ ಪ್ರಯೋಜನವಾಗುವುದಿಲ್ಲ. ಒಂದಲ್ಲ ಒಂದು ರೀತಿಯ ಕಾಯಿಲೆ ಹೇಳದೇಕೇಳದೆ ಬಂದೇ ಬರುತ್ತದೆ. ಆರೋಗ್ಯವಾಗಿರಬೇಕು ಎಂದಾದರೆ ಕೆಲವೊಂದು ಅಂಶಗಳತ್ತ ಗಮನಹರಿಸುವುದು ಬಹುಮುಖ್ಯ.

1 ಬಾಯಿಯ ನೈರ್ಮಲ್ಯ

ಬಾಯಿಯ ನೈರ್ಮಲ್ಯ ಕಾಪಾಡಿಕೊಳ್ಳುವ ಮೂಲಕವೂ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು. ದಿನಕ್ಕೆ ಎರಡು ಬಾರಿ ಹಲ್ಲು ಉಜ್ಜುವುದರಿಂದ ಬಾಯಿಯನ್ನು ಸ್ವಚ್ಛವಾಗಿರಿಸಬಹುದು. ಬಾಯಿ ಹುಣ್ಣು, ವಾಸನೆಯಿಂದ ಮುಕ್ತಿ ಪಡೆಯಬಹದು.

2 ಉಪಾಹಾರ ತ್ಯಜಿಸದಿರಿ

ಬೆಳಗಿನ ಉಪಾಹಾರ ತ್ಯಜಿಸುವುದರಿಂದ ಅನೇಕ ಅರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಆ್ಯಸಿಡಿಟಿ, ಗ್ಯಾಸ್‌ಟ್ರಬಲ್‌ ಉಂಟಾಗಲು ಇದು ಮುಖ್ಯ ಕಾರಣ. ಮೆದುಳಿನ ಸಮಸ್ಯೆಯನ್ನು ಇದು ಉಂಟುಮಾಡುತ್ತದೆ. ಬೆಳಗಿನ ಉಪಾಹಾರವೂ ಪೌಷ್ಟಿಕತೆಯಿಂದ ಕೂಡಿರಬೇಕು.

3 ಆಧ್ಯಾತ್ಮಿಕತೆ

ನಾನಾ ಅನಾರೋಗ್ಯ ಸಮಸ್ಯೆಗಳಿಗೆ ಆಧ್ಯಾತ್ಮದಿಂದ ಪರಿಹಾರ ಸಿಗುತ್ತದೆ. ಪ್ರಾರ್ಥನೆಯಿಂದ ಮಾನಸಿಕ ನೆಮ್ಮದಿ ಸಿಗುತ್ತದೆ. ಇದರೊಂದಿಗೆ ಯೋಗ, ಪ್ರಾಣಾ ಯಾಮ ನಿರಂತರ ಅಭ್ಯಾಸ ಮಾಡಿದರೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಡಬಹುದು.

4 ನೀರು

ನಮ್ಮ ದೇಹಕ್ಕೆ ಶೇ. 70ರಷ್ಟು ನೀರಿನ ಅಗತ್ಯವಿದೆ. ದಿನಕ್ಕೆ ಕನಿಷ್ಠ 3 ಲೀಟರ್‌ ನೀರನ್ನು ಕುಡಿಯಬೇಕು. ಹೀಗಾಗಿ ಹೆಚ್ಚು ನೀರು ಕುಡಿದು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

5 ಮೂಳೆಗಳ ರಕ್ಷಣೆ

ಮೂಳೆಗಳ ಆರೋಗ್ಯಕ್ಕೆ ಕ್ಯಾಲ್ಸಿಯಂ ಪಾತ್ರ ಪ್ರಮುಖವಾದದ್ದು. ಮೂಳೆಗಳ ಸವೆತ ಅಪಾಯಕಾರಿ. ಪ್ರತಿ ನಿತ್ಯವೂ ಕ್ಯಾಲ್ಸಿಯಂಯುಕ್ತ ಆಹಾರಗಳಾದ ಹಾಲು, ಮೊಸರು ಸೇವನೆ ಮಾಡುವುದರಿಂದ ಮೂಳೆಗಳನ್ನು ರಕ್ಷಿಸಬಹುದು. ಮೂಳೆಗಳ ಸಾಂದ್ರತೆ ಅಥವಾ ಸವೆತ 30 ವರ್ಷದಿಂದ ಆರಂಭವಾಗುತ್ತದೆ. ಮೂಳೆಗಳ ರಕ್ಷಣೆಗಾಗಿ ದಿನಕ್ಕೆ 200 ಮಿಲಿಗ್ರಾಂ ಕ್ಯಾಲ್ಸಿಯಂನ ಅಗತ್ಯವಿದೆ.

6 ದಿನಕ್ಕೊಂದು ಟೋಮೇಟೋ

ಟೋಮೆಟೋ ಕ್ಯಾನ್ಸರ್‌ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿದೆ. ಇದರಲ್ಲಿ ವಿಟಮಿನ್‌ ಸಿ ಹೇರಳವಾಗಿದೆ. ಇದನ್ನು ಹಸಿಯಾಗಿ ಸಲಾಡ್‌ ರೂಪದಲ್ಲಿ ತಿನ್ನುವುದರಿಂದ ದೇಹಕ್ಕೆ ಹೆಚ್ಚಿನ ಪೌಷ್ಟಿಕಾಂಶ ದೊರೆಯುತ್ತದೆ.

7 ಹಸುರು ತರಕಾರಿ

ದೇಹಕ್ಕೆ ಎಲ್ಲ ವಿಟಮಿನ್‌ ಅಂಶವೂ ಅಗತ್ಯ. ಅದರಲ್ಲೂ ಮಿಟವಿನ್‌ ಎ ಅತಿ ಮುಖ್ಯ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಕ್ಕಾಗಿ ಹಸುರು ಮತ್ತು ಹಳದಿ ತರಕಾರಿ ಸೇವನೆ ಬಹುಮುಖ್ಯ.

8 ನಗು

ಮಾನಸಿಕವಾಗಿ ಒತ್ತಡ ರಹಿತವಾಗಿದ್ದರೆ ಯಾವುದೇ ಕಾಯಿಲೆಗಳು ನಿಮ್ಮ ಹತ್ತಿರ ಸುಳಿಯುವುದಿಲ್ಲ. ಹೀಗಾಗಿ ನಗು ಸದಾ ನಿಮ್ಮ ಮುಖದಲ್ಲಿರಲಿ. ನಗುವಿಗೆ ಅಲರ್ಜಿಯನ್ನು ಕಡಿಮೆ ಮಾಡುವ ಶಕ್ತಿ ಇದೆ.

••ಧನ್ಯಾ ಬೋಳಿಯಾರ್‌

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.