ಸಕ್ಕರೆ ಪ್ರಮಾಣ ನಿಯಂತ್ರಿಸುವ ತರಕಾರಿಗಳು


Team Udayavani, Jul 16, 2019, 5:08 AM IST

kiru-leakana-1

ಕಣ್ಣ ಮುಂದೆ ಜಾಹಂಗೀರು, ಜಿಲೇಬಿ ಕೈಬೀಸಿ ಕರೆಯುತ್ತಿದ್ದರೂ ನಾಲಗೆ ಚಪಲ ಬಿಡುತ್ತಿಲ್ಲ. ತಿನ್ನದಿದ್ದರೆ ನಾಲಿಗೆಗೆ ಮೋಸ ತಿಂದರೆ ದೇಹವೇ ಕೈಲಾಸ ಎಂದು ಮುದಿವಯಸ್ಸಿನ ಸಾಕಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿದ್ದಾರೆ. ಮಧುಮೇಹ ಬಂದು ಬದುಕೇ ಕಹಿ ಅನಿಸಿದ ಅದೆಷ್ಟೋ ಮಂದಿ ಇದ್ದಾರೆ. 2015ರ ವಿಶ್ವ ಆರೋಗ್ಯ ಸಂಸ್ಥೆಯ ವರದಿಯಂತೆ ಭಾರತದಲ್ಲಿ ಶೇ.69.2 ಮಿಲಿಯನ್‌ ನಷ್ಟು ಮಂದಿ ಮಧುಮೇಹಿಗಳಿದ್ದಾರೆ. ದೇಹದ ಸಕ್ಕರೆ ಕಾಯಿಲೆಗೆ ಔಷಧಗಳು ಮಾತ್ರವೇ ಪರಿಹಾರವಾಗಿರದೇ ದಿನನಿತ್ಯದ ಆಹಾರ ಸೇವನೆಯಲ್ಲಿ ವಹಿಸುವ ಕಾಳಜಿಯು ಮುಖ್ಯ. ತರಕಾರಿಗಳ ಸೇವನೆ ಮಧುಮೇಹಿಗಳಿಗೆ ರಾಮಬಾಣವಿದ್ದಂತೆ.

ಮುಳ್ಳು ಸೌತೆ
ಅತಿ ಹೆಚ್ಚು ನೀರಿನ ಅಂಶ ಹೊಂದಿರುವ ಮುಳ್ಳು ಸೌತೆಕಾಯಿ ರಕ್ತದಲ್ಲಿ ಇನ್ಸುಲಿನ್‌ ಮಟ್ಟವನ್ನು ಸಮತೋಲನದಲ್ಲಿರಿಸುತ್ತದೆ. ರಕ್ತಪರಿಚಲನೆಗೆ ನೆರವಾಗುವ ಸೌತೆಕಾಯನ್ನು ಸಲಾಡ್‌ ಅಥವಾ ಮೊಸರಿನೊಂದಿಗೆ ಸೇವಿಸಿದರೆ ಸಕ್ಕರೆ ಕಾಯಿಲೆ ನಿಯಂತ್ರಣವಾಗುತ್ತದೆ.

ಬೆಂಡೆಕಾಯಿ
ಇದು ರಕ್ತದ ಕಾರ್ಟಿಸೋಲ್‌ ಮಟ್ಟವನ್ನು ಕಡಿಮೆ ಮಾಡಿ ದೇಹ ಸಮಸ್ಥಿತಿಯಲ್ಲಿಡುತ್ತದೆ. ಇದನ್ನು ಬೇಯಿಸಿ ಪಲ್ಯ ಮಾಡಬಹುದು ಅಥವಾ ಸ್ವಲ್ಪ ಹುರಿದು ಹಾಗೆ ಕೂಡಾ ಸೇವಿಸಬಹುದು.

ಹಾಗಲಕಾಯಿ
ಸಕ್ಕರೆ ಕಾಯಿಲೆಗೆ ರಾಮಬಾಣವೆಂದು ಹಾಗಲಕಾಯಿಯನ್ನು ಕರೆಯುತ್ತಾರೆ. ಹೆಚ್ಚಿದ ಹಾಗಲಕಾಯಿಯನ್ನು ಉಗುರು ಬೆಚ್ಚಗಿನ ನೀರಿನಲ್ಲಿ ನೆನೆಸಿ ರುಬ್ಬಿ ಇಂಗಿಸಿದ ಭಾಗದ ಸೇವನೆ ಪ್ರತಿದಿನ ಮಾಡಿದರೆ ತಿಂಗಳೊಳಗೆ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ.

ಕುಂಬಳಕಾಯಿ
ರೋಗ ನಿರೋಧಕ ಶಕ್ತಿಯ ಅಂಶವು ಕುಂಬಳಕಾಯಿಯಲ್ಲಿದೆ. ಇದು ಇನ್ಸುಲಿನ್‌ ಮಟ್ಟವನ್ನು ನಿಯಂತ್ರಣಕ್ಕೆ ತಂದು ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ತರಲು ಸಹಕಾರಿ. ಇದರ ಸಾರು ಅಥವಾ ಉಪ್ಪಿನೊಂದಿಗೆ ಬೇಯಿಸಿದ ಆಹಾರವನ್ನು ಸೇವಿಸಬಹುದಾಗಿದೆ.

ಮೂಲಂಗಿ
ರುಚಿ ಮತ್ತು ವಾಸನೆಯಲ್ಲಿ ಮೂಲಂಗಿ ಜನಸಾಮಾನ್ಯರಿಂದ ದೂರ ಉಳಿದಿದೆ. ದಿನಕ್ಕೆ ಒಂದು ಬಾರಿ ಪಲ್ಯ, ಸಾಂಬಾರು, ಚಟ್ನಿ, ಉಪ್ಪಿನಕಾಯಿ ಅಥವಾ ಹಸಿಯಾಗಿಯೂ ಸೇವಿಸಿ ಸಕ್ಕರೆ ಅಂಶವನ್ನು ನಿಯಂತಿಸಬಹುದು.

ಕೆಲವೊಂದು ಆಹಾರ ಸೇವನಯಲ್ಲಿ ಮಧುಮೇಹಿಗಳು ದೂರ ಇರುವುದೇ ಒಳ್ಳೆಯದು.ಆಲೂಗಡ್ಡೆ, ಒಣದ್ರಾಕ್ಷಿ, ವೈಟ್‌ ರೈಸ್‌ ಮುಂತಾದ ಆಹಾರ ಡಯಾಬೀಟಿಸ್‌ ಪೀಡಿತರಿಗೆ ಮಾರಕವಾಗಿದ್ದು ನುಗ್ಗೆಕಾಯಿ, ನವಿಲು ಕೊಸು, ತೊಂಡೆಕಾಯಿ, ಬೀನ್ಸ್‌, ಬೊÅಕೊಲಿ, ಕೊಸು ಗಡ್ಡೆ ಸೇವನೆ ಸಕ್ಕರೆ ಕಾಯಿಲೆಗೆ ಉತ್ತಮ ಪರಿಹಾರವಾಗಿದೆ.

ಟೊಮೇಟೊ
ಇಂದಿನ ಬಹುತೇಕ ಅಡುಗೆ ಮನೆಗಳಲ್ಲಿ ಟೊಮೆಟೊ ಇ¨ªೆ ಇರುತ್ತದೆ. ಇದರಲ್ಲಿ ಕಡಿಮೆ ಕಾಬೊìಹೈಡ್ರೇಟ್‌ ಮತ್ತು ಕಡಿಮೆ ಕ್ಯಾಲೋರಿಗಳಿರುವ ಕಾರಣ ಸಕ್ಕರೆಯ ಪ್ರಮಾಣ ಕಡಿಮೆ ಮಾಡುತ್ತದೆ.

ಸೊಪ್ಪುಗಳು
ಹಸಿರು ಎಲೆ ತರಕಾರಿ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮೆಂತ್ಯೆ, ಪಾಲಕ್‌ , ನುಗ್ಗೆ ಸೊಪ್ಪುಗಳಲ್ಲಿ ಸಾಕಷ್ಟು ಪ್ರಮಾಣದ ವಿಟಮಿನ್‌ ಗಳು ಲಭ್ಯವಾಗಲಿದೆ. ಸೊಪ್ಪಿನ ಬೇಯಿಸಿದ ನೀರು ಸೇವನೆ ಸಕ್ಕರೆ ಕಾಯಿಲೆ ನಿಯಂತ್ರಣ ಸಾಧಿಸಲು ಸಾಧ್ಯವಾಗುತ್ತದೆ.

ಕ್ಯಾರೆಟ್‌
ಕ್ಯಾರೆಟ್‌ನಲ್ಲಿ ವಿಟಮಿನ್‌ ಎ ಮತ್ತು ನಾರಿನಾಂಶ ವಿದ್ದು ಸಲಾಡ್‌, ಸೂಪ್‌ (ಹಸಿ ಅಥವಾ ಬೇಯಿಸಿ) ಸೇವಿಸಬಹುದು. ಇದರಲ್ಲಿ ಸಕ್ಕರೆ ಪ್ರಮಾಣ ತೀರಾ ಕಡಿಮೆ ಇರುವುದರಿಂದ ಮಧು ಮೇಹಿಗಳ ಸಕ್ಕರೆ ಅಂಶದ ನಿಯಂತ್ರಣ ಸಾಧ್ಯ.

-  ರಾಧಿಕಾ ಕುಂದಾಪುರ


ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.