ವಾಯುಮಾಲಿನ್ಯ ನಿಯಂತ್ರಣಕ್ಕೆ ಪಾಚಿ ಬಳಕೆ ಅಗತ್ಯ


Team Udayavani, Mar 5, 2020, 4:19 AM IST

ವಾಯುಮಾಲಿನ್ಯ ನಿಯಂತ್ರಣಕ್ಕೆ ಪಾಚಿ ಬಳಕೆ ಅಗತ್ಯ

ವಾಯುಮಾಲಿನ್ಯವು ಇಂದು ದೇಶವನ್ನು ಅನೇಕ ಸಮಸ್ಯೆಗಳಿಗೀಡು ಮಾಡುತ್ತಿದೆ. ಇದರಿಂದ ಪರಿಸರವು ಹಾಳಾಗುತ್ತಿದೆ ಮತ್ತು ಮನುಕುಲದ ಆರೋಗ್ಯದ ಮೇಲೆ ಕೂಡ ಪ್ರತಿಕೂಲ ಪರಿಣಾಮ ಬೀರಿದೆ. ಹೀಗಾಗಿ ಆಡಳಿತ ಸಹಿತ ಸಾಮಾನ್ಯ ಜನರು ಕೂಡ ವಾಯು ಮಾಲಿನ್ಯ ನಿಯಂತ್ರಣಕ್ಕೆ ಹಲವಾರು ಮಾರ್ಗೋಪಾಯಗಳನ್ನು ಹುಡುಕುತ್ತಿದ್ದಾರೆ.

ನಗರೀಕರಣದಿಂದ ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಇವುಗಳು ಉಗುಳುವ ಹೊಗೆಯಿಂದಾಗಿ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಇದಕ್ಕಾಗಿ ಆಡಳಿತ ವ್ಯವಸ್ಥೆಯೂ ಕೂಡ ಹಲವಾರು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಜರಗಿಸಿದರೂ ಕೂಡ ಏತನ್ಮಧ್ಯೆ ವಾಯು ಮಾಲಿನ್ಯದ ಹೆಚ್ಚಳವಾಗುತ್ತಿದೆ ವಿನಾ ಕಡಿಮೆಯಾಗುತ್ತಿಲ್ಲ. ದೇಶದ ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರುನಂತಹ ಮಹಾನಗರಗಳಲ್ಲಿ ಮಾಲಿನ್ಯ ಪ್ರಮಾಣವನ್ನು ಗಮನಿಸಬಹುದು. ಇದಕ್ಕೆ ನಾವು ಸೂಕ್ತವಾದ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪಾಚಿಯ ಬಳಕೆಯಿಂದಾಗಿ ವಾಯು ಮಾಲಿನ್ಯ ನಿಯಂತ್ರಿಸಬಹುದು ಎಂಬುದು ಸಂಶೋಧನೆಯ ಮೂಲಕ ತಿಳಿದು ಬಂದಿದೆ. ಪಾಚಿಯನ್ನು ಸಮರ್ಪಕ, ಪರಿಣಾಮಕಾರಿಯಾಗಿ ಬಳಕೆ ಮಾಡಿದರೆ ನಾವು ಮಾಲಿನ್ಯ ನಿಯಂತ್ರಿಸಬಹುದಾಗಿದೆ.

ಯಾರಿಂದ ಸಂಶೋಧನೆ ?
ಪಾಚಿಯಿಂದ ವಾಯು ಮಾಲಿನ್ಯವನ್ನು ನಿಯಂತ್ರಿಸಬಹುದು ಎಂದು ಯುವ ಸಂಶೋಧಕ ಕೀರ್ತನ್‌ ಶಂಕರ್‌ ಮತ್ತು ಗಗನ್‌ ಗೌಡ ಎಂಬ ಇಬ್ಬರು ಸಂಶೋಧಕರು ಇದನ್ನು ಸಂಶೋಧಿಸಿದರು. ಇವರು ಪ್ರಮುಖ ನಗರಗಳಿಗೆ ಬಾಧಿಸುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸುವುದಕ್ಕಾಗಿಯೇ ಗ್ರೀನ್‌ ಸಿಟಿ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂಬುದನ್ನು ಅರಿತು, ಇದಕ್ಕಾಗಿ ಪಾಚಿಯಿಂದ ಪರಿಹಾರ ಕಂಡುಕೊಂಡಿದ್ದಾರೆ. ಗಿಡಗಳ ರೂಪದಲ್ಲಿ ಬೆಳೆಸುವುದು ಅಥವಾ ನಮ್ಮ ಮನೆಗಳ ಗೋಡೆಗಳಿಗೆ ಪಾಚಿಯನ್ನು ಅಂಟಿಸುವುದರಿಂದ ಇದು ವಾಯು ಮಾಲಿನ್ಯಕ್ಕೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂಬುದನ್ನು ತಮ್ಮ ಸಂಶೋಧನೆಯ ಮೂಲಕ ಅವರು ತಿಳಿಸಿದ್ದಾರೆ.

ಎಲ್ಲೆಲ್ಲಿ ಪ್ರಯೋಗ
ಅಮೆರಿಕ, ಬರ್ಲಿನ್‌ ದೇಶಗಳಲ್ಲಿ ಈ ಮಾದರಿಯ ಪಾಚಿ ಮರಗಳಲ್ಲಿ ಸಾರ್ವಜನಿಕ ಪ್ರದೇಶಗಳನ್ನು ನೆಡಲಾಗುತ್ತದೆ. ಇದರಿಂದ ವಾಯು ಮಾಲಿನ್ಯ ನಿಯಂತ್ರಿಸಲಾಗುತ್ತದೆ. ಈ ಮಾದರಿಯನ್ನು ನಾವು ನಮ್ಮ ನಗರಗಳಲ್ಲಿ ಅಳವಡಿಸಬೇಕಿದೆ ಅಷ್ಟೇ. ಈಗಾಗಲೇ ಸ್ಮಾರ್ಟ್‌ ಸಿಟಿ ಪಟ್ಟಿಯಲ್ಲಿರುವ ನಮ್ಮ ಮಂಗಳೂರು ಸ್ವತ್ಛ ಮಂಗಳೂರ ಮಾಡಲು ಹಲವಾರು ಪ್ರಯೋಗಗಳನ್ನು ಮಾಡಲಾಗುತ್ತಿದ್ದು ಪಾಚಿ ಮರಗಳಿಗೆ ಆದ್ಯತೆ ನೀಡುವ ಮೂಲಕ ನಾವು ವಾಯು ಮಾಲಿನ್ಯ ನಿಯಂತ್ರಣಕ್ಕೆ ಪಣ ತೊಡಬೇಕು.

ಪಾಚಿ ಗಿಡಗಳಿಂದ ಹೇಗೆ ಕಾರ್ಯ ನಿರ್ವಹಣೆ
ನೈಸರ್ಗಿಕ ಪಾಚಿ ಗಿಡಗಳನ್ನು ನೆಡುವುದರಿಂದ ಇವು ಕಾರ್ಬನ್‌ ಡೈ ಆಕ್ಸೆ„ಡ್‌, ಧೂಳಿನ ಕಣಗಳನ್ನು ನಿಯಂತ್ರಿಸುತ್ತವೆ . ಅಲ್ಲದೇ ಕಾರ್ಬನ್‌ ಡೈ ಆಕ್ಸೆ„ಡ್‌ನ್ನು ಆಮ್ಲಜನಕವಾಗಿ ಪರಿವರ್ತಿಸುವಲ್ಲಿ ಪಾಚಿಗಳೂ ಪ್ರಮುಖವಾಗಿ ಕಾರ್ಯನಿರ್ವಹಿ ಸುತ್ತವೆ ಎಂದು ಸಂಶೋಧನೆಯಲ್ಲಿ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ ಇದು ನಮ್ಮ ನಗರಗಳಿಗೆ ಪೂರಕ ಯೋಜನೆಯನ್ನು ಸಿದ್ಧಮಾಡಬಹುದಾಗಿದೆ.

ನಾವೇನು ಮಾಡಬಹುದು?
ವಾಯು ಮಾಲಿನ್ಯ ನಿಯಂತ್ರಣಕ್ಕೆ ನಾವೇನು ಮಾಡಬಹುದು ಎಂದಾಗ ನಮ್ಮಿಂದಲೇ ಮಾಲಿನ್ಯವಾಗುವಾಗ ಅದರ ನಿಯಂತ್ರಣ ಕೂಡ ನಮ್ಮಿಂದಲೇ ಆಗಬೇಕಿದೆ. ಈ ಕಾರಣಕ್ಕಾಗಿ ನಾವು ಪಾಚಿಯನ್ನು ಹೆಚ್ಚಿನ ರೀತಿಯಲ್ಲಿ ಬಳಕೆ ಮಾಬೇಕಾಗುತ್ತದೆ. ಅದಕ್ಕಾಗಿ ನೈಸರ್ಗಿಕ ಪಾಚಿ ಮರಗಳನ್ನು ಕೂಡ ನಾವು ಬೆಳೆಸಬೇಕು. ನಮ್ಮ ಮನೆ, ರೆಸ್ಟೋರೆಂಟ್‌ ಮತ್ತು ಬಹುಮಹಡಿ ಕಟ್ಟಡಗಳನ್ನು ಕಟ್ಟುವಾಗ ಗೋಡೆಗಳಿಗೆ ಪಾಚಿ ಬಳಕೆ ಮಾಡುವುದು ಒಳಿತು ಎಂಬುದು ಕಾಳಜಿಯ ಅಭಿಪ್ರಾಯ. ಇದಕ್ಕೆ ನಾವು ಪಣತೊಡಬೇಕಿದೆ ಅಷ್ಟೇ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.