ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ
Team Udayavani, Mar 8, 2020, 4:14 AM IST
ನಗರದ ಮಂದಿ ಶುಚಿತ್ವಕ್ಕೆ ಮತ್ತಷ್ಟು ಮಹತ್ವ ನೀಡಬೇಕಾಗಿದೆ. ನಗರವು ಈ ಹಿಂದೆ ಶುಚಿತ್ವಕ್ಕೆ ಪ್ರಶಸ್ತಿಯನ್ನು ಪಡೆದುಕೊಂಡಿತ್ತು. ಆದರೆ, ನಗರದ ಒಳಹೊಕ್ಕು ನೋಡಿದರೆ, ಅಲ್ಲಲ್ಲಿ ಕಸದ ರಾಶಿ ಇನ್ನೂ ಗೋಚರಿಸುವುದು ಸ್ಪಷ್ಟ. ಪ್ರಮುಖವಾಗಿ ಸಣ್ಣ ಪುಟ್ಟ ಅಂಗಡಿಗಳ ಎದುರು ಅನಗತ್ಯವಾಗಿರುವ ಕಸಗಳನ್ನು ಅಲ್ಲಲ್ಲಿ ರಸ್ತೆ ಬದಿಗಳಲ್ಲಿ ಎಸೆಯುವುದನ್ನು ಕಾಣಬಹುದು.
ಪ್ಲಾಸ್ಟಿಕ್ನಲ್ಲಿ ಪ್ಯಾಕ್ ಮಾಡಲಾಗಿರುವ ವಸ್ತುಗಳನ್ನು ತಿಂದು ಅಲ್ಲಲ್ಲಿಯೇ ಬಿಸಾಡುವುದರಿಂದ ಮಣ್ಣಿನಲ್ಲಿ ಕೊಳೆತು ಹೋಗದೆ, ಹಾಗೇ ಉಳಿದು ಬಿಡುತ್ತದೆ. ಇದರಿಂದ ನಗರದ ಸೌಂದರ್ಯಕ್ಕೂ ಧಕ್ಕೆಯಾಗುತ್ತದೆ. ಮುಖ್ಯರಸ್ತೆಗಳ ಬದಿಯಲ್ಲೇ ಇರುವ ಹಲವಾರು ಅಂಗಡಿಗಳ ಎದುರಿನ ರಸ್ತೆ ಬದಿಗಳಲ್ಲಿ ಈ ರೀತಿ ಕಸ ಎಸೆಯುವುದನ್ನು ಕಾಣಬಹುದು.
ಅದರಲ್ಲೂ ನಗರದ ಕೆಲವೊಂದು ಸಣ್ಣ ಪುಟ್ಟ ಅಂಗಡಿಗಳ ಎದುರೇ ಬೀಡಿ, ಸಿಗರೇಟ್, ಪಾನ್ಪರಾಗ್ ಪ್ಯಾಕೆಟ್ಗಳು ಬಿದ್ದುಕೊಂಡಿವೆ. ಪ್ರಮುಖವಾಗಿ ಆಯಾ ಅಂಗಡಿಯವರು ತಮ್ಮ ಅಂಗಡಿಗಳಲ್ಲಿ ಗ್ರಾಹಕರು ಕಸ ಹಾಕಲು ಪೂರಕವಾಗುವಂತೆ ಡಸ್ಟ್ಬಿನ್ಗಳನ್ನು ಇಡಬೇಕು. ಪಾಲಿಕೆಯೂ ಹೀಗೆ ಕಸ ಎಸೆಯುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಡಸ್ಟ್ಬಿನ್ ಇಟ್ಟು ಕಸವನ್ನು ಅದಕ್ಕೆ ಹಾಕುವಂತೆ ಎಲ್ಲ ಅಂಗಡಿ ಮಾಲಕರಿಗೆ ಸೂಚಿಸಿದೆ. ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ಹೇಳಿದೆ. ಆದರೆ, ಈ ಹೇಳಿಕೆ ಕೇವಲ ಹೇಳಿಕೆಯಾಗಿ ಉಳಿಯದೆ, ಕಸ ಎಸೆಯುವವರ ಮೇಲೆ ಕಠಿನ ಕ್ರಮ ಕೈಗೊಳ್ಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್