ಸರಕಾರಿ ಸೊತ್ತುಗಳ ನಿರ್ವಹಣೆ ಸರಿಯಾಗಿ ಆಗಲಿ


Team Udayavani, Sep 15, 2019, 5:05 AM IST

as-12

ಜನರ ತೆರಿಗೆ ಹಣದಿಂದ ಆಡಳಿತ ನಡೆಸುವ ಸರಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ಸಾರ್ವಜನಿಕರ ಹಣವನ್ನು ಪೋಲು ಮಾಡುತ್ತಿದೆ.

ಅದಕ್ಕೆ ಉತ್ತಮ ಉದಾಹರಣೆ ನಗರದ ಕೆಲವು ಭಾಗಗಳಲ್ಲಿ ಪಾಲಿಕೆ ವತಿಯಿಂದ ಮಾಡಲಾದ ಕಸದ ಬುಟ್ಟಿಗಳು. ನಗರದ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ನಗರದ ವಿವಿಧ ಭಾಗಗಳಲ್ಲಿ ಹಸಿ ಕಸ , ಒಣಕಸವನ್ನು ವಿಂಗಡಿಸಿ ಹಾಕಲು ಕಸದ ಬುಟ್ಟಿಗಳನ್ನು ಇಟ್ಟಿವೆ. ಆದರೆ ಕೆಲವು ಭಾಗಗಳಲ್ಲಿ ಅದು ಮುರಿದು ಬಿದ್ದ ಸ್ಥಿತಿಯಲ್ಲಿವೆ. ಆದರಲ್ಲಿ ಕಸ ಹಾಕಲು ಸಾಧ್ಯವಿಲ್ಲದಂತಾಗಿದೆ. ಹಾಗಾಗಿ ಸಾರ್ವಜನಿಕರು ಅಲ್ಲೇ ಪಕ್ಕದಲ್ಲಿ ಕಸದ ರಾಶಿ ಹಾಕುತ್ತಿದ್ದಾರೆ. ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಗಮನ ಹರಿಸಬೇಕಾಗಿದೆ. ಇಷ್ಟು ಮಾತ್ರವಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಡಲಾದ ಇ- ಟಾಯ್ಲೆಟ್‌ಗಳ ಸೂಕ್ತ ನಿರ್ವಹಣೆ ಮಾಡದೆ ಬಳಸುವ ಸ್ಥಿತಿಯಲ್ಲಿ ಇಲ್ಲ. ಕೆಲವು ಭಾಗಗಳಲ್ಲಿ ನೀರಿನ ಕೊರತೆ ಉಂಟಾದರೆ ಇನ್ನೂ ಕೆಲವು ಭಾಗಗಳಲ್ಲಿ ಸ್ವತ್ಛತೆಯನ್ನು ಕಾಪಾಡದ ಹಿನ್ನೆಲೆಯಲ್ಲಿ ಬಳಕೆಗೆ ಯೋಗ್ಯವಾಗಿಲ್ಲ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕಾಗಿದೆ.

ಪಾದಚಾರಿಗಳಿಗೆ ದಾರಿ ಇಲ್ಲ
ಸ್ಮಾರ್ಟ್‌ಸಿಟಿಯಾಗಿ ಅಭಿವೃದ್ಧಿಯಾಗಲಿರುವ ಮಂಗಳೂರಿಗೆ ಮೂಲಭೂತ ಸೌಕಾರ್ಯಗಳ ಕೊರತೆ ಎದ್ದುಕಾಣುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ನಡೆದಾಡಲು ಫುಟ್‌ಪಾತ್‌ ವ್ಯವಸ್ಥೆ ಇಲ್ಲದಂತಾಗಿದೆ.

ಮಿಲಾಗ್ರಿಸ್‌ ರಸ್ತೆಯಲ್ಲಿ ನಡೆದಾಡಲು ಪಾದಚಾರಿಗಳಿಗೆ ದಾರಿ ಇಲ್ಲದಂತಾಗಿದೆ. ಮಿಲಾಗ್ರಿಸ್‌ ಚರ್ಚ್‌ನ ಬಲಭಾಗದ ರಸ್ತೆ ಬದಿಯಲ್ಲಿ ಸರಿಯಾದ ಫುಟ್‌ಪಾತ್‌ ಇಲ್ಲ. ಇರುವ ಅರ್ಧಬಂರ್ಧ ಫುಟ್‌ಪಾತ್‌ನ ಸ್ಲಾಬ್‌ಗಳು ಬಿದ್ದು ಹೋಗಿರುವುದರಿಂದ ಸಾರ್ವಜನಿಕರಿಗೆ ನಡೆದಾಡಲು ಕಷ್ಟವಾಗುತ್ತಿದೆ. ಇದರ ನಡುವೆ ರಸ್ತೆ ಬದಿಯಲ್ಲೇ ವಾಹನ ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಆ ಭಾಗದಲ್ಲಿ ನಡೆದಾಡಲು ಜನರು ಹಿಂದೇಟು ಹಾಕುವಂತಾಗಿದೆ. ಸಮೀಪದಲ್ಲೇ ಶಾಲೆ ಕಾಲೇಜುಗಳು ಇರುವುದರಿಂದ ದಿನನಿತ್ಯ ನೂರಾರು ವಿದ್ಯಾರ್ಥಿಗಳು ಆ ಪರಿಸರದಲ್ಲಿ ಓಡಾಡುತ್ತಾರೆ. ಇಲ್ಲಿ ಮಾತ್ರವಲ್ಲದೆ ನವಭಾರತ್‌ ಸರ್ಕಲ್‌- ಪಿವಿಎಸ್‌ ಸರ್ಕಲ್‌ ರಸ್ತೆಯಲ್ಲೂ ಪಾದಚಾರಿಗಳಿಗೆ ನಡೆದಾಡಲು ಸ್ಥಳವಿಲ್ಲ. ಹೊಸ ಯೋಜನೆಗಳ ಮೂಲಕ ಮಂಗಳೂರನ್ನು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಲು ಜನಪ್ರತಿನಿಧಿಗಳು, ಅಧಿಕಾರಿಗಳು ಕೆಲಸ ಮಾಡುತ್ತಿದ್ದರೆ ಸಾರ್ವಜನಿಕರು ಮಾತ್ರ ಮೂಲ ಸೌಕಾರ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹೆಣಗಾಡುತ್ತಿದ್ದಾರೆ.

-   ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.