ಸ್ವಚ್ಛ  ಸುಂದರ, ಸ್ವಸ್ಥ ನಗರವಾಗಲಿ ನಮ್ಮ ಮಂಗಳೂರು


Team Udayavani, Dec 23, 2018, 12:36 PM IST

23-december-10.gif

ಮಂಗಳೂರು ನಗರ ಯೋಜನಾ ಬದ್ಧವಾಗಿ ಬೆಳೆದ ನಗರವಲ್ಲ. ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿ ಸುತ್ತಮುತ್ತಲಿನ ಕೆಲವು ಗ್ರಾಮಗಳನ್ನು ತನ್ನ ತೆಕ್ಕೆಗೆ ಸೆಳೆದುಕೊಂಡು ಬೆಳೆದಿದೆ. ಇನ್ನಷ್ಟು ವಿಸ್ತರಿಸಿಕೊಳ್ಳುತ್ತಿದೆ. ಈಗ ಅದಕ್ಕೊಂದು ವ್ಯವಸ್ಥಿತ ರೂಪಕೊಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. ಇದರಲ್ಲಿ ಕೆಲವು ಅನುಷ್ಠಾನಗೊಂಡಿದ್ದರೆ ಇನ್ನು ಕೆಲವು ಪ್ರಸ್ತಾವನೆಯಲ್ಲೇ ಉಳಿದುಕೊಂಡಿದೆ. ಮಾತ್ರವಲ್ಲ ಕೆಲವೊಂದು ಅತ್ಯುತ್ತಮ ಯೋಜನೆಗಳನ್ನು ನಿರ್ಲಕ್ಷಿಸಲಾಗಿದೆ. ನಗರದ ಅಭಿವೃದ್ಧಿಗೆ ಪೂರಕವಾದ ಒಂದಷ್ಟು ಯೋಜನೆಗಳು ಇಲ್ಲಿವೆ. ಇವುಗಳನ್ನೂ ಸ್ಮಾರ್ಟ್‌ ಸಿಟಿಯ ಯೋಜನೆಗೆ ಸೇರಿಸಿದರೆ ಸ್ವಚ್ಛ, ಸುಂದರ, ಸ್ವಸ್ಥ ನಗರವಾಗಿ ಬೆಳೆಯಲು ಸಾಧ್ಯವಿದೆ.

ಮಂಗಳೂರು ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಇದರಲ್ಲಿ ನಗರದಲ್ಲಿ ರಸ್ತೆ, ನೀರು, ಬಸ್‌ ನಿಲ್ದಾಣ, ಮಾರುಕಟ್ಟೆ ಸಹಿತ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಯೋಜನೆಗಳನ್ನು ಸಿದ್ಧಪಡಿಸಲಾಗಿದೆ. ಜತೆಗೆ ನಗರ ಸುಂದರೀಕರಣಕ್ಕೂಪ್ರಾಶಸ್ತ್ಯ ನೀಡಲಾಗಿದೆ. ಆದರೆ ಸ್ಮಾರ್ಟ್‌ ಸಿಟಿ ಯೋಜನೆ ಅನುದಾನದಲ್ಲಿ ಮೂಲಸೌಕರ್ಯ ಆವಶ್ಯಕತೆಗಳ ಉನ್ನತೀಕರಣಕ್ಕೆ ಸೀಮಿತ ಅವಕಾಶ ಮಾತ್ರ ಇದೆ. ಆದ್ದ ರಿಂದ ಇದರ ಜತೆಗೆ ನಗರದ ಬೆಳವಣಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈಗಾಗಲೇ ಪ್ರಸ್ತಾವನೆ ರೂಪದಲ್ಲಿರುವ ಒಂದಷ್ಟು ಯೋಜನೆಗಳನ್ನು ಪರಿಗಣಿಸುವುದು ಅವಶ್ಯ.

ಇದರಲ್ಲಿ ಮುಖ್ಯವಾಗಿ ಫ್ಲೈಓವರ್‌, ಅಂಡರ್‌ಪಾಸ್‌, ಸ್ಯಾಟಲೈಟ್‌ ಬಸ್‌ ನಿಲ್ದಾಣಗಳು, ನಗರದೊಳಗೆ ವಾಹನ ದಟ್ಟನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಿಂಗ್‌ ರೋಡ್‌, ನಗರವನ್ನು ಹೊರ ಪ್ರದೇಶಗಳಿಗೆ ವಿಸ್ತರಿಸಿ ನಗರ ದಟ್ಟನೆಯನ್ನು ಕುಗ್ಗಿಸುವುದು ಮುಂತಾದ ಯೋಜನೆಗಳ ಅನುಷ್ಠಾನಕ್ಕೂ ಆದ್ಯತೆ ನೀಡಿದರೆ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ. 

ಸ್ಯಾಟಲೈಟ್‌ ಬಸ್‌ ನಿಲ್ದಾಣಗಳು
ಕರ್ನಾಟಕದ ಹೆಬ್ಟಾಗಿಲು, ಶಿಕ್ಷಣ ಕೇಂದ್ರ ಎಂದೆಲ್ಲ ಕರೆಸಿಕೊಳ್ಳುತ್ತಿರುವ ಮಂಗಳೂರು ರಾಜ್ಯದಲ್ಲಿ ಅತ್ಯಂತ ತ್ವರಿತಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೆ ಅನುಗುಣವಾಗಿ ಸಾರ್ವಜನಿಕ ಸಂಚಾರ ವ್ಯವಸ್ಥೆಯ ಸಮರ್ಪಕ ನಿರ್ವಹಣೆಯ ದೃಷ್ಟಿಯಿಂದ ಮಲ್ಲಿಕಟ್ಟೆ, ಕಂಕನಾಡಿ ಹಾಗೂ ಮಂಗಳಾದೇವಿಗಳಲ್ಲಿ ಉಪ ಬಸ್‌ ನಿಲ್ದಾಣಗಳನ್ನು ನಿರ್ಮಿಸುವ ಪ್ರಸ್ತಾವನೆ ದಶಕದ ಹಿಂದೆಯೇ ರೂಪಿಸಲಾಗಿತ್ತು. ಮಂಗಳೂರು ನಗರದಲ್ಲಿ ಬಹುತೇಕ ಸಾರ್ವಜನಿಕ ಬಸ್‌ ಸಂಚಾರದ ಕೇಂದ್ರ ಸ್ಥಾನವಾಗಿ ಹಂಪನಕಟ್ಟೆ, ಸ್ಟೇಟ್‌ಬ್ಯಾಂಕ್‌ ಆಗಿ ಉಳಿದುಕೊಂಡಿದೆ. ಮಂಗಳೂರು ಕೇಂದ್ರ ಬಸ್‌ ನಿಲ್ದಾಣವನ್ನು ಪಂಪ್‌ ವೆಲ್‌ಗೆ ಸ್ಥಳಾಂತರಿಸುವ ಯೋಜನೆ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಒಳಪಡಿಸಿದ್ದರೂ ಅನುಷ್ಠಾನದ ನಿಟ್ಟಿನಲ್ಲಿ ಸ್ಪಷ್ಟ ನಿರ್ಧಾರ ಹೊರಬಿದ್ದಿಲ್ಲ.

ರಿಂಗ್‌ರೋಡ್‌ ಪ್ರಸ್ತಾವನೆಗಳು
ಬೆಂಗಳೂರು ನಗರದಲ್ಲಿ ವಾಹನ ದಟ್ಟನೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ದಿಶೆಯಲ್ಲಿ ರಿಂಗ್‌ರೋಡ್‌ಗಳಿಗೆ ಆದ್ಯತೆ ನೀಡಿ ಕಾರ್ಯಗತಗೊಳಿಸಲಾಗುತ್ತಿದೆ. ಜತೆಗೆ ಪರ್ಯಾಯ ರಸ್ತೆಗಳಿಗೂ ಒತ್ತು ನೀಡಲಾಗುತ್ತಿದೆ. ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ಶೇ. 60ರಷ್ಟು ಸಂಚಾರವನ್ನು ನಗರದ ಹೊರವಲಯಕ್ಕೆ ವರ್ಗಾಯಿಸುವ ನಿಟ್ಟಿನಲ್ಲಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮಹಾಯೋಜನೆ ರೂಪಿಸಿದೆ. ಇದರಂತೆ ಪ್ರಸ್ತುತ ರಿಂಗ್‌ರೋಡ್‌ಗಳ ಜತೆಗೆ ಇನ್ನೂ ನಾಲ್ಕು ಹೊಸ ರಿಂಗ್‌ರೋಡ್‌ ಗಳನ್ನು 2031ರ ವೇಳೆಗೆ ಪೂರ್ತಿಗೊಳಿಸುವ ಯೋಜನೆ ಇರಿಸಿಕೊಂಡಿದೆ. ಮಂಗಳೂರು ನಗರದಲ್ಲೂ ಸಂಚಾರ ಸಮಸ್ಯೆ ಕಾಡಲಾರಂಭಿಸಿದೆ. ಆದರೆ ಪ್ರಸ್ತುತ ಮಂಗಳೂರು ನಗರ ಒಂದು ರಿಂಗ್‌ ರೋಡ್‌ ಕೂಡ ಹೊಂದಿಲ್ಲ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಈಗಾಗಲೇ ಮಂಗಳಾ ಕಾರ್ನಿಶ್‌, ನೇತ್ರಾವತಿ ಸೇತುವೆಯಿಂದ ಕಣ್ಣೂರು ರಿಂಗ್‌ ರೋಡ್‌ ಹಾಗೂ ಸಾಗರ ಮಾಲಾ ಯೋಜನೆಯಲ್ಲಿ ಮಂಗಳೂರು ಹಳೆ ಬಂದರು- ಕುಳೂರು ರಿಂಗ್‌ ರೋಡ್‌ ಪ್ರಸ್ತಾವನೆ ರೂಪಿಸಲಾಗಿದೆ.

ಮಂಗಳೂರು ನಗರ ವಿಸ್ತೀರ್ಣದಲ್ಲಿ ಇತರ ನಗರಗಳಿಗೆ ಹೋಲಿಸಿದರೆ ಕಿರಿದಾದರೂ ಮೂರು ರಾಷ್ಟ್ರೀಯ ಹೆದ್ದಾರಿ ಗಳು ನಗರದೊಳಗೆ ಹಾದುಹೋಗುತ್ತಿವೆ. ರಾಷ್ಟ್ರೀಯ ಹೆದ್ದಾರಿ 66, ರಾ.ಹೆ. 75 ಹಾಗೂ ರಾ.ಹೆ. 169 ಪ್ರಮುಖವಾದ ರಾಷ್ಟ್ರೀಯ ಹೆದ್ದಾರಿಗಳಾಗಿದ್ದು, ಮಂಗಳೂರು ನಗರ ಮಧ್ಯ ಭಾಗದಲ್ಲಿ ಹಾದುಹೋಗುವುದರಿಂದ ಸಂಚಾರ ದಟ್ಟನೆ ಮಿತಿ ಮೀರಿದೆ. ಟ್ರಾಫಿಕ್‌ ತಡೆ ನಿತ್ಯ ಸಮಸ್ಯೆಯಾಗಿ ಕಾಡುತ್ತಿದೆ. ಹೆದ್ದಾರಿಗಳಲ್ಲಿ ಹಾದುಹೋಗುವ ವಾಹನಗಳು ನಗರದೊಳಗೆ ಬಾರದೆ ಹೊರವಲಯದಲ್ಲೇ ಸಾಗುವಂತಾದರೆ ಮಂಗಳೂರಿನಲ್ಲಿ ಶೇ. 50ರಷ್ಟು ವಾಹನದಟ್ಟನೆ ಕಡಿಮೆಯಾಗುತ್ತದೆ.

ನಗರದ ಇಂದಿನ ಆವಶ್ಯಕತೆ ಮತ್ತು ಮುಂದಿನ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಪ್ರಸ್ತಾವನೆಗಳನ್ನು ರೂಪಿಸಲಾಗಿದೆ. ಆದ್ಯತೆಯ ನೆಲೆಯಲ್ಲಿ ಇವುಗಳನ್ನು ಕಾರ್ಯರೂಪಕ್ಕೆ ಬರುವಲ್ಲಿ ಕಾರ್ಯೋನ್ಮುಖವಾಗುವುದರಿಂದ ನಗರ ಪ್ರಸ್ತುತ ಎದುರಿಸುತ್ತಿರುವ ಮತ್ತು ಮುಂದೆ ಎದುರಿಸಬಹುದಾದ ಸಮಸ್ಯೆಗಳಿಗೆ ಒಂದಷ್ಟು ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ.

ಫ್ಲೈ ಓವರ್‌, ಅಂಡರ್‌ಪಾಸ್‌
ನಗರದೊಳಗಿನ ಸಂಚಾರ ವ್ಯವಸ್ಥೆ ಸುಧಾರಣೆ ನಿಟ್ಟಿನಲ್ಲೂ ಒಂದಷ್ಟು ಯೋಜನೆಗಳನ್ನು ಕೈಗೊಳ್ಳುವುದು ಅವಶ್ಯ. ಕೆಪಿಟಿ, ನಂತೂರು ವೃತ್ತಗಳಲ್ಲಿಫ್ಲೈ ಓವರ್‌ಗಳನ್ನು ನಿರ್ಮಿಸಬೇಕು ಎಂಬುದಾಗಿ ನಾಗರಿಕರು, ಜನಪ್ರತಿನಿಧಿಗಳು ಹೆದ್ದಾರಿ ಇಲಾಖೆ ಹಾಗೂ ಸರಕಾರವನ್ನು ಹಲವಾರು ವರ್ಷಗಳಿಂದ ಒತ್ತಾಯಿಸುತ್ತಲೇ ಬಂದಿದ್ದಾರೆ. ನಗರದಲ್ಲಿ ಫ್ಲೈ  ಓವರ್‌ ಪ್ರಸ್ತಾವನೆ ಹೊಸದೇನೂ ಅಲ್ಲ. 1992ರಲ್ಲಿ ವೀರಪ್ಪ ಮೊಯಿಲಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಹಂಪನಕಟ್ಟೆಯಲ್ಲಿ ಫ್ಲೈ ಓವರ್‌ ರಚನೆ ಪ್ರಸ್ತಾವ ಕೇಳಿ ಬಂದಿತ್ತು. ಹಂಪನಕಟ್ಟೆಯ ಸಿಂಡಿಕೇಟ್‌ ಬ್ಯಾಂಕ್‌ ಕಟ್ಟಡದ ಬಳಿಯಿಂದ ಪುರಭವನದ ಬಳಿಯ ಕ್ಲಾಕ್‌ ಟವರ್‌ವರೆಗೆ (ಪ್ರಸ್ತುತ ಕ್ಲಾಕ್‌ಟವರ್‌ನ್ನು ತೆಗೆಯಲಾಗಿದೆ) ಫ್ಲೈ ಓವರ್‌ ರಚಿಸುವ ಬಗ್ಗೆ ಪ್ರಾಥಮಿಕ ಹಂತದ ಚರ್ಚೆಗಳು ನಡೆದಿತ್ತು. ರಾ.ಹೆ. 66ರಲ್ಲಿ ನಂತೂರು ವೃತ್ತ ವಾಹನ ಚಾಲಕರ ಪಾಲಿಗೆ ಗೊಂದಲದ ಗೂಡಾಗಿದೆ. ವಾಹನ ಸಂಚಾರ ಪದೇಪದೇ ಸ್ಥಗಿತಗೊಳ್ಳುವುದು ಇಲ್ಲಿ ನಿರಂತರವಾಗಿ ಕಾಡುವ ಸಮಸ್ಯೆ. ಅಪಘಾತಗಳಿಗೂ ಕಾರಣವಾಗುತ್ತಿದೆ. ನಂತೂರು ವೃತ್ತದಲ್ಲಿ ಸಂಚಾರ ದಟ್ಟನೆಯ ಸ್ಥಿತಿ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿ ಅಂಡರ್‌ಪಾಸ್‌ ನಿರ್ಮಾಣ ಪ್ರಸ್ತಾವನೆ ಸಿದ್ಧಪಡಿಸಿದೆ. ಇದೇ ರೀತಿ ಕೆಪಿಟಿ ವೃತ್ತದ ಬಳಿ ಫ್ಲೈ ಓವರ್‌ಗೂ ಬಹಳಷ್ಟು ಬೇಡಿಕೆ ಇದೆ.  ಹಂಪನಕಟ್ಟೆ ಪುರಭವನದ ಬಳಿ ಸ್ಕೈವಾಕ್‌ಗೆ ಶಿಲಾನ್ಯಾಸ ನೆರವೇರಿದ್ದರೂ ಈಗ ಇದರ ಬದಲು ಅಂಡರ್‌ಪಾಸ್‌ ಪ್ರಸ್ತಾವನೆ ಕೇಳಿಬಂದಿದೆ. ಇದು ನಗರದೊಳಗೆ ಸುಗಮ ಸಂಚಾರ ನಿಟ್ಟಿನಲ್ಲಿ ಆಗಬೇಕಾದ ಪ್ರಮುಖ ಯೋಜನೆಗಳು. 

 ಕೇಶವ ಕುಂದರ್‌

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.