ಪ್ಲಾಸ್ಟಿಕ್‌ ತ್ಯಾಜ್ಯದಿಂದ ರಸ್ತೆ ನಿರ್ಮಾಣ


Team Udayavani, Sep 22, 2019, 5:00 AM IST

x-18

ನಗರೀಕರಣ ಅದೆಷ್ಟು ಅಪ್ಡೆಟ್‌ ಆದರೂ ಪರವಾಗಿಲ್ಲ ಆದರೆ ಅದರ ಮತ್ತೂಂದು ಮುಖದ ಹಾನಿಯನ್ನು ಗಂಭೀರವಾಗಿ ಪರಿಗಣಿಸದೆ ಹೋದಲ್ಲಿ ಸಮಸ್ಯೆ ಖಂಡಿತ ತಪ್ಪಿದಲ್ಲ. ಸದ್ಯ ಕಾಣುತ್ತಿರುವ ನಮ್ಮ ನಗರದ ಬೆಳವಣಿಗೆಯ ವೇಗ, ಮುಂದೊಂದು ದಿನ ಗಂಭೀರವಾದಂತಹ ಸಮಸ್ಯೆ ಎದುರಿಸಬೇಕಾದಿತು ಎನ್ನುವುದು ವಾಸ್ತವದ ವಾತಾವರಣ ಭವಿಷ್ಯ ಹೇಳುತ್ತಿವೆ. ನಗರ ತನ್ನೊಳಗಿನ ಬೆಳವಣಿಗೆಯ ಜತೆ ಜತೆಗೆ ನಾನಾ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿವೆ. ಇಂತಹ ಸಮಸ್ಯೆಗಳಲ್ಲಿ ಈ ಪ್ಲಾಸ್ಟಿಕ್‌ ಭೂತ ಕೂಡ ಒಂದು. ಈ ಪ್ಲಾಸ್ಟಿಕ್‌ ಜನರ ನಿತ್ಯ ಜೀವನದಲ್ಲಿ ಒಂದಾಗಿದೆ ಅನ್ನುವುದಂತು ಸತ್ಯ. ಆದರೆ ಬೆಟ್ಟದಂತೆ ಬೆಳೆಯುತ್ತಿರುವ ಪ್ಲಾಸ್ಟಿಕ್‌ ತ್ಯಾಜ್ಯ ಅಪಾಯಕಾರಿ. ಸದ್ಯ ಈ ಪ್ಲಾಸ್ಟಿಕ್‌ ತ್ಯಾಜ್ಯ ಸಮಸ್ಯೆಗೆ ಕೆಲವೊಂದು ನಗರಗಳು ವಿಭಿನ್ನವಾಗಿ ಪರಿಹಾರಗಳನ್ನು ಕಂಡುಕೊಂಡಿವೆ. ಯಾವ ರೀತಿಯಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಮರು ಬಳಕೆ ಮಾಡಬಹುದು ಎಂಬುದನ್ನು ಯೋಚಿಸಿದೆ. ಈ ಯೋಚನೆಯಲ್ಲಿ ತಯಾರಿಗಿದ್ದು ಪ್ಲಾಸ್ಟಿಕ್‌ ರೋಡ್‌.

ಏನಿದು ಈ ಪ್ಲಾಸ್ಟಿಕ್‌ ರೋಡ್‌
ಈ ಪ್ಲಾಸ್ಟಿಕ್‌ ರಸ್ತೆಗಳು ಪ್ಲಾಸ್ಟಿಕ್‌ ಮತ್ತು ಇತರ ವಸ್ತುಗಳ ಸಂಯೋಜನೆಯಿಂದ ತಯಾರಿಸಲಾಗುತ್ತದೆ. ಖನಿಜ ಸಮುಚ್ಚಯಗಳು ಮತ್ತು ಡಾಂಬರುಗಳನ್ನು ಒಳಗೊಂಡಿರುವ ಕಾಂಕ್ರೀಟ್‌ನಿಂದ ಗುಣಮಟ್ಟದ ರಸ್ತೆಗಳನ್ನು ತಯಾರಿಸಲಾಗುತ್ತದೆ . ಪ್ಯಾಕೇಜಿಂಗ್‌ನಲ್ಲಿ ಬಳಸುವ ಕೆಲವು ಸಾಮಾನ್ಯ ಪ್ಲಾಸ್ಟಿಕ್‌ಗಳನ್ನು ಪಾಲಿಥಿಲೀನ್‌, ಪಾಲಿವಿನೈಲ್‌ ಕ್ಲೋರೈಡ್‌, ಪಾಲಿಪೊ›ಪಿಲೀನ್‌ ಮತ್ತು ಹೆಚ್ಚಿನ ಮತ್ತು ಕಡಿಮೆ ಸಾಂದ್ರತೆಯ ಪಾಲಿಥಿಲೀನ್‌ ವಸ್ತುಗಳನ್ನು ಮೊದಲು ಪ್ಲಾಸ್ಟಿಕ್‌ ತ್ಯಾಜ್ಯದಿಂದ ವಿಂಗಡಿಸಲಾಗುತ್ತದೆ. ವಿಂಗಡಿಸಿದ ಅನಂತರ ವಸ್ತುಗಳನ್ನು ಸ್ವತ್ಛಗೊಳಿಸಿ, ಒಣಗಿಸಿ, ಚೂರು ಚೂರು ಮಾಡಲಾಗುತ್ತದೆ. ಚೂರು ಚೂರು ಮಾಡಿದ ಪ್ಲಾಸ್ಟಿಕ್‌ ಅನ್ನು ಬೆರೆಸಿ ಕರಗಿಸಲಾಗುತ್ತದೆ. ಅನಂತರ ಬಿಸಿ ಬಿಟುಮೆನ್‌ ಅನ್ನು ಸೇರಿಸಲಾಗುತ್ತದೆ ಮತ್ತು ಕರಗಿದ ಪ್ಲಾಸ್ಟಿಕ್‌ನೊಂದಿಗೆ ಬೆರೆಸಲಾಗುತ್ತದೆ.

ಮಿಶ್ರಣವನ್ನು ಬೆರೆಸಿದ ಸಾಮಾನ್ಯ ಕಾಂಕ್ರೀಟ್‌ನೊಂದಿಗೆ ಮಿಶ್ರಣ ಮಾಡಿ ಹಾಕಲಾಗುತ್ತದೆ. ಈ ಮಿಶ್ರಣದ ಮೂಲಕ ಹೊಸ ರಸ್ತೆಗಳನ್ನು ನಿರ್ಮಿಸಲಾಗುತ್ತದೆ. ಇದು ಪ್ಲಾಸ್ಟಿಕ್‌ ತ್ಯಾಜ್ಯದ ಮರುಬಳಕೆಗೆ ಕಂಡುಕೊಂಡ ಮಾರ್ಗ.

ಮಂಗಳೂರಿಗೂ ಅಗತ್ಯ
ನಗರೀಕರಣದ ಪ್ರಭಾವದ ಒತ್ತಡದಿಂದ ಹೊಸ ಹೊಸ ಸಂಪರ್ಕ ಮಾರ್ಗ ನಿರ್ಮಾಣದ ಬೇಡಿಕೆ ಇರುವಾಗ ಮತ್ತು ಪ್ಲಾಸ್ಟಿಕ್‌ ತ್ಯಾಜ್ಯದ ಸಮಸ್ಯೆ ದೊಡ್ಡ ಮಟ್ಟದಲ್ಲಿ ಕಾಡುತ್ತಿರುವಾಗ ಈ ರೀತಿಯ ಪರ್ಯಾಯ ಮಾರ್ಗಗಳು ನಗರಕ್ಕೆ ಬಂದರೆ ಒಳ್ಳೆಯದು. ಇಂತಹ ನೂತನ ಕಲ್ಪನೆಗಳ ಜೋಡಿಸುವಿಕೆಗೆ ಇಲ್ಲಿನ ನಗರಾಡಳಿತ ಮಂಡಳಿಯವರು ಚಿಂತಿಸಬೇಕಾಗಿದೆ.

ಯಾವ ದೇಶಗಳಲ್ಲಿವೆ?
ಆಸ್ಟ್ರೇಲಿಯಾ, ಇಂಡೋನೇಷ್ಯಾ, ಭಾರತ, ಯುಕೆ, ಯುಎಸ್‌ ಮತ್ತು ಹಲವು ದೇಶಗಳು ಪ್ಲಾಸ್ಟಿಕ್‌ ತ್ಯಾಜ್ಯವನ್ನು ಡಾಂಮರು ಮಿಶ್ರಣಕ್ಕೆ ಸೇರಿಸಿಕೊಳ್ಳುವ ತಂತ್ರಜ್ಞಾನವನ್ನು ಬಳಸಿಕೊಂಡಿವೆ.

ಪ್ಲಾಸ್ಟಿಕ್‌ ರೋಡ್‌ನ‌ ಉಪಯೋಗ
· ತ್ಯಾಜ್ಯ ಪ್ಲಾಸ್ಟಿಕ್‌ನ ಮರುಬಳಕೆ.
· ಕಡಿಮೆ ಡಾಂಮರು ಬಳಸುವುದರಿಂದ ವೆಚ್ಚ ಮತ್ತು ಸಂಪನ್ಮೂಲದ‌ ಉಳಿತಾಯ
· ಕಾಂಕ್ರೀಟ್‌ ರಸ್ತೆಗಳಿಗಿಂತ ಉತ್ತಮ ಪ್ರತಿರೋಧವನ್ನು ಹೊಂದಿವೆ. ಉದಾ: ನೀರನ್ನು ಹೀರಿಕೊಳ್ಳುವುದಿಲ್ಲ,
· ಕಡಿಮೆ ಮಟ್ಟದ ದುರಸ್ತಿ ಅಗತ್ಯ.

-   ವಿಶ್ವ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.