ರಸ್ತೆ ಸುಸ್ಥಿತಿ: ಹೀಗೊಂದು ಸಾರ್ವಜನಿಕ ಸಹಭಾಗಿತ್ವ


Team Udayavani, Sep 22, 2019, 5:00 AM IST

x-16

ಡಾಂಮರು ರಸ್ತೆಯಲ್ಲಿ ಗುಂಡಿ, ಕಾಂಕ್ರೀಟ್‌ ರಸ್ತೆಗಳಾದರೆ ರಸ್ತೆಯ ಎರಡು ಬದಿಗಳಲ್ಲಿ ಹೊಂಡಗಳು ಬೀಳುವುದು, ಮಳೆ ನೀರು ಚರಂಡಿ ಉಕ್ಕೇರಿ ನೀರು ರಸ್ತೆಯಲ್ಲೇ ಹರಿಯುವುದು ಇವೆಲ್ಲಾ ಪ್ರತಿಯೊಂದು ನಗರ, ಪಟ್ಟಣಗಳಲ್ಲಿ ಬಹುತೇಕ ಕಂಡು ಬರುವ ಸಾಮಾನ್ಯ ಸಮಸ್ಯೆ. ಮಳೆಗಾಲದಲ್ಲಂತೂ ಈ ಸಮಸ್ಯೆ ತೀವ್ರತೆಯನ್ನು ಪಡೆಯುತ್ತದೆ. ರಸ್ತೆಯಲ್ಲಿ ವಾಹನಗಳು ಗುಂಡಿಗಳನ್ನು ತಪ್ಪಿಸಲು ಹೋಗಿ ಬಹಳಷ್ಟು ಅಪಘಾತಗಳು, ಪ್ರಾಣಹಾನಿಗಳು ಸಂಭವಿಸಿವೆ. ಅವರನ್ನು ನಂಬಿರುವ ಕುಟುಂಬಗಳು ಬೀದಿಪಾಲಾಗುತ್ತವೆ. ಇದಕ್ಕೆ ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಹೊಣೆಯಾಗಿಸಿ ಒಂದಷ್ಟು ಆಕ್ರೋಶ ವ್ಯಕ್ತವಾಗಿ ತಣ್ಣಾಗುತ್ತದೆ.

ರಸ್ತೆ ಸುಸ್ಥಿತಿ ಆಡಳಿತ ವ್ಯವಸ್ಥೆಯ ಹೊಣೆಗಾರಿಕೆ ನಿಜ. ಆದರೆ ಕೇವಲ ಆಡಳಿತ ವ್ಯವಸ್ಥೆಯನ್ನು ಹೊಣೆಯಾಗಿಸಿ ದೂರುವ ಬದಲು ರಸ್ತೆ ಸುಸ್ಥಿತಿ ಕಾರ್ಯದಲ್ಲಿ ಸಾರ್ವಜನಿಕರೂ ಕೈಜೋಡಿಸುವುದು ಸಮಸ್ಯೆಗೆ ಒಂದಷ್ಟು ಪರಿಹಾರ ಕಂಡುಕೊಳ್ಳಲು ನೆೆರವಾಗುತ್ತದೆ . ಸ‌ುಗಮ ಸಂಚಾರದ ಜತೆಗೆ ಅಪಘಾತಗಳನ್ನು ಕೂಡಾ ನಿಯಂತ್ರಿಸಲು ಸಹಕಾರಿಯಾಗುತ್ತದೆ. ಈ ರೀತಿಯ ಮಾದರಿ ಸಾರ್ವಜನಿಕ ಸಹಭಾಗಿತ್ವವನ್ನು ಬೆಂಗಳೂರಿನ ಪಾಟ್‌ಹೋಲ್‌ ರಾಜ ಎಂಬ ಸ್ವಯಂ ಸೇವಾ ಸಂಸ್ಥೆ ನೀಡುತ್ತಿದೆ.

ಕಾರ್ಯನಿರ್ವಹಣೆ
ರಸ್ತೆಗುಂಡಿಗಳ ಬಗ್ಗೆ ಸಾರ್ವಜನಿಕರು ಪಾಟ್‌ಹೋಲ್‌ ಸಂಸ್ಥೆಯ ಫೇಸ್‌ಬುಕ್‌, ವಾಟ್ಸಾಪ್‌ ಹಾಗೂ ವೆಬ್‌ಸೈಟ್‌ಗೆ ಚಿತ್ರಸಮೇತ ಅಪ್‌ಲೋಡ್‌ ಮಾಡುತ್ತಾರೆ. ದಾಖಲಾದ ರಸ್ತೆಗುಂಡಿಗಳ ವಿವರಗಳನ್ನು ಪಟ್ಟಿಮಾಡಿಕೊಂಡು ಅವುಗಳನ್ನು ಮುಚ್ಚಲು ಸಂಸ್ಥೆ ಕಾರ್ಯೋನ್ಮುಖವಾಗುತ್ತದೆ. ಗುಂಡಿ ಮುಚ್ಚಲು ಕೋಲ್ಡ್‌ ಅಸಾ#ಲ್ಟ್ ಎನ್ನುವ ಡಾಂಮರು ಬಳಸಲಾಗುತ್ತಿದೆ. ಇದು ಪರಿಸರಸ್ನೇಹಿ ಡಾಂಮರ್‌ ಆಗಿದ್ದು ಪ್ಲಾಸ್ಟಿಕ್‌, ರಬ್ಬರ್‌ ಮಿಶ್ರವಾಗಿರುತ್ತದೆ. ಇದರಿಂದ ಕೆಲವೇ ನಿಮಿಷಗಳಲ್ಲಿ ರಸ್ತೆಗುಂಡಿಗಳನ್ನು ಮುಚ್ಚಬಹುದಾಗಿದೆ. ಒಂದು ಮೀಟರ್‌ ರಸ್ತೆ ಗುಂಡಿ ಮುಚ್ಚುವುದಕ್ಕೆ ಸುಮಾರು 2500 ರೂ. ವೆಚ್ಚ ತಗಲುತ್ತದೆ. ಈ ಕಾರ್ಯದಲ್ಲಿ ಕಾರ್ಪೊರೇಟ್‌ ಸಂಸ್ಥೆಗಳು ಸಿಎಸ್‌ಆರ್‌ ಫಂಡ್‌ನ‌ಡಿಯಲ್ಲಿ ಆರ್ಥಿಕ ಸಹಕಾರವನ್ನು ನೀಡುತ್ತವೆ. ಈಗಾಗಲೇ ಬೆಂಗಳೂರಿನಲ್ಲಿ ಸುಮಾರು 20 ಕ್ಕೂ ಅಧಿಕ ಕಾರ್ಪೊರೇಟ್‌ ಸಂಸ್ಥೆಗಳು ಈ ರೀತಿಯ ಆರ್ಥಿಕ ಸಹಯೋಗ ನೀಡಿವೆ. ಇದಲ್ಲದೆ ಸಂಸ್ಥೆಯ ಸೇವಾಕಾರ್ಯವನ್ನು ಗುರುತಿಸಿ ಸಾರ್ವಜನಿಕರೂ ಕೂಡಾ ಗುಂಡಿ ಮುಚ್ಚುವ ಕಾರ್ಯಕ್ಕೆ ಆರ್ಥಿಕ ನೆರವು ನೀಡುತ್ತಿದ್ದಾರೆ.

ಗುಂಡಿ ಮುಚ್ಚುವ ಸೇವಾಕಾರ್ಯದ ಜತೆಗೆ ಶಾಲಾ ಮಕ್ಕಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲೂ ಪಾಟ್‌ಹೋಲ್‌ ರಾಜ ಸಂಸ್ಥೆ ನಿರತವಾಗಿದೆ. ರಸ್ತೆಗಳಲ್ಲಿ ಸುರಕ್ಷತಾ ಫಲಕ ಅಳವಡಿಕೆ,ಕ್ರಾಸ್‌ಗಳಲ್ಲಿ ನಿರ್ದಿಷ್ಟ ಬಣ್ಣ ಬಳಿದು ಜಾಗೃತಿ ಕಾರ್ಯವನ್ನು ಸಂಸ್ಥೆ ಹಮ್ಮಿಕೊಂಡು ಬರುತ್ತಿದೆ. ಈ ರೀತಿಯ ಸಹಭಾಗಿತ್ವ ಮಂಗಳೂರು ನಗರ ಸೇರಿದಂತೆ ಇತರ ನಗರಗಳಲ್ಲಿ ಆರಂಭಗೊಂಡಾಗ ನಗರದ ರಸ್ತೆ ಸುಸ್ಥಿತಿಗೆ ಇದು ಪೂರಕವಾಗಬಹುದಾಗಿದೆ.

“ಪಾಟ್‌ಹೋಲ್‌ ರಾಜ ‘

“ಪಾಟ್‌ಹೋಲ್‌ರಾಜ ‘ ವಾಯುಸೇನೆಯ ನಿವೃತ್ತ ಪೈಲೆಟ್‌ ಪ್ರತಾಪ್‌ ಭೀಮಸೇನ ರಾವ್‌ರಿಂದ ಸಾಮಾಜಿಕ ಕಳಕಳಿಯ ಫಲವಾಗಿ ಹುಟ್ಟಿಕೊಂಡಿರುವ ಸಂಸ್ಥೆ. ಇದರಲ್ಲಿ ಸೇವೆ ನೀಡುವವರು ಬಹುಪಾಲು ಸಾಫ್ಟ್‌ವೇರ್‌ ಕಂಪೆನಿಯ ಉದ್ಯೋಗಿಗಳು. ರಸ್ತೆಗುಂಡಿಗಳನ್ನು ಮುಚ್ಚುವ ಕಾರ್ಯದಲ್ಲಿ ಸಾರ್ವಜನಿಕ ಸಹಭಾಗಿತ್ವ ನೀಡುವುದು ಈ ಸಂಸೆœ ಸ್ಥಾಪನೆಯ ಪ್ರಮುಖ ಉದ್ದೇಶ. ರಸ್ತೆಗುಂಡಿಯಿಂದ ಆದ ಒಂದು ಮಾರಣಾಂತಿಕ ಅಪಘಾತ ಈ ಸಂಸ್ಥೆಯನ್ನು ಹುಟ್ಟು ಹಾಕಲು ಅವರಿಗೆ ಪ್ರೇರಣೆಯಾಯಿತು. 2014 ರಲ್ಲಿ ಅವರ ಸ್ನೇಹಿತರೋರ್ವರ ಮಗಳು ರಸ್ತೆಗುಂಡಿ ತಪ್ಪಿಸಲು ಹೋಗಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು.ಈ ಘಟನೆ ಅವರಿಗೆ ತುಂಬಾ ದುಃಖ ತಂದಿತ್ತು. ಈ ರೀತಿಯ ಘಟನೆ ಬೇರೆ ಯಾರಿಗೂ ಆಗಬಾರದು. ಗುಂಡಿ ಮುಚ್ಚುವ ಕಾರ್ಯಕ್ಕೆ ಆಡಳಿತ ವ್ಯವಸ್ಥೆಯನ್ನೇ ಕಾಯುವ, ದೂರುತ್ತಾ ಕುಳಿತುಕೊಳ್ಳುವ ಬದಲು ನಾವೇಕೆ ಕೈಜೋಡಿಸ ಬಾರದು ಎಂಬ ಉದ್ದೇಶದಿಂದ 2016 ರಲ್ಲಿ ಅವರು ಪಾಟ್‌ಹೋಲ್‌ ರಾಜ ಎಂಬ ಸಂಸ್ಥೆಯನ್ನು ಹುಟ್ಟುಹಾಕಿದರು. ರಸ್ತೆ ಗುಂಡಿ ಮುಚ್ಚುವ ಜತೆಗೆ ಸುಗಮ ಸಂಚಾರಕ್ಕೆ ಪೂರಕವಾಗಿ ಇತರ ಕಾರ್ಯಗಳನ್ನು ಕೂಡಾ ನಡೆಸುತ್ತಿದೆ. “ಪಾಟ್‌ಹೋಲ್‌ರಾಜ ‘ ಸಂಸ್ಥೆ ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಹೈದರಾಬಾದ್‌, ಮುಂಬಯಿಯಲ್ಲೂ ಕಾರ್ಯನಿರ್ವಹಿಸುತ್ತಿದೆ. ಐಟಿ-ಬಿಟಿ ಸಂಸ್ಥೆಯ ಉದ್ಯೋಗಿಗಳನ್ನು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ವಾರಾಂತ್ಯದಲ್ಲಿ ಪ್ರವಾಸಕ್ಕೆ ಹೋಗುವ ಬದಲು ರಸ್ತೆಯ ಗುಂಡಿ ಮುಚ್ಚುವ ಕಾರ್ಯದಲ್ಲಿ ಸಹಯೋಗ ನೀಡುತ್ತಿದ್ದಾರೆ.ಬೆಂಗಳೂರು ನಗರದಲ್ಲಿ ಕಳೆದ ಎರಡು ವರ್ಷಗಳಲ್ಲಿ ಈ ಸಂಸ್ಥೆ 5000 ಕ್ಕೂ ಅಧಿಕ ರಸ್ತೆಗುಂಡಿಗಳನ್ನು ಮುಚ್ಚಿದೆ.

-  ಕೇಶವ ಕುಂದಾರ್‌

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.