ನಗರ ಸೌಂದರ್ಯ ವೃದ್ಧಿಸುವ ಪ್ಲಾಸ್ಟಿಕ್ 


Team Udayavani, Sep 9, 2018, 12:52 PM IST

9-sepctember-14.jpg

ಪ್ಲಾಸ್ಟಿಕ್‌ ಬಳಕೆ ಕಾನೂನಾತ್ಮಕವಾಗಿ ನಿಷೇಧಿಸಲ್ಪಟ್ಟಿದ್ದರೂ ಒಂದಲ್ಲ ಒಂದು ರೂಪದಲ್ಲಿ ಪ್ಲಾಸ್ಟಿಕ್‌ ಮನೆ ಸೇರುತ್ತವೆ. ಮನೆ ಸೇರಿದ್ದು ಪರಿಸರಕ್ಕೆ ಹಾನಿಯುಂಟು ಮಾಡುತ್ತಿವೆ. ಒಟ್ಟಿನಲ್ಲಿ ಪ್ಲಾಸ್ಟಿಕ್‌ ಇಲ್ಲದೆ ಬದುಕಲು ಸಾಧ್ಯವೇ ಇಲ್ಲ ಎಂಬಷ್ಟರ ಮಟ್ಟಿಗೆ ಪ್ಲಾಸ್ಟಿಕ್‌ ಅನ್ನು ನಾವು ನೆಚ್ಚಿಕೊಂಡಿದ್ದೇವೆ.

ಎಲ್ಲೋ ಕೆಲವು ಕಡೆಗಳಲ್ಲಿ ಮಾತ್ರ ಇಂಥ ಪ್ಲಾಸ್ಟಿಕ್‌ ಮರು ಬಳಕೆಯ ಚಿಂತನೆಗಳು ನಡೆಯುತ್ತಿವೆ. ನಗರ ಅಭಿವೃದ್ಧಿ, ಸೌಂದರ್ಯದ ದೃಷ್ಟಿಯಿಂದಲೂ ಪ್ಲಾಸ್ಟಿಕ್‌ ಮರು ಬಳಕೆ ಮಾಡಿದರೆ ಬಹುತೇಕ ತ್ಯಾಜ್ಯ ಸಮಸ್ಯೆ ನಿವಾರಣೆಯಾದಂತೆಯೇ ಸರಿ. ಪ್ಲಾಸ್ಟಿಕ್‌ ಕವರ್‌ ಗಳನ್ನಾದರೆ ಸುಟ್ಟು ಹಾಕಬಹುದು ಅಥವಾ ಮರು ಬಳಕೆ ಮಾಡಬಹುದು. ಆದರೆ ಪ್ಲಾಸ್ಟಿಕ್‌ ಬಾಟಲಿಗಳು ವ್ಯರ್ಥವಾಗಿ ಪರಿಸರ ಸೇರುತ್ತದೆ. ಒಂದು ವರದಿಯಂತೆ ಜಗತ್ತಿನಲ್ಲಿ ವರ್ಷಕ್ಕೆ ಸುಮಾರು 50 ಬಿಲಿಯನ್‌ ಪ್ಲಾಸ್ಟಿಕ್‌ ಬಾಟಲಿಗಳು ಉತ್ಪಾದನೆಯಾಗುತ್ತಿವೆ. ಪ್ಲಾಸ್ಟಿಕ್‌ ಬಾಟಲಿ ಬಳಕೆ ನರವ್ಯೂಹ ಹಾಗೂ ಕ್ಯಾನ್ಸರ್‌ ನಂತ ಆಪಾಯಕಾರಿ ರೋಗಗಳನ್ನು ತಂದೊಡ್ಡುತ್ತಿದ್ದರೂ ಬಳಕೆ ಮಾಡುವುದು ಕಡಿಮೆಯಾಗಿಲ್ಲ.

ಏನು ಮಾಡುವುದು?
ಪ್ಲಾಸ್ಟಿಕ್‌ ಮರು ಬಳಕೆಯತ್ತ ಹಲವು ಚಿಂತನೆಗಳು ನಡೆಯುತ್ತಿದ್ದರೂ ನಗರದ ಅಭಿವೃದ್ಧಿ ಮತ್ತು ಸೌಂದರ್ಯ ವರ್ಧನೆಯಲ್ಲಿ ಇದರ ಬಳಕೆ ಬಹಳ ಕಡಿಮೆ. ಉತ್ಪಾದಿಸಿದ ಮತ್ತು ಬಳಕೆ ಮಾಡಿದ ಪ್ಲಾಸ್ಟಿಕ್‌ ಅನ್ನು ಪರಿಸರ ಸ್ನೇಹಿಗೊಳಿಸಿದರೆ ಇದರ ಸಾಕಷ್ಟು ಪ್ರಯೋಜನ ಎಲ್ಲರಿಗೂ ಸಿಗುವುದು.

ಅಷ್ಟೇ ಅಲ್ಲ ಸಿಸಾಕೆಟ್‌ ಪ್ರಾಂತ್ಯದ ಕಾಂಬೋಡಿಯಾ ಗಡಿಯಲ್ಲಿ ಪ್ಲಾಸ್ಟಿಕ್‌ ಬಾಟಲಿಗಳಿಂದ ನಿರ್ಮಾಣಗೊಂಡಿರುವ ಬಾಟಲಿ ಟೆಂಪಲ್‌ ಜಗದ್ವಿಖ್ಯಾತವಾಗಿದೆ. ಸಾಕಷ್ಟು ಪ್ರವಾಸಿಗರನ್ನೂ ಆಕರ್ಷಿಸುತ್ತಿವೆ. ಇನ್ನು ಕೆಲವು ದೇಶಗಳಲ್ಲಿ ಪ್ಲಾಸ್ಟಿಕ್‌ ಬಾಟಲಿಗಳಿಂದ ಸಾರ್ವಜನಿಕ ಉದ್ಯಾನವನ, ರೋಡ್‌ ಡಿವೈಡರ್‌ ಗಳನ್ನು ಆಕರ್ಷಕಗೊಳಿಸಲು ಬಳಸಲಾಗುತ್ತಿದೆ.

ಸ್ಮಾರ್ಟ್‌ ನಗರಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಬಾಟಲಿಗಳ ಬಳಕೆ ಕಡಿಮೆಯೇನಿಲ್ಲ. ಸ್ವಚ್ಛಗೊಳಿಸಿದ ಇಂತಹ ಪ್ಲಾಸ್ಟಿಕ್‌ ಬಾಟಲಿಗಳನ್ನು ಆಡಳಿತದ ವತಿಯಿಂದ ಸಂಗ್ರಹಿಸಿ ಅದನ್ನು ನಗರ ಸೌಂದರ್ಯ ವೃದ್ಧಿಗಾಗಿ ಬಳಸಿಕೊಳ್ಳಬಹುದು. ಆಕರ್ಷಕ ಗೋಪುರ ನಿರ್ಮಾಣಕ್ಕೂ ಉಪಯೋಗಿಸಬಹುದು.

ರಸ್ತೆಯ ಡಿವೈಡರ್‌ ನಲ್ಲಿ ಹೂಗಿಡಗಳನ್ನು ನೆಡಲು, ಉದ್ಯಾನ ವನಗಳನ್ನು ಸುಂದರಗೊಳಿಸಲು ಮರು ಬಳಕೆ ಮಾಡಬಹುದು. ಇದು ಪ್ರವಾಸಿಗರನ್ನು ತನ್ನತ್ತ ಸೆಳೆಯುವುದು ಮಾತ್ರವಲ್ಲ ಇದರಿಂದ ತ್ಯಾಜ್ಯವೊಂದನ್ನು ಸಂಪೂರ್ಣ ಮರು ಬಳಕೆ ಮಾಡಿದಂತಾಗುವುದು.

ನೈಜೀರಿಯಾ ಮಾದರಿ
ಆಫ್ರಿಕಾ ಖಂಡದ ನೈಜೀರಿಯಾ ದೇಶದಲ್ಲಿ ಉತ್ಪಾದನೆಯಾಗುತ್ತಿದ್ದ ಪ್ಲಾಸ್ಟಿಕ್‌ ಬಾಟಲಿಗಳನ್ನು ಪರಿಸರ ಸ್ನೇಹಿಯನ್ನಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಪ್ಲಾಸ್ಟಿಕ್‌ಗಳನ್ನು ಮನೆ ನಿರ್ಮಾಣ ಕಾರ್ಯಕ್ಕೆ ಬಳಕೆ ಮಾಡುತ್ತಿದ್ದಾರೆ. ಏನಿಲ್ಲವಾದರೂ ಸುಮಾರು 3 ಮಿಲಿಯನ್‌ ಪ್ಲಾಸ್ಟಿಕ್‌ ಬಾಟಲಿಗಳಿಂದ ಮನೆಯ ಟೆರೇಸ್‌, ಪ್ರತ್ಯೇಕ ಕೊಠಡಿ, ಒಳಾಂಗಣವನ್ನು ಆಕರ್ಷಣೀಯಗೊಳಿಸಲು ಬಳಕೆ ಮಾಡಲಾಗುತ್ತಿದೆ. ಸುಮಾರು 17 ಮಿಲಿಯನ್‌ ಮನೆಗಳ ನಿರ್ಮಾಣಕ್ಕೆ ಪ್ಲಾಸ್ಟಿಕ್‌ ಬಾಟಲಿಗಳನ್ನು ಬಳಸಿಕೊಳ್ಳಲಾಗಿದೆ. ಈ ಪ್ಲಾಸ್ಟಿಕ್‌ ಬಾಟಲಿಯಿಂದ ನಿರ್ಮಾಣ ಮಾಡಿದ ಮನೆಗಳು ಪ್ರಾಣಿ ಹಾಗೂ ಮಾನವ ತ್ಯಾಜ್ಯದಿಂದ ಬಿಡುಗಡೆಯಾಗುವ ಮಿಥೇನ್‌, ಸೌರ ಶಕ್ತಿಯನ್ನೂ ನಿಯಂತ್ರಿಸುವುದರಿಂದಾಗಿ ಈ ಮನೆಗಳು ಕಾರ್ಬನ್‌ ಮುಕ್ತ ಮನೆಗಳಾಗುತ್ತವೆ. ಈ ಮಾದರಿಯ ಮನೆಗಳ ನಮ್ಮ ಮಂಗಳೂರಿಗೂ ಬಂದರೆ ಉತ್ತಮವಲ್ಲವೇ? 

ಶಿವ ಸ್ಥಾವರಮಠ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.