ನಗರದಲ್ಲೂ ನಿರ್ಮಾಣವಾಗಲಿ ವೀಕ್ಷಣ ಗೋಪುರ 


Team Udayavani, Sep 9, 2018, 1:01 PM IST

9-sepctember-15.jpg

ಮಂಗಳೂರಿಗೆ ಬರುವ ಹೆಚ್ಚಿನ ಪ್ರವಾಸಿಗರನ್ನು ಮೊದಲು ಆಕರ್ಷಿಸುವುದು ಸಮುದ್ರ ತೀರಗಳು. ಆದರೆ ಸಮುದ್ರ ವೀಕ್ಷಣೆಗಾಗಿ ಪ್ರವಾಸಿಗರು ಉಳ್ಳಾಲ, ತಣ್ಣೀರು ಬಾವಿ ಅಥವಾ ಪಣಂಬೂರಿಗೆ ಹೋಗುವ ಅನಿವಾರ್ಯತೆಯಿದೆ. ತೀರ್ಥಕ್ಷೇತ್ರಗಳ ವೀಕ್ಷಣೆಯ ಅನಂತರ ಸಮಯದ ಅಭಾವದಿಂದ ಪ್ರವಾಸಿಗರಿಗೆ ಸುಲಭದಲ್ಲಿ ಸಮುದ್ರ ನೋಡುವ ಹಾಗೂ ನಗರದ ಪಕ್ಷಿ ನೋಟದ ಅವಕಾಶ ದೊರೆಯದೆ ನಿರಾಶೆಯಾಗುವುದಿದೆ.

ಈ ಹಿಂದೆ ಸಮುದ್ರ ವೀಕ್ಷಣೆಗೆ ಅತ್ಯಂತ ಪ್ರಶಸ್ತ ತಾಣ ಬಾವುಟಗುಡ್ಡೆಯ ಠಾಗೋರು ಉದ್ಯಾನವನವಾಗಿತ್ತು. ಅಂದು ಅರಬ್ಬಿ ಸಮುದ್ರದಲ್ಲಿ ಮುಳುಗುವ ಕೆಂಬಣ್ಣದ ಸೂರ್ಯನನ್ನು ನೋಡುವ ನಯನ ಮನೋಹರ ದೃಶ್ಯವನ್ನು ಇಲ್ಲಿ ಕಾಣಬಹುದಾಗಿತ್ತು. ಆದರೆ ಇಂದು ಅಡ್ಡ ಗೋಡೆಯಂತೆ ಎದ್ದು ನಿಂತ ಕಟ್ಟಡಗಳಿಂದ ಹಳೆಯ ನೆನಪು ಹಾಗೇ ಉಳಿದಿದೆ. ದಶಕಗಳಿಂದ ಮಂಗಳೂರಿನ ನಾಗರಿಕರಿಗೆ ಲಭ್ಯವಿದ್ದ ಅತ್ಯುತ್ತಮ ಪ್ರಕೃತಿ ಸೌಂದರ್ಯದ ತಾಣ ತನ್ನ ಚೆಲುವನ್ನೀಗ ಕಳೆದುಕೊಂಡಿದೆ. ನಗರವಿಡೀ ನಿರ್ಮಾಣವಾದ ಗಗನ ಚುಂಬಿ ಕಟ್ಟಡಗಳ ತುದಿಯಿಂದ ನಗರದ ಪಕ್ಷಿ ನೋಟದ ದೃಶ್ಯ ಲಭ್ಯವಿದ್ದರೂ ಸಾಮಾನ್ಯ ನಾಗರಿಕರಿಗೆ ಹಾಗೂ ಪ್ರವಾಸಿಗರಿಗೆ ಇಲ್ಲಿ ಅವಕಾಶ ದೊರೆಯಲಾರದು.

ಐಫೆಲ್‌ ಟವರ್‌, ಟೋಕಿಯೊ ಟವರ್‌ ನಂತೆ ಮಂಗಳೂರಿನಲ್ಲೂ ಸುಂದರವಾದ ವೀಕ್ಷಣ ಗೋಪುರ ನಿರ್ಮಾಣದ ಆವಶ್ಯಕತೆ ಇದೆ. ನಗರದ ಎತ್ತರದ ಪ್ರದೇಶದಲ್ಲಿ ಇದು ನಿರ್ಮಾಣವಾದರೆ ಸಾಕಷ್ಟು ಪ್ರವಾಸಿಗರನ್ನು ಇತ್ತ ಸೆಳೆಯಲು ಸಾಧ್ಯವಿದೆ. ಬಾವುಟಗುಡ್ಡೆ, ಕದ್ರಿ ಗುಡ್ಡೆಯಲ್ಲಿ ಈ ಗೋಪುರವನ್ನು ನಿರ್ಮಾಣ ಮಾಡಬಹುದು. ಈ ಮೂಲಕ ಮಂಗಳೂರಿನ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಸಾಧ್ಯವಿದೆ. ಜತೆಗೆ ಆದಾಯ ಹೆಚ್ಚಿಸಲು ಅವಕಾಶವಿದೆ.
 ಯು.ಜಿ. ಕೇದಾರನಾಥ,
 ಮಂಗಳೂರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.