ಅಪರೂಪದ ತೆಂಕುತಿಟ್ಟಿನ ಬೊಂಬೆಯಾಟ

ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘ ಪ್ರಸ್ತುತಿ

Team Udayavani, Sep 20, 2019, 5:00 AM IST

t-3

ಒಂದೆಡೆ ಪೂಜೆಗೊಳ್ಳುತ್ತಿರುವ ವಿಘ್ನೇಶ್ವರ. ಇನ್ನೊಂದೆಡೆ ಆರ್ಭಟಿಸುತ್ತಿರುವ ನರಕಾಸುರ. ವಿಘ್ನೇಶ್ವರ ಶಾಂತಚಿತ್ತನಾಗಿ ಕುಳಿತು ಸರ್ವವನ್ನೂ ವೀಕ್ಷಿಸುತ್ತಾನೆ. ಅಟ್ಟಹಾಸಗೈಯ್ಯುತ್ತಾ ನರಕಾಸುರ ನಡುಕ ಹುಟ್ಟಿಸುತ್ತಾನೆ. ವಿಘ್ನೇಶ್ವರನ ಸುತ್ತಲೂ ಕೋಟಿ ಸೂರ್ಯಪ್ರಕಾಶ. ಭಯಾತಂಕ ಸೃಷ್ಟಿಸುವ ನರಕಾಸುರನ ದಾಳಿಗೆ ಸರ್ವನಾಶ. ಮೂಡುಬೆಳ್ಳೆಯಲ್ಲಿ ನಲುವತ್ತನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ತೆಂಕುತಿಟ್ಟು ಯಕ್ಷಗಾನ ಬೊಂಬೆಯಾಟವನ್ನು ಆಯೋಜಿಸಲಾಗಿತ್ತು.

ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘ ಪ್ರಸ್ತುತಪಡಿಸಿದ ನರಕಾಸುರ ವಧೆ-ಗರುಡ ಗರ್ವಭಂಗ ರಮ್ಯಾದ್ಭುತ ಸನ್ನಿವೇಶವನ್ನು ಸೃಷ್ಟಿಸಿ ಜನಮನ್ನಣೆ ಪಡೆಯಿತು. ಕೆ. ವೆಂಕಟಕೃಷ್ಣಯ್ಯ ಅವರು ಸ್ಥಾಪಿಸಿದ ಈ ಸಂಸ್ಥೆಯು ಯಕ್ಷಗಾನ ಕಲೆಗೆ ಕಾಯಕಲ್ಪ ನೀಡುತ್ತಿದ್ದು, ಪ್ರಸ್ತುತ ಏಕೈಕ ತೆಂಕುತಿಟ್ಟಿನ ಯಕ್ಷಗಾನ ಬೊಂಬೆಯಾಟ ತಂಡವಾಗಿದೆ.

ವಿ| ಕಲ್ಲಕಟ್ಟ ಲಕ್ಷ್ಮೀನಾರಾಯಣಯ್ಯರ ಧರ್ಮಪತ್ನಿ ಅಕ್ಕಮ್ಮ ಪಾರ್ತಿಸುಬ್ಬನ ವಂಶಜೆ. ವೆಂಕಟಕೃಷ್ಣಯ್ಯನವರು ಈ ದಂಪತಿಯ ಪುತ್ರ. ಅವರೇ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಸ್ಥಾಪಕರು. ಅವರ ಪುತ್ರ ಕೆ. ವಿ. ರಮೇಶ ಸಂಘದ ನಿರ್ದೇಶಕರು ಮತ್ತು ಪ್ರಧಾನ ಸೂತ್ರಧಾರರು. ದೇಶವಿದೇಶಗಳಲ್ಲಿ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನೀಡಿರುವ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘವು ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ.

ಬೆಳ್ಳೆಯಲ್ಲಿ ಪ್ರದರ್ಶನಗೊಂಡ ನರಕಾಸುರ ವಧೆ- ಗರುಡ ಗರ್ವಭಂಗ ಪ್ರಸಂಗ ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಖ್ಯಾತ ಭಾಗವತ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರ ಶ್ರುತಿ ಮಧುರ ಪದಶೈಲಿ, ಯಕ್ಷಗಾನದ ಪ್ರಸಿದ್ಧ ಕಲಾವಿದರ ಅರ್ಥಗಾರಿಕೆ, ಸೂತ್ರಧಾರರ ಅದ್ಭುತ ಕೈಚಳಕ ಈ ಪ್ರಸಂಗ ಯಶಸ್ವಿಯಾಗಲು ಮುಖ್ಯ ಕಾರಣ.

ಪ್ರಧಾನ ಸೂತ್ರಧಾರ ಕೆ. ವಿ. ರಮೇಶ ಅವರ ಸಹಸೂತ್ರಧಾರರಾದ ಡಾ| ಓಂಪ್ರಕಾಶ್‌ ಕೆ.ವಿ., ತಿರುಮಲೇಶ ಕೆ.ವಿ., ಸುದರ್ಶನ ಕೆ.ವಿ., ಚಂದ್ರಶೇಖರ ವಿ., ಅನೀಶ್‌ ಪಿಲಿಕುಂಜೆ ಅವರ ಕೈಚಳಕದಲ್ಲಿ ಯಕ್ಷಗಾನ ಬೊಂಬೆಗಳು ಜೀವಚೈತನ್ಯ ಪಡೆದು ಭಾವಪೂರ್ಣವಾಗಿ ಅಭಿನಯಿಸಿದುವು. ಒಂದು ಸಾರ್ಥಕ ರಂಗಪ್ರದರ್ಶನವಾಗಿ ಯಕ್ಷಗಾನ ಬೊಂಬೆಯಾಟ ದಾಖಲಾತಿ ಪಡೆಯಿತು.

ರಾಧಾಕೃಷ್ಣ ಕೆ. ಉಳಿಯತ್ತಡ್ಕ

ಟಾಪ್ ನ್ಯೂಸ್

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.