ಮತ್ತೂಮ್ಮೆ ಸುನಾದ ಯುವದನಿ 


Team Udayavani, Jun 30, 2017, 3:35 AM IST

KALA-2.jpg

ಸಂಗೀತ ಎನ್ನುವುದು ಒಂದು ಸ್ವತಂತ್ರವಾದ ಕಲೆ. ಸ್ವತಂತ್ರವಾಗಿ ತನ್ನ ಅಸ್ತಿತ್ವವನ್ನು ಕಂಡುಕೊಂಡು, ಜನರ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿರುವ ವೈಶಿಷ್ಟ್ಯಪೂರ್ಣವಾಗಿರುವ ಕಲೆ. ಶ್ರೋತೃ ವರ್ಗಕ್ಕೆ ಅಲೌಕಿಕವಾದ ಆನಂದವನ್ನು ಒದಗಿಸುವುದರೊಂದಿಗೆ ಸಮಾಜಕ್ಕೆ ಉತ್ತಮ ಮೌಲ್ಯಗಳನ್ನು ನೀಡುವಂತಹ ಶಕ್ತಿ ಸಂಗೀತದ್ದು. ಇಂತಹ ಕಲೆಯನ್ನು ಬೆಳೆಸುವ ಕಾರ್ಯದಲ್ಲಿ ವಿ| ಕಾಂಚನ ಎ. ಈಶ್ವರ ಭಟ್‌ ಇವರ ನೇತೃತ್ವದಲ್ಲಿ “ಸುನಾದ’ ಸಂಸ್ಥೆ ಅವಿರತ ಶ್ರಮಿಸುತ್ತಿದೆ. “ಸುನಾದ ಯುವದನಿ’ ಎಂಬ ಸರಣಿಯಲ್ಲಿ ನಾಡಿನ ಹಲವಾರು ಯುವ ಕಲಾವಿದರುಗಳ ಕಛೇರಿಗಳನ್ನು ಏರ್ಪಡಿಸಿ, ಪ್ರೋತ್ಸಾಹಿಸುವುದರೊಂದಿಗೆ ಸಂಗೀತದ ಅಭಿರುಚಿಯನ್ನು ಪಸರಿಸುವುದು ಕಾರ್ಯಕ್ರಮದ ಮೂಲ ಉದ್ದೇಶ.

ಸುನಾದ ಯುವದನಿ ಸರಣಿಯಲ್ಲಿ 154ನೆಯ  ಕಾರ್ಯಕ್ರಮ “ಸುನಾದ’ ಸಭಾಂಗಣದಲ್ಲಿ ಈಚೆಗೆ ಸಂಪನ್ನಗೊಂಡಿತು. ಮೊದಲಿಗೆ ಕು| ಹರ್ಷಿತಾ ವರ್ಣಿಕಾ ಇವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸ್ಫೂರ್ತಿದಾಯಕ ಗಾಯನದೊಂದಿಗೆ ಉತ್ತಮ ಕಲಾವಿದೆಯಾಗುವ ಭರವಸೆಯನ್ನು ಮೂಡಿಸಿದರು. ಇವರಿಗೆ ವಯಲಿನ್‌ನಲ್ಲಿ ಡಾ| ರಾಮಕೃಷ್ಣ ಭಟ್‌, ಮೃದಂಗದಲ್ಲಿ ಪೃಥ್ವೀರಾಜ್‌ ಸಹಕರಿಸಿದರು. 

 ತದನಂತರ ಬೆಂಗಳೂರಿನ ವಿನಯ ಎಸ್‌. ಆರ್‌. ಇವರಿಂದ ಸಂಗೀತ ಕಛೇರಿ ನಡೆಯಿತು. ಮೈಸೂರು ವಾಸುದೇವಾಚಾರ್ಯರ ನಳಿನಕಾಂತಿ ರಾಗದ ವರ್ಣದೊಂದಿಗೆ ಕಾರ್ಯಕ್ರಮ ಆರಂಭಿಸಿದ ಕಲಾವಿದರು ನಾಟ ರಾಗದ ಚುಟುಕಾದ ಆಲಾಪನೆ, ಸ್ವರ ಪ್ರಸ್ತಾರದೊಂದಿಗೆ ಜಯ ಜಯ ಸ್ವಾಮಿನ್‌ ಕೃತಿಯನ್ನು ಪ್ರಸ್ತುತಪಡಿಸಿದರು. ಅನಂತರ ಅಸಾವೇರಿಯ ಮಾಂಪಾಲವೆಲಸಿ ಇಕ ಕೃತಿಯು ಗಂಭೀರವಾಗಿ ಮೂಡಿಬಂದಿತು. ಪೂರ್ವಿಕಲ್ಯಾಣಿಯ ಆಲಾಪನೆಯೊಂದಿಗೆ ಪರಿಪೂರ್ಣಕಾಮ ಭಾವಮುನ ಬಹಳ ಅಚ್ಚುಕಟ್ಟಾಗಿ ನಿರೂಪಿಸಿದರು. ಸಾಕೇತಾಧಿಪನೀಮುಖ ಎಂಬಲ್ಲಿನ ನೆರವಲ್‌ ಹಾಗೂ ಸ್ವರ ಪೋಣಿಕೆಗಳು ಹಿತವೆನಿಸಿದವು. ಪ್ರಧಾನ ರಾಗವಾಗಿ ಹರಿಕಾಂಭೋಜಿಯ ಒಳಹು ಹೊರಹುಗಳು ಚೆನ್ನಾಗಿ ನಿರೂಪಿತವಾಯಿತು. ಎಂತರಾ ನೀ ಕೃತಿಯಲ್ಲಿನ ನೆರವಲ್‌, ಸ್ವರಪ್ರಸ್ತಾರಗಳು ಭಿನ್ನವಾಗಿ ಮೂಡಿಬಂದವು. ಅನಂತರ ಕಲಿಯುಗದ ಮಹಿಮೆಯು, ಸರ್ವಂ ಬ್ರಹ್ಮಮಯಂ ರಚನೆಗಳು ಭಾವಪೂರ್ಣವಾಗಿ ಪ್ರಸ್ತುತವಾದವು.

ವಿ| ಶಿಲ್ಪಾ ಸಿ. ಎಚ್‌.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.