ಅಭಿಜಾತ ಪ್ರತಿಭೆಯ ನೃತ್ಯ ಪ್ರವೀಣೆ ಅನುಪಮಾ ಶೆಣೈ ಭಟ್‌


Team Udayavani, Apr 14, 2017, 3:50 AM IST

14-KALA-3.jpg

ಒಲಿದ ಕಲೆಯನ್ನು ಉಳಿಸಿ- ಬೆಳೆಸುವುದೊಂದು ಕಲೆಯೇ ಸರಿ. ಅದರಲ್ಲೂ ಕಲೆಯನ್ನು ನೌಕರಿ ಮತ್ತು ಸಂಸಾರದೊಂದಿಗೆ ಸಮತೋಲನಗೊಳಿಸಿ, ನಿಭಾಯಿಸುವುದು ಸುಲಭ ವಲ್ಲ. ಇದಕ್ಕೆ ಕಠಿನ ಪರಿಶ್ರಮ, ಏಕಾಗ್ರತೆ, ತಪಸ್ಸಿನಂತೆ ದುಡಿಮೆ ಇವೆಲ್ಲವೂ ಮುಖ್ಯ. ಅನುಪಮಾ ಶೆಣೈ ಭಟ್‌ ಕಲೆಯನ್ನು ನೌಕರಿ ಮತ್ತು ಸಂಸಾರದೊಂದಿಗೆ ಸಮನ್ವಯಗೊಳಿಸಿ ಯಶ ಕಂಡಿದ್ದಾರೆ.

ಉಡುಪಿ ಮೂಲದ ಕಲಾಪ್ರೇಮಿ ತೋನ್ಸೆ ವೆಂಕಟೇಶ ಶೆಣೈ ಮತ್ತು ಪದ್ಮಿನಿ ವಿ. ಶೆಣೈ ದಂಪತಿಯ ಸುಪುತ್ರಿ ಅನುಪಮಾ ದೂರದರ್ಶನದಿಂದ ಪ್ರಭಾವಿತರಾಗಿ ಆರನೇ ವಯಸ್ಸಿನಿಂದ ಭರತನಾಟ್ಯ ಕಲಿಯಲಾರಂಭಿಸಿದರು. ಹೆತ್ತವರ ಹುರಿದುಂಬಿಸು ವಿಕೆಯಿಂದ ಮುಂಬೈಯ ಮಲಯಾಳಂ ಸಮಾಜದಲ್ಲಿ ಭರತನಾಟ್ಯ ಕಲಿಕೆ ಮುಂದುವರಿಸಿದರು. ತದನಂತರ ಒಡಿಸ್ಸಿ ನೃತ್ಯಾಭ್ಯಾಸದಲ್ಲಿ ತೊಡಗಿ, ತನ್ನ ಅಭಿಜಾತ ಪ್ರತಿಭೆಯನ್ನು ಅನಾವರಣಗೊಳಿಸಲಾರಂಭಿಸಿದರು. ಭರತನಾಟ್ಯ, ಜಾನಪದ, ಒಡಿಸ್ಸಿ ನೃತ್ಯಕಲೆಗಳು ಇವರಲ್ಲಿ ಸಂಗಮಿಸಿವೆ. ಬಿ.ಎಚ್‌.ಎಂ.ಎಸ್ಸಿ ಪದವೀಧರೆಯಾಗಿದ್ದು, ಮುಂಬೈಯ ಪ್ರತಿಷ್ಠಿತ ಕೇಂಬ್ರಿಡ್ಜ್ ಶಾಲೆಯಲ್ಲಿ ಅಧ್ಯಾಪಕಿಯಾಗಿದ್ದಾರೆ.

30 ವರ್ಷ ವಯಸ್ಸಿನ ಇವರು ಪದವಿ ಓದುತ್ತಿರುವಾಗ ಮುಂಬೈ ವಿ.ವಿ.ಯನ್ನು ಪ್ರತಿನಿಧಿಸಿ ಪಡೆದ ಬಹುಮಾನಗಳು ಈ ರಂಗವನ್ನು ಅಪ್ಪಿಕೊಳ್ಳಲು ತಿರುವು ಎನ್ನುತ್ತಾರೆ ಅನುಪಮಾ. ಇಂದುಮತಿ ಲೆಲೆ, ಕೇಟಕಿ ತಂಬಿ ಮತ್ತು ದಿಲೀಪ್‌ ತಂಬಿ ಅನುಪಮಾರ ಗುರುಗಳು. ಏಕಪಾತ್ರಾಭಿನಯಕ್ಕೆ ಪ್ರಾಧಾನ್ಯ ಅವರ ಹೆಚ್ಚುಗಾರಿಕೆ.

ಮಹಾರಾಷ್ಟ್ರ ಮತ್ತು ಕರ್ನಾಟಕದ ಹಲವೆಡೆ ಈ ತನಕ ನೀಡಿದ ನೂರಾರು ಕಾರ್ಯಕ್ರಮಗಳು, ಈಚೆಗೆ ಪ್ರತಿಷ್ಠಿತ ಸ್ವರ-ಸಾಧನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಮಾನ, ಮುಂಬೈಯ ಖ್ಯಾತ ಕೊಂಕಣಿ ಕಲಾಸಂಘದಲ್ಲಿ ಕೆಲಕಾಲ ಸಕ್ರಿಯ ಸೇವೆ, ಸಂಘದ ಲಿಮ್ಕಾ ಬುಕ್‌ನಲ್ಲಿ ದಾಖಲಾದ ನಾಟಕ “ನಂದಾದೀಪ’ದಲ್ಲಿ ಪಾತ್ರ ನಿರ್ವಹಣೆ, ಕವಳೆಶ್ರೀ, ನಾಗಾಲ್ಯಾಂಡ್‌ ರಾಜ್ಯಪಾಲ ಪದ್ಮನಾಭ ಆಚಾರ್ಯ ಸಹಿತ ಹಲವಾರು ಗಣ್ಯರಿಂದ ಗೌರವ-ಪ್ರಶಂಸೆ ಅನುಪಮಾರ ನೃತ್ಯಕಲೆಯ ಕ್ರಿಯಾಶೀಲತೆ-ಸೃಜನಶೀಲತೆ ಮತ್ತು ಸಾಧನೆಗಳಿಗೆ ಪ್ರಮಾಣಗಳು.  ಪ್ರಯೋಗ ಶೀಲೆಯೂ ಅಧ್ಯಯನಶೀಲೆಯೂ ಆಗಿರುವ ಅನುಪಮಾ ತನ್ನ ಸಾಧನೆಗೆ ತನ್ನ ಪತಿ ಮತ್ತು ಕುಟುಂಬಿಕರ ಉತ್ತೇಜನವನ್ನೂ ಸ್ಮರಿಸುತ್ತಾರೆ.

ಸಂದೀಪ್‌ ನಾಯಕ್‌ ಸುಜೀರ್‌

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.