ಗ್ರಾಮೀಣ ಪ್ರದೇಶಕ್ಕೆ ಕಲಾಸ್ಪರ್ಶ ನೀಡಿದ ಆರ್ಟ್‌ ಗ್ಯಾಲರಿ


Team Udayavani, Jun 1, 2018, 6:00 AM IST

z-4.jpg

ಸಾಮಾನ್ಯವಾಗಿ ಪ್ರದರ್ಶನ ಮತ್ತು ಮಾರಾಟದ ದೃಷ್ಟಿಯಿಂದ ಕಲಾಚಟುವಟಿಕೆಗಳ ಇತಿಮಿತಿ ಪಟ್ಟಣ ಪ್ರದೇಶಕ್ಕೆ ಸೀಮಿವಾಗಿರುತ್ತದೆ. ಏಕೆಂದರೆ ಅಲ್ಲಿ ಉತ್ತಮ ಮಟ್ಟದ ಆರ್ಟ್‌ಗ್ಯಾಲರಿಗಳಿರುತ್ತವೆ. ಪ್ರದರ್ಶನದ ವ್ಯವಸ್ಥೆ ಮಾಡಲು, ಕಲಾಕೃತಿಗಳ ಸಾಗಾಟ ನಡೆಸಲು, ಉದ್ಘಾಟನಾ ಸಮಾರಂಭ ನಡೆಸಲು, ಪ್ರಚಾರ ಕೊಡಲು, ಕಲಾಭಿಮಾನಿಗಳನ್ನು ಸೆಳೆಯಲು… ಹೀಗೆ ಎಲ್ಲದಕ್ಕೂ ಅನುಕೂಲ ಎಂಬ ದೃಷ್ಟಿಯಿಂದ ಕಲಾವಿದರೂ ಪಟ್ಟಣ ಪ್ರದೇಶದಲ್ಲಿಯೇ ಕಲಾಪ್ರದರ್ಶನ ನಡೆಸುತ್ತಾರೆ. ಆರ್ಟ್‌ಗ್ಯಾಲರಿಗಳೂ ಪಟ್ಟಣಗಳಲ್ಲಿಯೇ ಸಾಕಷ್ಟಿರುತ್ತವೆ. ಅಲ್ಲೊಂದು ಇಲ್ಲೊಂದು ಎಂಬಂತೆ ಕೆಲವು ಆರ್ಟ್‌ಗ್ಯಾಲರಿಗಳು ಗ್ರಾಮೀಣ ಪ್ರದೇಶದಲ್ಲಿವೆ. ಆರ್ಥಿಕ ಲಾಭದ ದೃಷ್ಟಿಯಿಂದ ಇವು ಪ್ರಯೋಜನಕ್ಕೆ ಬರುವುದಿಲ್ಲ. ಕಲಾಕ್ಷೇತ್ರಕ್ಕೆ ಏನಾದರೂ ಕೊಡುಗೆ ಕೊಡಬೇಕೆಂಬ ಹಂಬಲ ಇರುವವರಿಗೆ ಮಾತ್ರ ಇದನ್ನು ನಡೆಸಲು ಸಾಧ್ಯ. ಅಂತಹುದರಲ್ಲಿ ಉಡುಪಿ ಬಂಟಕಲ್ಲಿನಲ್ಲಿರುವ ಪ್ರಣವ್‌ ಆರ್ಟ್‌ಗ್ಯಾಲರಿ ಒಂದಾಗಿದೆ. 

ಉಡುಪಿಯಿಂದ ಮಂಚಕಲ್‌ ದಾರಿಯಾಗಿ ಕಾರ್ಕಳಕ್ಕೆ ಸಾಗುವ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಪ್ರಶಾಂತ ವಾತಾವರಣ ಹೊಂದಿರುವ ಪುಟ್ಟ ಪ್ರದೇಶ ಬಂಟಕಲ್‌. ಕೆಲವು ಅಂಗಡಿಗಳನ್ನು ಹೊರತುಪಡಿಸಿದರೆ ಕಲಾತ್ಮಕ ದೃಷ್ಟಿಯಿಂದ ಅಷ್ಟೇನೂ ಬೆಳವಣಿಗೆ ಹೊಂದಿದ ಪ್ರದೇಶವಲ್ಲ. ಇಲ್ಲಿನವರೇ ಆಗಿರುವ ರಮೇಶ್‌ ಬಂಟಕಲ್‌ ತನ್ನೂರಿನಲ್ಲಿ ಒಂದು ಆರ್ಟ್‌ಗ್ಯಾಲರಿಯನ್ನು ತೆರೆದರೆ ಹೇಗೆ ಎಂದು ಚಿಂತಿಸಿ ಪ್ರಣವ್‌ ಆರ್ಟ್‌ಗ್ಯಾಲರಿಯನ್ನು ತೆರೆದರು. ಬೆಳೆಯುತ್ತಿರುವ ಯುವ ಕಲಾವಿದರಿಗೆ ಹಾಗೂ ಸಣ್ಣ ಮಟ್ಟಿನ ಕಲಾಪ್ರದರ್ಶನ ನಡೆಸುವವರಿಗೆ ಈ ಗ್ಯಾಲರಿ ಸೂಕ್ತವಾಗಿದೆ. ಈಗಾಗಲೇ ಅಲ್ಲಿ ರಮೇಶ್‌ ಬಂಟಕಲ್‌ ಮತ್ತಿತರ ಕಲಾವಿದರ ಕಲಾಕೃತಿಗಳು ಇಲ್ಲಿ ರಾರಾಜಿಸುತ್ತಿವೆ.

ಕಲೆ-ಕಲಾವಿದ-ಕಲಾಪ್ರದರ್ಶನ-ಕಲಾಸಂಸ್ಥೆ ಯಾವುದೇ ಇರಲಿ ಅದು ಗ್ರಾಮೀಣ ಪ್ರದೇಶದೆಡೆಗೆ ತನ್ನ ಚಟುವಟಿಕೆಗಳನ್ನು ವಿಸ್ತರಿಸಿದಾಗ ನಾಡಿನ ಸಮಗ್ರ ಬೆಳವಣಿಗೆ ಸಾಧ್ಯವಾಗುತ್ತದೆ. ಈ ದೃಷ್ಟಿಯಿಂದ ಗಮನಿಸುವಾಗ ಗ್ರಾಮೀಣ ಪ್ರದೇಶಕ್ಕೆ ತೀರಾ ಆಧುನಿಕ ಕಲ್ಪನೆಯ ಕಲಾಪ್ರದರ್ಶನ ಹಿತವೆನಿಸುವುದಿಲ್ಲ. ಇಲ್ಲಿ ಹಳೆ ಬೇರಿನೊಂದಿಗೆ ಹೊಸ ಚಿಗುರೂ ಬೇಕು. ಪ್ರಕೃತಿ ದೃಶ್ಯ ಚಿತ್ರ, ಸಾಂಪ್ರದಾಯಿಕ, ನೈಜ ಚಿತ್ರ ಕಲಾಕೃತಿಗಳೊಂದಿಗೆ ಒಂದಿಷ್ಟು ನವ್ಯ ದೃಷ್ಟಿಕೋನದ ಕಲಾಕೃತಿಗಳಿದ್ದರೆ ಇಲ್ಲಿ ಕಲಾಪ್ರದರ್ಶನ ಗೆಲ್ಲುತ್ತದೆ. ಈ ಆರ್ಟ್‌ಗ್ಯಾಲರಿಯಲ್ಲಿ ನಿರಂತರ ಕಲಾಪ್ರದರ್ಶನಗಳು ನಡೆದಾಗ ಗ್ರಾಮೀಣ ಜನತೆಯಲ್ಲೂ ಕಲಾಭಿರುಚಿ ಹೆಚ್ಚಬಲ್ಲುದು. 

ಉಪಾಧ್ಯಾಯ ಮೂಡುಬೆಳ್ಳೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.