ಜಾಗತಿಕ ಬಂಟ ಪ್ರತಿಷ್ಠಾನ ಪ್ರಶಸ್ತಿಗೆ ವಂಡ್ಸೆ ನಾಗಯ್ಯ ಶೆಟ್ಟಿ


Team Udayavani, Aug 24, 2018, 5:36 PM IST

3.jpg

ಜೀವನದ ಒಂಭತ್ತು ದಶಕಗಳನ್ನು ಕಂಡ ಹಾಸ್ಯಗಾರ ನಾಗಯ್ಯ ಶೆಟ್ಟರು ಇನ್ನೇನು ಮರೆತೇ ಹೋದರು ಎಂಬಾಗ ಜಾಗತಿಕ ಬಂಟ ಪ್ರತಿಷ್ಠಾನದ ಪ್ರಶಸ್ತಿ ಅವರನ್ನು ಅರಸಿ ಬಂದಿದೆ. 

ದರ್ಲಿಯಣಿ ನಾಗಯ್ಯ ಶೆಟ್ಟರು ಜನಿಸಿದ್ದು ಸಪ್ಟೆಂಬರ್‌ 15,1930ರಂದು ಕುಂದಾಪುರ ತಾಲ್ಲೂಕಿನ ವಂಡ್ಸೆಯಲ್ಲಿ; ವಂಡ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿಗೆ ಓದು ನಿಲ್ಲಿಸಿ ಯಕ್ಷಗಾನದತ್ತ ಆಕರ್ಷಿತರಾಗಿ ಪ್ರಥಮವಾಗಿ ಸೇರಿದ್ದು ಮಾರಣಕಟ್ಟೆ ಮೇಳವನ್ನು. ಯಕ್ಷಗಾನದ ಹೆಜ್ಜೆಗಾರಿಕೆೆ ಮತ್ತು ತಾಳಗಳನ್ನು ಸ್ವಂತ ಪರಿಶ್ರಮದಿಂದ ಕಲಿತ ಅವರು ವೀರಭದ್ರ ನಾಯಕರನ್ನು ಗುರು ಎಂದು ಸ್ವೀಕರಿಸಿ ನೃತ್ಯ ಹಾಗೂ ಮಾತುಗಾರಿಕೆಯಲ್ಲಿ ಪರಿಣತಿ ಸಾಧಿಸಿದರು. ಕಟ್ಟುವೇಷಗಳನ್ನು ಹಾಸ್ಯ ಪಾತ್ರಗಳಂತೆ ಶ್ರದ್ಧೆಯಿಂದ ಮಾಡಿ ಯಕ್ಷಗಾನದ ವಿವಿಧ ಭೂಮಿಕೆಗಳನ್ನು ನಿರ್ವಹಿಸಿ ಪ್ರಸಿದ್ಧರಾಗಿ ಬಡಗು ತಿಟ್ಟಿನ ಪ್ರಾತಿನಿಧಿಕ ಹಾಸ್ಯಗಾರರೆನಿಸಿದರು.

ಮಾರಣಕಟ್ಟೆ ಮೇಳವೊಂದರಲ್ಲೇ 35 ವರ್ಷಗಳ ಸುದೀರ್ಘ‌ ಸೇವೆ ಸಲ್ಲಿಸಿರುವ ನಾಗಯ್ಯ ಶೆಟ್ಟರು ವಿಶಿಷ್ಟ ಶೈಲಿಯ ಹಾಸ್ಯದಿಂದ ಜನಪ್ರಿಯರಾದರು. ಕಮಲಶಿಲೆ, ಸೌಕೂರು, ಅಮೃತೇಶ್ವರಿ, ಮಂದರ್ತಿ, ಪೆರ್ಡೂರು, ಕೊಡವೂರು ಹಾಗೂ ಹೆಗ್ಗೊàಡು ಮೇಳಗಳಲ್ಲೂ ಸೇವೆ ಸಲ್ಲಿಸಿರುವ ಶೆಟ್ಟರಿಗೆ 41 ವರ್ಷಗಳ ತಿರುಗಾಟದ ಅನುಭವವಿದೆ. ಕುಶಲವದ “ವಾಲ್ಮೀಕಿ’ ನಳ ದಮಯಂತಿಯ “ಬಾಹುಕ’ ಶೂರ್ಪನಖಾ ವಿವಾಹದ “ವಿದ್ಯುಜ್ಜಿಹ್ವ’, ವಿರಾಟಪರ್ವದ “ಚಿಕ್ಕ’, ಶ್ರೀಕೃಷ್ಣ ಗಾರುಡಿಯ “ಗಾರುಡಿ’ ಇತ್ಯಾದಿ ಪಾತ್ರಗಳಲ್ಲಿ ಅಪಾರ ಜನಮನ್ನಣೆ ಗಳಿಸಿದ ಅವರಿಗೆ “ಹಾಸ್ಯಗಾರ ನಾಗಯ್ಯ ಶೆಟ್ಟಿ’ ಎಂದೇ ಹೆಸರಾಯಿತು. 

ಕೊಕ್ಕ‌ರ್ಣೆ ನರಸಿಂಹ ನಾಯ್ಕ, ಹಾರಾಡಿ ರಾಮ ಗಾಣಿಗ, ಕುಷ್ಟ ಗಾಣಿಗ, ನಾರಾಯಣ ಗಾಣಿಗ, ಮಜ್ಜಿಗೆಬೈಲು ಚಂದಯ್ಯ ಶೆಟ್ಟಿ, ಬಣ್ಣದ ಸಂಜೀವ ನಾಯ್ಕ, ಹಾಸ್ಯಗಾರ ಮಂಜುನಾಥ ಪರಾಡಿ ಮೊದಲಾದ ಬಡಗುತಿಟ್ಟಿನ ಪ್ರಸಿದ್ಧ ಕಲಾವಿದರೊಂದಿಗೆ ರಂಗಸ್ಥಳ ಹಂಚಿಕೊಂಡಿರುವುದು ಅವರ ಹಿರಿಮೆ. ಗುರು ವೀರಭದ್ರ ನಾಯಕರೊಂದಿಗೆ “ಚಿತ್ರಗುಪ್ತ’, ಶಿರಿಯಾರ ಮಂಜುನಾಥ ನಾಯ್ಕ ಮತ್ತು ವಂಡಾರು ಬಸವ ನಾಯರಿ ಜೊತೆ ಅವರು ಮಾಡುತ್ತಿದ್ದ “ಬಾಹುಕ’ಪಾತ್ರ  ಜನಪ್ರಿಯ. 

ಇದೀಗ ಜಾಗತಿಕ ಬಂಟ ಪ್ರತಿಷ್ಠಾನ ಟ್ರಸ್ಟ್‌ ಡಾ. ಡಿ.ಕೆ ಚೌಟ ದತ್ತಿನಿಧಿಯಿಂದ ಹಿರಿಯ ಯಕ್ಷಗಾನ ಕಲಾವಿದರಿಗೆನೀಡುವ ಪ್ರಶಸ್ತಿಗೆ 2018-19ರ ಸಾಲಿನಲ್ಲಿ ವಂಡ್ಸೆ ನಾಗಯ್ಯ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಆಗಸ್ಟ್‌ 26ರಂದುಮಂಗಳೂರಿನಲ್ಲಿ ಜರಗುವ ಪ್ರತಿಷ್ಠಾನದ ಮಹಾಸಭೆಯಲ್ಲಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸುವರು.

ಭಾಸ್ಕರ ರೈ ಕುಕ್ಕವಳ್ಳಿ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.