ಚಿಣ್ಣರ ಯಕ್ಷ ಧಿಂ – ಕಿಟ 


Team Udayavani, May 25, 2018, 6:00 AM IST

c-10.jpg

ಬೇಸಿಗೆ ರಜೆಯಲ್ಲಿ ಆಯೋಜನೆಯಾಗುತ್ತಿರುವ ಯಕ್ಷಗಾನ ಶಿಬಿರಗಳು ವಿದ್ಯಾರ್ಥಿಗಳನ್ನು ಹೆಚ್ಚು-ಹೆಚ್ಚು ಆಕರ್ಷಿಸುತ್ತಿವೆ. ಶಿಬಿರದ ಮೂಲಕ ನೂರಾರು ವಿದ್ಯಾರ್ಥಿಗಳು ಹೆಜ್ಜೆ ಕಲಿತು ಗೆಜ್ಜೆಕಟ್ಟಿ ರಂಗಪ್ರವೇಶಿಸುತ್ತಿದ್ದಾರೆ.

ಯಕ್ಷಗಾನ ಕಲೆಗೆ ಸಾಕಷ್ಟು ಪ್ರೋತ್ಸಾಹ ನೀಡುವ ಕೋಟದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಕೂಡ ಇಲ್ಲಿನ ಯಕ್ಷಗಾನ ಕಲಾ ಕೇಂದ್ರ ಹಂಗಾರಕಟ್ಟೆ ಆಶ್ರಯದಲ್ಲಿ ಸಾಲಿಗ್ರಾಮದಲ್ಲಿರುವ ಯಕ್ಷಗಾನ ಕೇಂದ್ರದ ಸದಾನಂದ ರಂಗಮಂಟಪದಲ್ಲಿ 15ದಿನಗಳ ಕಾಲ “ನಲಿಕುಣಿ’ ಎನ್ನುವ ಯಕ್ಷಗಾನ ತರಬೇತಿ ಶಿಬಿರ ನಡೆಯಿತು ಹಾಗೂ ಹಂದೆ ಶ್ರೀ ಮಹಾಗಣಪತಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಯಕ್ಷಾಂಗಣ ಟ್ರಸ್ಟ್‌ ವತಿಯಿಂದ ಯಕ್ಷಗಾನ ತರಬೇತಿ ಶಿಬಿರ ನಡೆಯಿತು. ಶಿಬಿರದಲ್ಲಿ ನೂರಾರು ವಿದ್ಯಾರ್ಥಿಗಳು ಯಕ್ಷಗಾನದ ಹೆಜ್ಜೆ, ಭಾಗವತಿಕೆಯನ್ನು ಕಲಿತರು. ಬೆಂಗಳೂರು, ಮೈಸೂರು, ಮುಂಬೈ ಮುಂತಾದ ಕಡೆಗಳಿಂದ ಮಕ್ಕಳು ತಮ್ಮ ಸಂಬಂಧಿಗಳ ಮನೆಗೆ ಆಗಮಿಸಿ ತರಬೇತಿಗೆ ಹಾಜರಾಗಿದ್ದು ವಿಶೇಷವಾಗಿತ್ತು. 

ಹಂಗಾರಕಟ್ಟೆ ಯಕ್ಷಗಾನ ಕೇಂದ್ರ ಯಕ್ಷಗಾನ ಕ್ಷೇತ್ರಕ್ಕೆ ಹಲವಾರು ಮಂದಿ ಮೇರು ಕಲಾವಿದರನ್ನು ನೀಡಿದ ಕೀರ್ತಿಗೆ ಪಾತ್ರವಾಗಿದೆ. ಹೀಗಾಗಿ ಇಲ್ಲಿ ಸಾಂಪ್ರದಾಯಿಕ ಶೈಲಿಯಲ್ಲೇ ತರಬೇತಿಯನ್ನು ನೀಡಲಾಗುತ್ತದೆ. ಯಕ್ಷಾಂಗಣ ಟ್ರಸ್ಟ್‌ ಕೂಡ ಹಳೆಯ ತಟ್ಟು-ಮಟ್ಟುಗಳಿಗನ್ವಯ ತರಬೇತಿ ನೀಡಿತು. ರಾಜ್ಯ ಯಕ್ಷಗಾನ ಅಕಾಡಮಿಯ ಸದಸ್ಯ ರಾಜಶೇಖರ್‌ ಹೆಬ್ಟಾರ್‌ ಅವರ ಸಂಯೋಜನೆಯಲ್ಲಿ, ಗುರುಗಳಾದ ಹಿರಿಯ ಯಕ್ಷಗಾನ ತಜ್ಞ ಸದಾನಂದ ಐತಾಳ ಹಾಗೂ ಮುಂಡಾಡಿ ಬಸವ ಮರಕಾಲ, ನರಸಿಂಹ ತುಂಗ, ಕೇಶವ ಆಚಾರ್‌ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಯಕ್ಷಗಾನ ಟ್ರಸ್ಟ್‌ನಲ್ಲಿ ಸುದರ್ಶನ ಉರಾಳರ ನಿರ್ದೇಶನದಲ್ಲಿ, ಸಂಪನ್ಮೂಲ ವ್ಯಕ್ತಿಗಳಾದ ಕೆ.ಪಿ. ಹೆಗ್ಡೆ, ಸುಜಯಿಂದ್ರ ಹಂದೆ, ನರಸಿಂಹ ತುಂಗ ಕೋಟ, ಮಾಧವ ಮಣೂರು ತರಬೇತಿ ನೀಡಿದರು. ಶಿಬಿರದಲ್ಲಿ ಹೆಜ್ಜೆ, ಅಭಿನಯ, ಮಾತುಗಾರಿಕೆ ಮುಂತಾದವುಗಳನ್ನು ಕಲಿತ ಮಕ್ಕಳು ಕೊನೆಯ ದಿನ ನಡೆದ ಪ್ರಾತ್ಯಕ್ಷಿಕೆಯಲ್ಲಿ ತಾವು ಕಲಿತದನ್ನು ಪ್ರದರ್ಶನಗೊಳಿಸಿದರು. 

ಗಂಡು ಕಲೆ ಎಂದು ಕರೆಸಿಕೊಳ್ಳುವ ಯಕ್ಷಗಾನದ ಕಡೆಗೆ ಹೆಣ್ಣು ಮಕ್ಕಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿತರಾಗಿರುವುದು ಈ ಶಿಬಿರಗಳಲ್ಲಿ ಕಂಡು ಬಂತು. ಕೆಲವು ಕಡೆಗಳಲ್ಲಿ ಶೇಕಡಾ ಐವತ್ತರಷ್ಟು ಹುಡುಗಿಯರು ತರಬೇತಿಯಲ್ಲಿ ಭಾಗವಹಿಸುತ್ತಿದ್ದಾರೆ. ಹೆತ್ತವರು ಕೂಡ ತಮ್ಮ ಮಕ್ಕಳನ್ನು ಯಕ್ಷಗಾನದ ಕಡೆಗೆ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುತ್ತಿರುವುದು ಒಂದು ಉತ್ತಮ ಬೆಳವಣಿಗೆಯಾಗಿದೆ. 

ಅದೇ ರೀತಿ ಕೋಟ ಪರಿಸರದ ಯಕ್ಷಾಂತರಂಗ ಯಕ್ಷತಂಡ, ಅಶ್ವಿ‌ನಿ ಮಧ್ಯಸ್ಥ ಸ್ಮಾರಕ ಶೈಕ್ಷಣಿಕ, ಸಾಂಸ್ಕೃತಿಕ ಕೇಂದ್ರ ಮಣೂರು, ಅಘೋರೇಶ್ವರ ಕಲಾರಂಗ, ವಡ್ಡರ್ಸೆ ಮಹಾಲಿಂಗೇಶ್ವರ ಕಲಾರಂಗ ಮುಂತಾದ ಸಂಘಟನೆಗಳು ಯಕ್ಷಗಾನದ ತರಬೇತಿ ನೀಡುವಲ್ಲಿ ಶ್ರಮಿಸುತ್ತಿದೆ. 

ಈ ಶಿಬಿರಗಳಲ್ಲಿ ಕಲಿತ ವಿದ್ಯಾರ್ಥಿಗಳು ಓರ್ವ ಸಮರ್ಥ ಕಲಾವಿದರಾಗಿ ಹೊರಹೊಮ್ಮದಿದ್ದರು ಉತ್ತಮ ಪ್ರೇಕ್ಷಕನಾಗಿ ಯಕ್ಷಗಾನದ ಒಳಿತು-ಕೆಡುಕುಗಳನ್ನು ವಿಮರ್ಶಿಸುವಲ್ಲಿ ಸಫಲನಾಗುತ್ತಾನೆ. ಎನ್ನುವುದು ಯಕ್ಷ ವಿಮರ್ಶಕರ ಅಭಿಪ್ರಾಯವಾಗಿದೆ.

ರಾಜೇಶ್‌ ಗಾಣಿಗ 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.