ಸಂವೇದನಾತ್ಮಕ ಮೃಣ್ಕಲೆ ಶಿಬಿರ


Team Udayavani, Nov 8, 2019, 3:57 AM IST

cc-10

ಡಿಜಿಟಲ್‌ ಯುಗದಲ್ಲಿ ಮಕ್ಕಳ ಮನಸ್ಸನ್ನು ಆಕರ್ಷಿಸಿ ಅವರ ಸೃಜನಶೀಲತೆ ಬೆಳೆಸಲು ಸೂಕ್ತ ತರಬೇತಿಯನ್ನು ನೀಡುವುದೆಂದರೆ ಸುಲಭದ ಕೆಲಸವಲ್ಲ. ಉತ್ಸಾಹಿ ಸಂಪನ್ಮೂಲ ವ್ಯಕ್ತಿಗಳಿಂದ ಆಕರ್ಷಕ ಶಿಬಿರಗಳು ನಡೆದಾಗ ಮಾತ್ರ ಅದು ಸಾಧ್ಯ. ಚಿಣ್ಣರ ಪ್ರತಿಭೆಗಳನ್ನು ಒರೆಗೆ ಹಚ್ಚಿ ಮಾರ್ಗದರ್ಶನ ನೀಡುವಂತಹ ಕೆಲಸ ಅನೇಕ ಕಲಾಶಿಬಿರಗಳಲ್ಲಿ ನಡೆಯುತ್ತದೆ. ಆದರೆ ಅನುಕರಣೆ ಕಡಿಮೆಯಾಗಿ ಸೃಜನಶೀಲತೆಯ ಅನಾವರಣವೇ ಶಿಬಿರಗಳ ಉದ್ದೇಶವಾಗಬೇಕು. ಆಗ ಮಕ್ಕಳು ಬಹುಮುಖವಾಗಿ ಬೆಳೆಯುತ್ತಾರೆ. ಅಂತಹ ವಿಶಿಷ್ಟ ಕಾರ್ಯಕ್ರಮವೊಂದು ಮಣಿಪಾಲದ ತ್ರಿವರ್ಣ ಆರ್ಟ್‌ ಸೆಂಟರ್‌ನಲ್ಲಿ ಕಲಾವಿದ ಹರೀಶ್‌ ಸಾಗಾ ನೇತೃತ್ವದಲ್ಲಿ ನಡೆಯಿತು. ಮಕ್ಕಳಲ್ಲಿ ಸೃಜನಾತ್ಮಕ ಕ್ರೀಯಾಶೀಲತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಮಣ್ಣಿನೊಂದಿಗಿನ ಸಂವೇದನಾತ್ಮಕವಾದ ಸಂಬಂಧವನ್ನು ಬೆಸೆಯುವ ದೃಷ್ಟಿಯಿಂದ ಈ ಶಿಬಿರವು ಸಂಪನ್ನಗೊಂಡಿತ್ತು.

ಕಲಾವಲಯದಲ್ಲಿ ಸದಾ ಒಂದಿಲ್ಲೊಂದು ಹೊಸತನದ ಚಿಂತನೆಯೊಂದಿಗೆ ಕಲಾಶಿಬಿರ ನಡೆಸುತ್ತಿರುವ ಹರೀಶ್‌ ಸಾಗಾ ಮಕ್ಕಳೊಂದಿಗೆ ಅವರ ಹೆತ್ತವರನ್ನೂ ಕ್ರಿಯಾಶೀಲಗೊಳಿಸಿ ಅವರಿಂದಲೂ ಕಲಾಕೃತಿ ಮೂಡಿಬರುವಂತೆ ಮಾಡುತ್ತಿರುವುದು ವಿಶೇಷವೆನಿಸುತ್ತದೆ. ಅವರು ಹೇಳುವಂತೆ ಮಕ್ಕಳ ಹೆತ್ತವರಲ್ಲಿ ಕಲಾತ್ಮಕತೆ ಹೆಚ್ಚಿದಂತೆ ಅದು ಮಕ್ಕಳ ಕಲಿಕೆಗೆ ಹೆಚ್ಚು ಪೂರಕವಾಗುತ್ತದೆ. ಹಾಗಾಗಿ ಇವರ ಕಲಾಶಿಬಿರದಲ್ಲಿ 18 ವರ್ಷದಿಂದ 75 ವರ್ಷ ವಯಸ್ಸಿನ ಎಲ್ಲರೂ ಇರುತ್ತಾರೆ. ಈ ಬಾರಿ 23 ಮಂದಿ ಭಾಗವಹಿಸಿ 110ಕ್ಕೂ ಮೀರಿ ವೈವಿಧ್ಯಮಯ ಮಣ್ಣಿನ ಕಲಾಕೃತಿಗಳನ್ನು ರಚಿಸಿದ್ದರು. ಹರೀಶ್‌ ಸಾಗಾ ಅವರವರ ವಯಸ್ಸಿಗೆ ಅನುಗುಣವಾಗಿ ಮಾರ್ಗದರ್ಶನ ನೀಡಿ ಸೃಜನಾತ್ಮಕ ಕಲಾಕೃತಿಗಳು ಮೂಡುವಂತೆ ನೋಡಿಕೊಂಡರು.

ಶಿಬಿರಾರ್ಥಿಗಳು ಮಣ್ಣಿನಲ್ಲಿ ಆಡುತ್ತಾ ತಮ್ಮ ಚಿಂತನೆಗಳನ್ನು ಭಟ್ಟಿಯಿಳಿಸುತ್ತಾ ಸಂವೇದನಾತ್ಮಕ ಮೃಣ್ಕಲೆ ಕಲಾಕೃತಿಗಳನ್ನು ಹೊರಹೊಮ್ಮಿಸಿದರು. ಯಕ್ಷಗಾನ ಮತ್ತು ಭೂತದ ಮುಖವಾಡಗಳು, ಗಿಡುಗ, ಗಿಳಿ, ಮೊಸಳೆ ರೂಪದೊಂದಿಗೆ ಮೂಡಿರುವ ಹೂದಾನಿ, ಗಣಪತಿ, ಮೇಣದ ಬತ್ತಿ, ಮರದ ದಿಮ್ಮಿ, ಹೂಜಿ, ಗಿಳಿ, ಮರ, ಗುಲಾಬಿ, ಸೂರ್ಯಕಾಂತಿ, ದೋಣಿ, ಗುಡಿಸಲು, ಕೋಟೆ, ಬಾವಿ, ಭಾವನಾತ್ಮಕವಾಗಿ ಕುಳಿತ ವ್ಯಕ್ತಿ, ಹಣತೆ, ನೊಗ, ಪೆನ್ನಿನ ಸ್ಟಾಂಡ್‌, ಬಾಲಕ, ಬಾವಿ, ಹಂಸ, ಹದ್ದು, ದ್ರಾಕ್ಷಿ ಬಳ್ಳಿ, ಬುದ್ಧ, ಆಮೆ, ಶಂಖ, ಮೀನು, ಪ್ರಕೃತಿ, ಮಾವಿನಹಣ್ಣು ಇತ್ಯಾದಿ ಅವರವರ ಭಾವನೆಗೆ ಸಿಕ್ಕ ಕಲಾಕೃತಿಗಳು ನವರಸಭರಿತವಾಗಿ ರಚನೆಯಾದವು. ತರಬೇತುದಾರರಾಗಿ ಯಶೋದಾ ಬಿ. ಸನಿಲ್‌ ಮತ್ತು ಪವಿತ್ರಾ ಸಿ. ಭಾಗವಹಿಸಿದ್ದರು. ಶಿಬಿರದ ಕೊನೆಯಲ್ಲಿ ರಚನೆಗೊಂಡ ಕಲಾಕೃತಿಗಳನ್ನು ಪ್ರದರ್ಶಿಸಲಾಯಿತು.

ಉಪಾಧ್ಯಾಯ ಮೂಡುಬೆಳ್ಳೆ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.