ಕುಂಚ-ಗಾನ-ನೃತ್ಯ ವೈಭವ


Team Udayavani, May 31, 2019, 6:00 AM IST

v-3

ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಮತ್ತು ಶಾಂತಿವನ ಟ್ರಸ್ಟ್‌ (ರಿ.) ಸಹಯೋಗದೊಂದಿಗೆ ನಡೆದ 17ನೇ ವರ್ಷದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕರಿಸುವ ಸಮಾರಂಭದಲ್ಲಿ ಖ್ಯಾತ ಕಲಾವಿದರಿಂದ ಕುಂಚ-ಗಾನ-ನೃತ್ಯ ವೈಭವ ವಿಶಿಷ್ಟ ಕಾರ್ಯಕ್ರಮ ಅನಾವರಣಗೊಂಡಿತು. ಪ್ರಸಕ್ತ ಸಾಲಿನ ಅಂಚೆ ಕುಂಚ ಸ್ಪರ್ಧೆಗೆ “ಮಹಾತ್ಮಾ ಗಾಂಧೀಜಿ’ ವಿಷಯ ನೀಡಲಾಗಿತ್ತು. ಪುರಸ್ಕಾರ ವಿತರಣಾ ಸಮಾರಂಭದ ವೇದಿಕೆಯ ಎಡಭಾಗದಲ್ಲಿ ಗಂಜೀಫಾ ಕಲಾವಿದ ಮೈಸೂರಿನ ಗಂಜೀಫಾ ರಘುಪತಿ ಭಟ್‌ ಅವರು ಕಾವ್ಯಶ್ರೀ ಅಜೇರು ಅವರ ಯಕ್ಷ ಗಾಯನಕ್ಕೆ ಗಾಂಧಿಜಿಯವರ ಚಿತ್ರವನ್ನು ಕುಂಚದಲ್ಲಿ ಮೂಡಿಸಿ ಬೆರಗುಗೊಳಿಸಿದರೆ, ವೇದಿಕೆಯ ಬಲಭಾಗದಲ್ಲಿ ಕರ್ನಾಟಕದ ಮೊದಲ ವೇಗದ ಚಿತ್ರಕಲಾವಿದೆ ಖ್ಯಾತಿಯ ಮಂಗಳೂರಿನ ಶಬರಿ ಗಾಣಿಗ ಕಪ್ಪು ಕ್ಯಾನ್‌ವಾಸ್‌ ಮೇಲೆ ಕುಂಚದಿಂದ ಚಿತ್ರ ಮೂಡಿಸಿ ಬಿಳಿ ಬಣ್ಣದ ಸಿಂಚನದಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಆಕರ್ಷಕ ಭಾವಚಿತ್ರವನ್ನೇ ಚಿತ್ರಿಸಿ ಎಲ್ಲರನ್ನೂ ಬೆರಗಾಗಿಸಿದ್ದಾರೆ. ಕುಂಚ ಕಲಾಕೃತಿಗೆ ಸ್ಫೂರ್ತಿಯಾಗಿ ವೇದಿಕೆಯ ಮುಂಭಾಗದಲ್ಲಿ ಕಾವ್ಯಶ್ರೀ ಅಜೇರು ಅವರ ಯಕ್ಷ ಗಾಯನ ಮತ್ತು ಉಜಿರೆ ಶ್ರೀ ಧ.ಮಂ. ಕಾಲೇಜಿನ ಯಕ್ಷಕಲಾ ತಂಡದ ಯಕ್ಷನೃತ್ಯದ ಮನೋಜ್ಞ ಅಭಿನಯ ಮೆಚ್ಚುಗೆಗೆ ಪಾತ್ರವಾಗಿತ್ತು.

“ವೈಷ್ಣವ ಜನತೋ ತೇನೆ ಕಹಿಯೆ’ ಗಾಂಧಿ ಸ್ಮತಿ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಿಸಿದ ಕಾವ್ಯಶ್ರೀ ಅಜೇರು “ಕುಡುಮದೊಡೆಯ ಮಂಜುನಾಥ’ ಮತ್ತು “ಪದ್ಮವಿಭೂಷಣ ಧರ್ಮಚಕ್ರವರ್ತಿ ವೀರೇಂದ್ರ ಹೆಗ್ಗಡೆ’ ಗಾಯನದೊಂದಿಗೆ ಮುಂದುವರಿಸಿ “ರಘುಪತಿ ರಾಘವ ರಾಜಾರಾಂ ಪತಿತ ಪಾವನ ಸೀತಾರಾಂ’ ಯಕ್ಷ ಗಾಯನದೊಂದಿಗೆ 20 ನಿಮಿಷಗಳ ವಿಶಿಷ್ಟ ಕಾರ್ಯಕ್ರಮ ಸಮಾಪ್ತಿಗೊಳಿಸಿದರು. ಅವರ ಮಧುರ ಕಂಠ ಸಿರಿಗೆ ಪೂರಕವಾಗಿ ಹಿಮ್ಮೇಳದ ಚೆಂಡೆಯಲ್ಲಿ ಸೀತಾರಾಮ ತೋಳ್ಪಾಡಿತ್ತಾಯ, ಮದ್ದಳೆಯಲ್ಲಿ ಜನಾರ್ದನ ತೋಳ್ಪಾಡಿತ್ತಾಯ, ಪುರುಷ ಪಾತ್ರದಲ್ಲಿ ಶ್ರೀಶಕುಮಾರ್‌ ಹೆಗ್ಡೆ ಹಾಗೂ ಸ್ತ್ರೀ ಪಾತ್ರಗಳಲ್ಲಿ ದಿವ್ಯಶ್ರೀ ಮತ್ತು ಸ್ವಾತಿ ಸಹಕರಿಸಿದ್ದರು. ಯಕ್ಷಗುರು ಅರುಣ ಕುಮಾರ್‌ ಧರ್ಮಸ್ಥಳ ನಿರ್ದೇಶಿಸಿ ಕಾರ್ಯಕ್ರಮ ಸಂಯೋಜಿಸಿದ್ದರು. ಕುಂಚ-ಯಕ್ಷಗಾನ-ನೃತ್ಯ ಒಂದಕ್ಕೊಂದು ಎರಕಹೊಯ್ದಂತೆ ಓತಪ್ರೋತವಾಗಿ ಹರಿದು ಬಂದು ಕುತೂಹಲ, ಆಕರ್ಷಣೆಗೆ ಒಳಗಾಗಿತ್ತು. ನಟ ಮುಖ್ಯಮಂತ್ರಿ ಚಂದ್ರು ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಾ| ಹೆಗ್ಗಡೆಯವರು ಕಲಾವಿದರ ಪ್ರತಿಭೆಯನ್ನು ಮುಕ್ತಕಂಠದಿಂದ ಅಭಿನಂದಿಸಿದರು.

ಯುವ ಪ್ರತಿಭೆಗಳನ್ನು ಬೆಳಕಿಗೆ ತರುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಅಂಚೆ ಕುಂಚ ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಕಳೆದ 17 ವರ್ಷಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಿರುವುದು ಯುವ ಕಲಾವಿದರಿಗೆ ಕ್ಷೇತ್ರದಿಂದ ನೀಡುತ್ತಿರುವ ಪೋ›ತ್ಸಾಹದ ದ್ಯೋತಕವೆನ್ನಬಹುದು.

ಸಾಂತೂರು ಶ್ರೀನಿವಾಸ ತಂತ್ರಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.