ಕಸದಿಂದ ರಸ  


Team Udayavani, Feb 2, 2018, 2:52 PM IST

20-38.jpg

ಉಡುಪಿ ವಳಕಾಡಿನ ಸರಕಾರಿ ಪ್ರೌಢಶಾಲೆಯಲ್ಲಿ ನಿರುಪಯೋಗಿ ವಸ್ತುಗಳಿಂದ ಸಂಗೀತ ಉಪಕರಣಗಳನ್ನು ರಚಿಸಿ ಅದನ್ನು ಹಾಡಿನೊಂದಿಗೆ ನುಡಿಸುವ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಹತ್ತನೆಯ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆ ತಯಾರಿಯ ಸಂದರ್ಭದಲ್ಲಿ ಎಂಟನೆಯ ಮತ್ತು ಒಂಭತ್ತನೆಯ ತರಗತಿಯ ಮಕ್ಕಳು ವ್ಯರ್ಥ ಕಾಲಹರಣ ಮಾಡುವ ಬದಲು ಅವರ ಸಮಯದ ಸದುಪಯೋಗಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ವಿಕಸನ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಯೋಗ, ಧ್ಯಾನ, ಚಿಂತನ, ಮೌಲ್ಯ ಶಿಕ್ಷಣ, ಸಂಪನ್ಮೂಲ ವ್ಯಕ್ತಿಗಳಿಂದ ಲಲಿತಕಲೆಗಳ ತರಬೇತಿ ನಡೆದು ಮಕ್ಕಳನ್ನು ಪುನಶ್ಚೇತನಗೊಳಿಸುವ ಕಾರ್ಯ ನಿರಂತರಗೊಳ್ಳುತ್ತಿದೆ. 

 ಸುಮಾರು ಇನ್ನೂರು ವಿದ್ಯಾರ್ಥಿಗಳು ಭಾಗವಹಿಸಿದ್ದ ವಿಕಸನ ಸಪ್ತಾಹದ ಮೊದಲೆರಡು ದಿನ ಕಲಾವಿದೆ ಪವನ ಬಿ. ಆಚಾರ್‌ ಲಲಿತಕಲೆಗೆ ಸಂಬಂಧಪಟ್ಟು ಸಂಗೀತ-ಕ್ರಾಫ್ಟ್ ಮಿಶ್ರಿತ ಕಾರ್ಯಾಗಾರ ನಡೆಸಿದರು. ಸಂಗೀತದಲ್ಲಿ ಶ್ರುತಿ ಎಂದರೇನು? ಶ್ರುತಿಗೆ ಸ್ವರವನ್ನು ಲೀನಗೊಳಿಸುವುದು ಮತ್ತು ಲಯ/ತಾಳದ ಬಗ್ಗೆ ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಮಾನವನ ಧ್ವನಿ ಪೆಟ್ಟಿಗೆಯ ರಚನೆ, ಅದರ ಕಾರ್ಯವೈಖರಿ, ವೈಜ್ಞಾನಿಕ ಹಿನ್ನೆಲೆಯ ಬಗ್ಗೆ ಹಾಗೂ ಧ್ವನಿಪೆಟ್ಟಿಗೆಯನ್ನು ಆರೋಗ್ಯಪೂರ್ಣವಾಗಿರಿಸಲು ಮಾಡುವ ಭಾÅಮರಿ ಪ್ರಾಣಾಯಾಮದ ಬಗ್ಗೆ ಪ್ರಾತ್ಯಕ್ಷಿಕೆ ನೀಡಿ ಮಕ್ಕಳ ಕುತೂಹಲಭರಿತವಾದ ಪ್ರಶ್ನೆಗಳಿಗೆ ಉತ್ತರಿಸಿದರು. ಪ್ರಾರ್ಥನಾ ಗೀತೆದೇಶಭಕ್ತಿ ಗೀತೆಗಳನ್ನು ಸ್ವರಬದ್ಧವಾಗಿ ಕಲಿಸಿಕೊಟ್ಟರು. 

 ಎರಡನೇ ದಿನ ಕಸದಿಂದ ರಸ ತತ್ವಕ್ಕೆ ಮಹತ್ವಕೊಟ್ಟು ಸಂಗೀತ ಉಪಕರಣಗಳನ್ನು ಸುಲಭವಾಗಿ ತಯಾರಿಸುವ ಹಾಗೂ ಅದನ್ನು ಹಾಡುಗಾರಿಕೆಯ ವೇಳೆ ನುಡಿಸುವ ಬಗ್ಗೆ ಪವನ ಆಚಾರ್‌ ಪ್ರಾತ್ಯಕ್ಷಿಕೆ ನೀಡಿದರು. ವೀಣೆಯನ್ನು ಹೋಲುವ ತಂತಿವಾದ್ಯ, ಲಯವಾದ್ಯ ತಬಲಾ, ಚಿಕಿ-ಚಿಕಿ, ಬುಡುಬುಡಿಕೆ, ತಾಳಗಳನ್ನು ಕರಾವಳಿಯಲ್ಲಿ ಹೇರಳವಾಗಿ ಸಿಗುವ ತೆಂಗಿನಕಾಯಿ ಗೆರಟೆ, ಸೋಗೆಯ ದಿಂಡುಗಳನ್ನು ಬಳಸಿ ರಚಿಸುವ ಕುಶಲಕಲೆಯನ್ನು ಮಕ್ಕಳಿಗೆ ಹೇಳಿಕೊಟ್ಟರು. ದೊಡ್ಡ ಗಾತ್ರದ ಗೆರಟೆಗಳನ್ನು ವೀಣೆಯ ಬುರುಡೆಗೆ, ತಬಲಾದ ಪಾತ್ರೆಗೆ ಬಳಸಲಾಯಿತು. ದಪ್ಪ ಕಾಗದ, ರಬ್ಬರ್‌ ಬ್ಯಾಂಡ್‌, ಬೀಣೆ, ತಂತಿಗಳನ್ನು ಬೇಕಾದ ಹಾಗೆ ಬಳಸಿಕೊಂಡು ಬಿಗುವಾಗಿ ಬಂಧಿಸಿ ವೈವಿಧ್ಯಮಯ ಸ್ವರ ಬರುವಂತೆ ವ್ಯವಸ್ಥೆಗೊಳಿಸಲಾಯಿತು. ಬಣ್ಣಗಳಿಂದ ಅಲಂಕಾರ ಮಾಡಲಾಯಿತು. ಹಿಂದಿನ ದಿನ ಕಲಿತ ಹಾಡುಗಳಿಗೆ ಈ ವಾದ್ಯಗಳನ್ನು ಅಳವಡಿಸಿಕೊಂಡು ಸುಸ್ವರದೊಂದಿಗೆ ಹಾಡಲಾಯಿತು. ನಂತರ ವಿದ್ಯಾರ್ಥಿಗಳು ತಮ್ಮ ಇಷ್ಟದ ಹಾಡುಗಳಿಗೆ ಈ ವಾದ್ಯಗಳನ್ನು ನುಡಿಸಿ ಹಾಡಿ ಕುಣಿದು ಕುಪ್ಪಳಿಸಿದರು. 

 ಕಾರ್ಯಾಗಾರದ ಯಶಸ್ಸಿನ ಹಿಂದೆ ಕಲಾವಿದೆ ಪವನ ಆಚಾರ್ಯರ ಕಾರ್ಯಕೌಶಲ, ವಿದ್ಯಾರ್ಥಿಗಳ ಉತ್ಸಾಹ. ಕಾರ್ಯತತ್ಪರತೆ, ಸೃಜನಶೀಲತೆ, ಪುಳಕಿತ ಭಾವ ಎದ್ದು ಕಾಣುತ್ತಿತ್ತು. ಇವರಿಗೆಲ್ಲ ಸ್ಫೂರ್ತಿ ತುಂಬುವಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ನಿರ್ಮಲ ಬಿ. ಹಾಗೂ ಕಲಾಶಿಕ್ಷಕರು ವಿಶೇಷ ಪಾತ್ರ ವಹಿಸಿದ್ದರು. ಒಟ್ಟಿನಲ್ಲಿ ಮಕ್ಕಳ ಸಮಯದ ಸದುಪಯೋಗದ ಜೊತೆಗೆ ಅವರ ಸೃಜನಶೀಲತೆಯ ಮೊಳಕೆಗೆ ಇಂಬನ್ನಿಟ್ಟ ಮೋದಪ್ರದ ಕಾರ್ಯಾಗಾರ ಸಮಯೋಚಿತವೆನಿಸಿತು. 

ಉಪಾಧ್ಯಾಯ ಮೂಡುಬೆಳ್ಳೆ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.