ಡಾ| ಶಾಂತಾರಾಮ್‌ ಪ್ರಶಸ್ತಿಗೆ ಕೋಟ ಸುರೇಶ ಬಂಗೇರ


Team Udayavani, Nov 1, 2019, 3:17 AM IST

6

ಕುಂದಾಪುರದ ಭಂಡಾರ್‌ ಕಾರ್ಸ್‌ ಕಾಲೇಜಿನಲ್ಲಿ ಪ್ರತಿ ವರ್ಷ ನ.1ರಂದು ರಾಜ್ಯೋತ್ಸವ ತಾಳಮದ್ದಳೆಯಂದು ಯಕ್ಷಗಾನದ ಉದಯೋನ್ಮುಖ ಕಲಾವಿದರಿಗೆ ನೀಡುವ ಡಾ| ಶಾಂತಾರಾಮ್‌ ಪ್ರಶಸ್ತಿಗೆ ಈ ಬಾರಿ ಕೋಟ ಸುರೇಶ ಬಂಗೇರ ಅವರನ್ನು ಆಯ್ಕೆ ಮಾಡಲಾಗಿದೆ.

ಶಿರಿಯಾರ ಮಂಜು ನಾಯ್ಕರ ಲಾಲಿತ್ಯಪೂರ್ಣ ಶ್ರುತಿಬದ್ಧ ಮಾತುಗಾರಿಕೆ, ವೀರಭದ್ರ ನಾಯ್ಕರ ಹೆಜ್ಜೆಗಾರಿಕೆ, ಮೊಳಹಳ್ಳಿ ಹೆರಿಯ ನಾಯ್ಕರ ರಂಗತಂತ್ರ ಮತ್ತು ಕಿರು ಹೆಜ್ಜೆ ಇವರು ಮೂವರನ್ನು ಒಮ್ಮೆಗೆ ನೋಡಬೇಕಾದರೆ ಸುರೇಶ ಬಂಗೇರರ ವೇಷಗಾರಿಕೆಯ ಸೊಗಸನ್ನು ನೋಡಬೇಕು.ಕನಕಾಂಗಿ ಕಲ್ಯಾಣ,ಜಾಂಬವತಿ ಕಲ್ಯಾಣ,ಕೃಷ್ಣಾರ್ಜುನ-ಸುಭದ್ರ ಕಲ್ಯಾಣ ಸಹಿತ ಯಾವುದೇ ಪ್ರಸಂಗದ ಕ್ರಷ್ಣನಿರಲಿ ಅಲ್ಲಿ ಮಂಜುನಾಯ್ಕರ ನಿರಾತಂಕ ನಿರರ್ಗಳವಾದ ಶ್ರುತಿಬದ್ಧ ಮಾತುಗಾರಿಕೆ,ಕರ್ಣಾರ್ಜುನದ ಅರ್ಜುನ,ವೀರಮಣಿ ಕಾಳಗದ ಪುಷ್ಕಳ,ತಾಮ್ರದ್ವಜ ಮುಂತಾದ ವೇಷಗಳಲ್ಲಿ ಹೆರಿಯನಾಯ್ಕರ ರಂಗ ನಿರ್ವಹಣೆ,ಹೆಜ್ಜೆಗಾರಿಕೆ,ಅತಿಕಾಯನಂಥ ಪಾತ್ರಗಳಲ್ಲಿ ವೀರಭದ್ರ ನಾಯ್ಕರ ಮಟಾ³ಡಿ ಶೈಲಿಯನ್ನು ಗುರುತಿಸಬಹುದು.

ನಡುತಿಟ್ಟಿನಲ್ಲಿ ಇಂದು ಬಹು ಪ್ರಸಿದ್ಧಿಯ ಸುಧನ್ವ ಪಾತ್ರದಾರಿ ಇವರೊಬ್ಬರೇ. ಉತ್ತರ ಕನ್ನಡದ ಭಾವಾಭಿನಯಕ್ಕೆ ದಕ್ಷಿಣ ಕನ್ನಡದ ವೀರಾಭಿನಯ ಸೇರಿಸಿ ಅವರು ಚಿತ್ರಿಸಿದ ಸುದನ್ವ ಯುವ ಕಲಾವಿದರಿಗೆ ಮಾರ್ಗದಶಿ.

ಸುರೇಶರ ವೇಷಗಳಲ್ಲಿ ಗುರುತಿಸ ಬೇಕಾದದ್ದು ಮಾತುಗಾರಿಕೆಯ ಮೋಡಿ ಮತ್ತು ವೇಷಗಾರಿಕೆಯ ಸೊಗಸು. ಎಲ್ಲಿಯೂ ಯಕ್ಷಗಾನದ ಆವರಣ ಭಂಗಮಾಡದೆ ಪಾತ್ರಗಳ ಔಚಿತ್ಯ ಕೆಡಿಸದೆ, ಅನಗತ್ಯ ಸವಾಲು ಹಾಕದೆ ಹಿರಿಯರು ಹಾಕಿಕೊಟ್ಟ ಚೌಕಟ್ಟಿನೊಳಗೆ ಕಡೆದು ನಿಲ್ಲಿಸಿದ ಬಿಂಬದ ಹಾಗೆ ಅವರ ಪಾತ್ರ ಚಿತ್ರಣ.

ಬಡಗುತಿಟ್ಟಿನ ಪುರುಷವೇಷಗಳ ಸಾಂಪ್ರದಾಯಿಕ ಸೊಗಸು ಮೈದುಂಬಿಕೊಂಡ ಸುರೇಶರ ಪರಿಶುದ್ದ ನೃತ್ಯಾಭಿನಯ,ಆಕರ್ಷಕ ಆಳಂಗ,ನಿರರ್ಗಳ ಮಾತುಗಾರಿಕೆ,ಸೊಗಸಾದ ವೇಷಗಾರಿಕೆಯಿಂದ ಇತರರಿಗಿಂತ ಭಿನ್ನವಾಗಿ ಗುರುತಿಸಬಹುದಾಗಿದೆ.

ಮಂದಾರ್ತಿ ಮೇಳದಲ್ಲಿ ಗೆಜ್ಜೆ ಕಟ್ಟಿ ಅನಂತರ 17 ವರ್ಷ ಸೌಕೂರು,ಸಾಲಿಗ್ರಾಮ,ಪೆರ್ಡೂರು ಕಮಲಶಿಲೆ ಮೇಳದಲ್ಲಿ ಸೇವೆ ಸಲ್ಲಿಸಿ ಸದ್ಯ ಅಮೃತೇಶ್ವರಿ ಮೇಳದ ಪುರುಷವೇಷದಾರಿ ಜೊತೆಗೆ ಮೇಳದ ಪ್ರಬಂದಕರಾಗಿ ಸೇವೆ ಸಲ್ಲಿಸುತಿದ್ದಾರೆ.ಹೊಸ ಪ್ರಸಂಗಕ್ಕೂ ನ್ಯಾಯ ಒದಗಿಸಿದ ಅವರಿಗೆ ಬಹು ಪ್ರಸಿದ್ದಿ ತಂದ ಪಾತ್ರ ನಾಗಶ್ರೀಯ ಪ್ರಸಂಗದಲ್ಲಿ ಶಿರಿಯಾರ ಮಂಜು ನಾಯ್ಕರು ಮಾಡುತಿದ್ದ ಶುಬ್ರಾಂಗನ ಪಾತ್ರ. ಸತಿ ಶೀಮಂತಿನಿಯ ಚಂದ್ರಾಂಗದ,ಚೆಲುವೆ ಚಿತ್ರಾವತಿಯ ಹೇಮಾಂಗದ,ಬಾನು ತೇಜಸ್ವಿ ಮುಂತಾದ ಪಾತ್ರಗಳು ಅಷ್ಟೇ ಪ್ರಸಿದ್ಧ.

– ಪ್ರೊ| ಎಸ್‌.ವಿ.ಉದಯ ಕುಮಾರ ಶೆಟ್ಟಿ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.