ಚಿತ್ತಾಕರ್ಷಕ ಜಾನಪದ ನೃತ್ಯ

ಶ್ರೀ ರಾಮ್‌ ಡ್ಯಾನ್ಸ್‌ ಅಕಾಡೆಮಿ ಪ್ರಸ್ತುತಿ

Team Udayavani, Jul 26, 2019, 5:00 AM IST

m-6

ಸುಮಾರು ಹತ್ತು ವರ್ಷಗಳಿಂದ ಜಾನಪದ ರಂಗ ಪ್ರಕ್ರಿಯೆಯಲ್ಲಿ ಕ್ರಿಯಾಶೀಲವಾಗಿರುವ ಸಂಸ್ಥೆ ಶ್ರೀ ರಾಮ್‌ ಡ್ಯಾನ್ಸ್‌ ಅಕಾಡೆಮಿ ಉಡುಪಿ ಜಾನಪದ ನೃತ್ಯವನ್ನು ದೇಶದ ಮೂಲೆ ಮೂಲೆಗಳಲ್ಲಿ ಪ್ರದರ್ಶಿಸಿದೆ. ಮುಖ್ಯವಾಗಿ ಯುವ ಜನರನ್ನು ಕೇಂದ್ರವಾಗಿರಿಸಿಕೊಂಡು ತನ್ನ ಕೆಲಸ ಮಾಡಿದೆ. ವೈಕುಂಠ ಬಾಳಿಗಾ ಕಾನೂನು ವಿದ್ಯಾಲಯ, ಜೈನ್‌ ಕಾಲೇಜು ಮೂಡಬಿದಿರೆ, ಆಳ್ವಾಸ್‌ ಮೂಡಬಿದಿರೆ, ಜೇಸೀಸ್‌ ಸ್ಕೂಲ್‌ ಕಾರ್ಕಳ, ಎಂ.ಪಿ.ಎಂ. ಕಾಲೇಜು ಕಾರ್ಕಳ ಮುಂತಾದ ಸಂಸ್ಥೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದೆ. ಹಂಪಿ ಉತ್ಸವ, ತುಳು ಸಾಹಿತ್ಯ ಸಮ್ಮೇಳನ, ದೆಹಲಿಯಲ್ಲಿ ಜರಗಿದ ಅಖೀಲ ಭಾರತ ಜಾನಪದ ಉತ್ಸವದಲ್ಲಿ ಭಾಗವಹಿಸಿದ ಹೆಗ್ಗಳಿಕೆ, ಶೇಕರ ಬೈಕಾಡಿಯವರ ಸಾರಥ್ಯದಲ್ಲಿ ನಡೆಯುತ್ತಿರುವ ಸಂಸ್ಥೆ ಜೂ.16ರಂದು ಎಂ.ಜಿ.ಎಂ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಮೂರು ಪ್ರಕಾರದ ಜಾನಪದ ನೃತ್ಯಗಳನ್ನು ಪ್ರದರ್ಶಿಸಿದರು.

ಕಂಗೀಲು
ಕರಾವಳಿಯ ಮೂಲ ಜಾನಪದ ನೃತ್ಯ ಪ್ರಕಾರ ಇದು.ರೋಗರುಜಿನಗಳನ್ನು ದೂರ ಮಾಡುವ ನಿಟ್ಟಿನಲ್ಲಿ ಶ್ರೀಕೃಷ್ಣ ಕೊರಗಜ್ಜನ ರೂಪದಲ್ಲಿ ಪ್ರತ್ಯಕ್ಷನಾಗಿ ಜನತೆಯ ಕಷ್ಟಗಳನ್ನು ದೂರ ಮಾಡುತ್ತಾನೆ ಎಂಬ ನಂಬಿಕೆಯ ತಳಹದಿಯಲ್ಲಿ ಕುಣಿಯುವ ಜಾನಪದ ನೃತ್ಯ. ಈ ನೃತ್ಯದಲ್ಲಿ ಕೊರಗಜ್ಜ ಮುಖಕ್ಕೆ ಮಸಿ ಬಳಿದುಕೊಂಡು ಮತ್ತು ತೆಂಗಿನ ಸಿರಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಲಯಬದ್ಧವಾದ ಕಂಗೀಲಿನ ಹಾಡಿನೊಂದಿಗೆ ಕುಣಿತ ಪ್ರಾರಂಭವಾಗುತ್ತದೆ. ಕುಣಿತ ಲಯಬದ್ಧವಾಗಿಯೂ, ಆಕರ್ಷಕವಾಗಿಯೂ ಇರುತ್ತದೆ.

ವೀರಗಾಸೆ
ಹೆಚ್ಚಾಗಿ ಉತ್ತರ ಕರ್ನಾಟಕದವರು, ವೀರಭದ್ರ ದೇವರ ಅರಾಧಿಸಿಕೊಂಡು ಬಂದವರು ವೀರಭದ್ರನ ಕತೆಯನ್ನು ಹೇಳುತ್ತ, ಒಂದು ಕೈಯಲ್ಲಿ ಕತ್ತಿ ಇನ್ನೊಂದು ಕೈಯಲ್ಲಿ ಗುರಾಣಿ ಹಿಡಿದು, ರೋಷಾವೇಷದಿಂದ ವಾದ್ಯ ಮೇಳಗಳೊಂದಿಗೆ ಕುಣಿಯುತ್ತಾರೆ. ಇವರ ವೇಷಭೂಷಣಗಳಲ್ಲಿ ವಿಭಿನ್ನತೆಯನ್ನು ಕಾಣಬಹುದು. ತಲೆಯಲ್ಲಿ ಮುಂಡಾಸು, ನಾಗನ ಹೆಡೆಯುಳ್ಳ ಕಿರೀಟವನ್ನು ತೊಡುತ್ತಾರೆ. ನೋಡಲು ಬಹಳ ಆಕರ್ಷಕವಾಗಿರುತ್ತದೆ.

ಕಂಸಾಳೆ
ಮೈಸೂರು, ಚಾಮರಾಜಪೇಟೆ, ಕೊಳ್ಳೆಗಾಲ ಮುಂತಾದ ಪ್ರದೇಶದಲ್ಲಿ ಮಲೆಮಹಾದೇಶ್ವರನನ್ನು ಆರಾಧಿಸಿಕೊಂಡು ಬಂದ ಜನರು ಕಂಸಾಳೆಯ ಹಾಡಿನೊಂದಿಗೆ ಕೈಯಲ್ಲಿ ತಾಳ, ಕಾಲಿಗೆ ಗೆಜ್ಜೆ ಕಟ್ಟಿ ಲಯಬದ್ಧವಾಗಿ ಕುಣಿಯುತ್ತಾರೆ. ಈ ಕುಣಿತದಲ್ಲಿ ಬೇರೆ ಬೇರೆ ಕಸರತ್ತು, ಪಿರಾಮಿಡ್ಡುಗಳನ್ನು ಕಾಣಬಹುದಾಗಿದೆ. ಆಕರ್ಷಕವಾದ ಗುಂಪು ನೃತ್ಯದಲ್ಲಿ ಮಹಿಳೆಯರು ಮತ್ತು ಪುರುಷರು ಭಾಗವಹಿಸಬಹುದು. ಈ ಮೂರು ನೃತ್ಯ ಪ್ರಕಾರಗಳ ಪ್ರದರ್ಶನ ನೀಡಿದವರು ಕಾಲೇಜು ವಿದ್ಯಾರ್ಥಿಗಳು.

ಜಯರಾಂ ನೀಲಾವರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.