ಯಕ್ಷದೇಗುಲದಲ್ಲಿ ಉಚಿತ ಯಕ್ಷ ಶಿಕ್ಷಣ ಶಿಬಿರ 


Team Udayavani, Jun 1, 2018, 6:00 AM IST

z-1.jpg

ಪ್ರಸಂಗ,ಅರ್ಥಗಾರಿಕೆ,ಅಭಿನಯ ಸಿದ್ಧಾಂತ, ಯಕ್ಷಗಾನ ಮತ್ತು ಮಾಧ್ಯಮ ಸಂಬಂಧ, ಯಕ್ಷಗಾನ ಮತ್ತು ಮಹಿಳೆ, ಪಾತ್ರಗಳ ಮೌಲ್ಯ ವಿವೇಚನೆ, ಕಲಾವಿದರ ವ್ಯಕ್ತಿತ್ವ ಕುರಿತು ಮಾಹಿತಿ ನೀಡಲಾಯಿತು 

 ಯಕ್ಷಗುರು ಮಹಾವೀರ ಪಾಂಡಿ ಅವರ ಯಕ್ಷದೇಗುಲ (ರಿ.) ಈ ಬಾರಿ ಹದಿನೈದು ದಿನಗಳ ಪರ್ಯಂತ ಉಚಿತ ಯಕ್ಷ ಶಿಕ್ಷಣದ ಶಿಬಿರ ನಡೆಸಿ ಯಶಸ್ಸು ಕಂಡಿದ್ದಾರೆ.  ಶಿಬಿರಕ್ಕೆ 87 ಮಕ್ಕಳು ನೋಂದಣಿ ಮಾಡಿಕೊಂಡಿದ್ದರು.ನಿರೀಕ್ಷೆಗಿಂತ ದುಪ್ಪಟ್ಟು ಮಂದಿ ಇರುವುದನ್ನು ಗಮನಿಸಿ ಕಿರಿಯ, ಹಿರಿಯ ಹಾಗೂ ಪ್ರೌಢ ವಿಭಾಗ ಎಂಬ ತಂಡಗಳನ್ನಾಗಿ ರೂಪಿಸುವುದು ಅನಿವಾರ್ಯವಾಯಿತು. 

ಶಿಬಿರದಲ್ಲಿ ಬರೀ ನಾಟ್ಯ ಹೇಳಿಕೊಟ್ಟಿಲ್ಲ. ಬದಲಾಗಿ, ಪ್ರಸಂಗ ಮಾಹಿತಿ, ಅರ್ಥಗಾರಿಕೆ, ಅಭಿನಯ ಸಿದ್ಧಾಂತ, ಯಕ್ಷಗಾನ ಮತ್ತು ಮಾಧ್ಯಮ ಸಂಬಂಧ, ಯಕ್ಷಗಾನ ಮತ್ತು ಮಹಿಳೆ, ಪಾತ್ರಗಳ ಮೌಲ್ಯ ವಿವೇಚನೆ, ಕಲಾಭಿರುಚಿ, ಕಲಾವಿದರ ವ್ಯಕ್ತಿತ್ವ ಕುರಿತು ಮಾಹಿತಿ, ಪರಿಜ್ಞಾನವೊದಗಿಸಲಾಯಿತು.ಮಹೇಶ್‌ ಕನ್ಯಾಡಿ, ರವಿರಾಜ್‌ ಜೈನ್‌, ಚಿದಾ ನಂದ ಕುತ್ಲೂರು ಇವರ ಹಿಮ್ಮೇಳ ದೊಂದಿಗೆ ದಿವಾಣ ಶಿವಶಂಕರ ಭಟ್‌ ಪರಂಪರೆಯ ಪೂರ್ವರಂಗ , ಹರಿರಾಜ್‌ ಶೆಟ್ಟಿಗಾರ್‌ ಯೋಗದೊಂದಿಗೆ ಸಭಾ ಕ್ಲಾಸು, ತೆರೆಕ್ಲಾಸು, ದೀವಿತ್‌ ಎಸ್‌.ಕೆ. ಪೆರಾಡಿ, ಗಣೇಶ್‌ ಶೆಟ್ಟಿ ಸಾಣೂರು ಇವರು ಪರಂಪರೆಯ ಒಡ್ಡೋಲಗ, ನಾಟ್ಯ ಹೇಳಿಕೊಟ್ಟರು. 

 ಕಿನ್ನಿಗೋಳಿಯ ಶ್ರೀಧರ ಡಿ.ಎಸ್‌. , ಉಜಿರೆ ಅಶೋಕ ಭಟ್‌, ಕೆರೆಗದ್ದೆ ವೆಂಕಟರಮಣ ಭಟ್‌, ಗಾಳಿಮನೆ ವಿನಾಯಕ ಭಟ್‌ ಪ್ರಸಂಗ ಮಾಹಿತಿ, ಅರ್ಥಗಾರಿಕೆಯ ಬಗ್ಗೆ ಮಾಹಿತಿ ನೀಡಿದರು. ಹೀಗೆಯೇ ಭಾಗವತ ರಾಮಕೃಷ್ಣ ಮಯ್ಯ (ಹಿಮ್ಮೇಳ ಮುಮ್ಮೇಳಗಳ ಸಾಂಗತ್ಯ), ಚಂದ್ರನಾಥ ಬಜಗೋಳಿ (ಅಭಿನಯ ಸಿದ್ದಾಂತ), ಎಂ. ನಾ. ಚಂಬಲ್ತಿಮಾರ್‌ (ಯಕ್ಷಗಾನ ಮತ್ತು ಮಾಧ್ಯಮ), ದೇವಾನಂದ ಭಟ್‌ (ಪಾತ್ರಗಳ ಮೌಲ್ಯ ವಿವೇಚನೆ), ಕಾರ್ಕಳದ ವಕೀಲ ಸುಗಂಧ ಕುಮಾರ್‌ (ಯಕ್ಷಗಾನ ಮತ್ತು ಕಾನೂನು), ಶಶಿಕಲಾ ಹೆಗ್ಡೆ ಕಾರ್ಕಳ, ಪೂರ್ಣಿಮಾ (ಯಕ್ಷಗಾನ ಮತ್ತು ಮಹಿಳೆಯರು) ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ಕಿನ್ನಿಗೋಳಿಯ ಮೋಹಿನಿ ಕಲಾ ಸಂಪದದ ಮನೋಜ್‌ ಶೆಟ್ಟಿಗಾರ್‌ ಮೂರು ದಿನ ಇದ್ದು ಬಣ್ಣಗಾರಿಕೆ, ವೇಷಗಾರಿಕೆಯ ಬಗ್ಗೆ ಕಲಿಸಿಕೊಟ್ಟರು. ಹಿಮ್ಮೇಳದವರು (ದಿವಾಕರ ಆಚಾರ್ಯ, ಆನಂದ ಗುಡಿಗಾರ ಮತ್ತು ರವಿರಾಜ್‌ ಜೈನ್‌) ಇದ್ದು, ಯಾವುದೇ ಹೆಚ್ಚಿನ ತಯಾರಿ ಇಲ್ಲದೆ, ವೇಷ ಕಟ್ಟದೆ “ಸುದರ್ಶನ ವಿಜಯ’ ಯಕ್ಷಗಾನವನ್ನು (ಈ ಹಿಂದೆ ವೇಷ ಹಾಕಿ ಅನುಭವ ಇದ್ದ) ಶಿಬಿರಾರ್ಥಿಗಳು ಕೊನೆಯ ದಿನ ಪ್ರಸ್ತುತಪಡಿಸಿದರು. ಸ್ವಪರಿಚಯದಿಂದ ತೊಡಗಿ ತರಗತಿಯ ಪಾಠಗಳ ಕುರಿತಾಗಿ , ಯಾವುದೇ ಜಿಜ್ಞಾಸೆಯನ್ನು ಸ್ಪಷ್ಟ , ಸುಲಲಿತ ಕನ್ನಡ ಭಾಷೆಯಲ್ಲಿ ಅಭಿವ್ಯಕ್ತಿಸುವ ಧೈರ್ಯ, ಸಾಮರ್ಥ್ಯವನ್ನು ಉದ್ದೀಪಿಸುವಲ್ಲೂ ಮಹಾವೀರ ಪಾಂಡಿ ಬಹಳಷ್ಟು ಪರಿಶ್ರಮವಹಿಸಿದರು. ಪಾಂಡಿಯವರೊಂದಿಗೆ ಅಧ್ಯಕ್ಷ ಶ್ರೀಪತಿ ರಾವ್‌, ಕೋಶಾಧಿಕಾರಿ ಧರ್ಮರಾಜ ಕಂಬಳಿ ಇವರೇ ಮೊದಲಾದವರು ಸದ್ದಿಲ್ಲದೆ ಕೆಲಸ ಮಾಡುತ್ತಲೇ ಇದ್ದರು.

ಧನಂಜಯ ಮೂಡಬಿದಿರೆ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.