ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು


Team Udayavani, Mar 20, 2020, 10:21 AM IST

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳ ಪ್ರದರ್ಶನವೊಂದು ಇತ್ತೀಚೆಗೆ ಬ್ರಹ್ಮಾವರದ ಆವರ್ಸೆ ಸರಕಾರಿ ಪ್ರೌಢಶಾಲೆಯಲ್ಲಿ ಎರಡು ದಿನ ನಡೆಯಿತು. ಉಡುಪಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಸೃಜನಾತ್ಮಕವಾಗಿ ರಚಿಸಿರುವ ಚಿತ್ರಕಲೆ ಮತ್ತು ಕ್ರಾಫ್ಟ್ ಕೃತಿಗಳ ರಚನೆ, ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನ ನಡೆದು ಶಾಲೆಯ ಎಲ್ಲಾ ಕೊಠಡಿಗಳು ಕಲಾಕೃತಿಗಳಿಂದ ತುಂಬಿತುಳುಕಿದವು. ಕಲಾಕೃತಿಗಳ ಸೊಬಗನ್ನು ಸವಿಯಲು ಎರಡು ದಿನ ಸಾಲದು ಎಂಬ ಗೊಣಗಾಟ ಕೇಳಿಬರುತ್ತಿತ್ತು. ಕಿರಿಯ ಕರಗಳ ಕರಕುಶಲತೆಗೆ ಎಲ್ಲರೂ ಮನಸೋತರು.

ಉಡುಪಿ ಜಿಲ್ಲಾ ಪಂಚಾಯತ್‌, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರೌಢಶಾಲಾ ವೃತ್ತಿ ಶಿಕ್ಷಣ ಶಿಕ್ಷಕರ ಸಂಘ ಹಾಗೂ ಚಿತ್ರಕಲಾ ಶಿಕ್ಷಕರ ಸಂಘಗಳು ಜಂಟಿಯಾಗಿ ಆಯೋಜಿಸಿದ ಈ ಕಲಾಪ್ರದರ್ಶನದಲ್ಲಿ ಪ್ರತಿಯೊಂದು ಶಾಲೆಯ ಮಕ್ಕಳೂ ವಿಶಿಷ್ಟ ಉಮೇದ್ವಾರಿಕೆಯೊಂದಿಗೆ ಅಚ್ಚುಕಟ್ಟಾಗಿ ಚಿತ್ರಗಳನ್ನು, ಕರಕುಶಲ ವಸ್ತುಗಳನ್ನು ಜೋಡಿಸಿಟ್ಟಿದ್ದರು. ಸ್ವತಃ ಮಕ್ಕಳೇ ತಮ್ಮ ಸೃಷ್ಟಿಯೆದುರು ತಾವು ಬೆರಗುಗೊಂಡರು. ಇನ್ನಷ್ಟು ಹೊಸ ಕಲಾಕೃತಿ ರಚಿಸಬೇಕೆಂಬುದಕ್ಕೆ ಈ ಕಲಾಪ್ರದರ್ಶನ ಪ್ರೇರಣೆಯಾಯಿತು.

ಕಸದಿಂದ ರಸ ಎಂಬಂತೆ ಅನುಪಯುಕ್ತ ವಸ್ತುಗಳಿಂದ ರಚಿಸಿದ ಕಲಾಕೃತಿಗಳು ತುಂಬಾ ಇದ್ದವು. ಜೊತೆಗೆ ಪ್ರಕೃತಿಯ ವಸ್ತುಗಳನ್ನು ಬಳಸಿ ರಚಿಸಿದ ಕೃತಿಗಳು, ಸಿದ್ಧವಸ್ತುಗಳನ್ನು ಬಳಸಿ ರಚಿಸಿದ ಕಲಾಕೃತಿಗಳು ಹಾಗೂ ತೋಟಗಾರಿಕೆಯ ಫ‌ಲಪುಷ್ಪಗಳು, ಔಷಧೀಯ ಸಸ್ಯಗಳು, ಕಸಿಗಿಡಗಳು ಪ್ರದರ್ಶನದಲ್ಲಿದ್ದವು. ತರಕಾರಿ ಕತ್ತರಿಸಿ ಮೂಡಿಸಿದ ಮಾದರಿಗಳು, ನಿರುಪಯೋಗಿ ರಟ್ಟು, ಕಾಗದ, ಗೆರಟೆ, ಸ್ಟ್ರಾ, ನಾರು, ಬೀಜ, ಧವಸಧಾನ್ಯ, ಮಣಿಗಳು, ಪ್ಲಾಸ್ಟಿಕ್‌ ಬಾಟಿÉಗಳಿಂದ ಸೃಷ್ಟಿಸಿದ ಹೂದಾನಿಗಳು, ಹಕ್ಕಿ ಗೂಡುಗಳು, ಗೂಡುದೀಪಗಳು, ಭತ್ತದ ಕಣಜ, ಯಕ್ಷಗಾನ ಮುಖವಾಡಗಳು, ಬಟ್ಟೆಯ ಕಸೂತಿಗಳು, ಆಭರಣಗಳು, ಶೃಂಗಾರ ಸಾಧನಗಳು, ಮನೆಗುಡಿಸಲುಗಳ ಮಾದರಿಗಳು, ಟೊಪೊಗ್ರಫಿ ಭೂದೃಶ್ಯಗಳು, ಬಲೂನಿನ ಮುಖವಾಡಗಳು ರಾಶಿ ರಾಶಿ ಇದ್ದವು. ಮಕ್ಕಳ ಮೆಚ್ಚಿನ ವಿಷಯಗಳಾದ ಗುಡ್ಡ-ಬೆಟ್ಟಗಳಿರುವ ನಿಸರ್ಗ, ಮಳೆಗಾಲದ ದೃಶ್ಯ, ಕಡಲತೀರ, ಕಂಬಳ, ಕೋಳಿ ಅಂಕ, ತನ್ನ ಮನೆ ಹಾಗೂ ಸುತ್ತಲಿನ ವಾತಾವರಣ, ನನ್ನ ಶಾಲೆ, ನನ್ನ ಮೆಚ್ಚಿನ ನಾಯಿ, ದೀಪಾವಳಿ-ಕ್ರಿಸ್ಮಸ್‌ ಹಬ್ಬ, ಬರ್ತ್‌ಡೇ ಆಚರಣೆ, ಉತ್ಸವ-ಜಾತ್ರೆಗಳು, ಆಟದ ಮೈದಾನ, ಕುಂಬಾರ, ಬಡಗಿ, ದೇವದೇವತೆಗಳ ರೂಪಗಳು ಗ್ಲಾಸ್‌ ಪೈಟಿಂಗ್‌, ಎಂಬ್ರಾಯಟರಿ, ಕೊಲಾಜ್‌ ಹೀಗೆ ವಿವಿಧ ಮಾಧ್ಯಮಗಳಲ್ಲಿ ಆಕರ್ಷಕವಾಗಿ ಮೂಡಿಬಂದಿದ್ದವು. ಅಯಾ ಶಾಲೆಯ ವೃತ್ತಿಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ನಿಂತು ಕಲಾಪ್ರದರ್ಶನವನ್ನು ಚೆಂದಗಾಣಿಸಿಕೊಟ್ಟರು. ಎರಡನೆ ದಿನ ನಡೆದ ಸಮಾರಂಭದಲ್ಲಿ ಅತ್ಯುತ್ತಮ ಮಾದರಿ ರಚಿಸಿದ ಶಾಲೆಗಳಿಗೆ ಬಹುಮಾನ ಹಾಗೂ ಹೂ ಗಿಡಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.

ಉಪಾಧ್ಯಾಯ ಮೂಡುಬೆಳ್ಳೆ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

ಹುಟ್ಟುಹಬ್ಬದ ಕಛೇರಿ “ಜನ್ಮದಿನಮಿದಂ’

ಹುಟ್ಟುಹಬ್ಬದ ಕಛೇರಿ “ಜನ್ಮದಿನಮಿದಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.