ಹೆಗಡೆ , ರಾವ್‌ಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ 


Team Udayavani, May 25, 2018, 6:00 AM IST

c-4.jpg

ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಮೇ 27ರಂದು ಪೆರ್ಲ ಕೃಷ್ಣ ಭಟ್‌ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿ ಸ್ವೀಕರಿಸಲಿರುವ ಪ್ರೊ| ಎಂ.ಎ. ಹೆಗಡೆ ಮತ್ತು ಮಟ್ಟಿ ಮುರಳೀಧರ ರಾವ್‌ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿ ಸ್ವೀಕರಿಸಲಿರುವ ಚಂದ್ರಶೇಖರ ರಾವ್‌ ಬಿ. ಅವರ ಕಿರು ಪರಿಚಯ.

ಪ್ರೊ| ಎಂ.ಎ. ಹೆಗಡೆ 
 ಎಪ್ಪತ್ತರ ಹರೆಯದ ಪ್ರೊ| ಎಂ.ಎ. ಹೆಗಡೆ ಪ್ರಸಂಗಕರ್ತ, ಹವ್ಯಾಸಿ ಯಕ್ಷಗಾನ ಕಲಾವಿದ, ಸಂಸ್ಕೃತ-ಕನ್ನಡ ವಿದ್ವಾಂಸರಾಗಿ ಅನೇಕ ಹೊತ್ತಗೆಗಳನ್ನು ಪ್ರಕಟಿಸಿದವರು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದಂಟಕಲ್‌ ಇವರ ಹುಟ್ಟೂರು. ಅಣ್ಣಪ್ಪ ಹೆಗಡೆ- ಕಾಮಾಕ್ಷಿ ತಂದೆ ತಾಯಂದಿರು. ಸಂಸ್ಕೃತದಲ್ಲಿ ಸ್ನಾತಕೊತ್ತರ ಪದವಿ ಪಡೆದು ಹುಬ್ಬಳ್ಳಿಯಲ್ಲಿ ಎರಡು ವರ್ಷ ಉಪನ್ಯಾಸಕರಾಗಿ ಮುಂದೆ ಸಿದ್ದಾಪುರದ ಮಹಾತ್ಮಾಗಾಂಧಿ ಶತಾಬ್ದಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಾಚಾರ್ಯರಾಗಿ ನಿವೃತ್ತರು.

 ಕಾನ್ಸೂರು, ಗಡಿಮನೆ ಮುಂತಾದ ಬಯಲಾಟ ಮೇಳಗಳಲ್ಲಿ; ಮುಖ್ಯವಾಗಿ ಇಡಗುಂಜಿ ಮೇಳದಲ್ಲಿ ಅತಿಥಿ ಕಲಾವಿದರಾಗಿ ವೇಷ ಮಾಡಿದವರು. ಸೀತಾವಿಯೋಗ, ತ್ರಿಶಂಕು ಚರಿತೆ, ರಾಜಾಕರಂದಮ, ವಿಜಯೀವಿಶ್ರುತ, ಧರ್ಮದುರಂತ, ವಜ್ರ ಕೀರೀಟ, ಆದಿಚುಂಚನ ಗಿರಿ ಕ್ಷೇತ್ರ ಮಹಾತ್ಮೆ ಮುಂತಾದ ಇಪ್ಪತ್ತಕ್ಕೂ ಹೆಚ್ಚು ಯಕ್ಷಗಾನ ಕೃತಿಗಳನ್ನು ಪ್ರಕಟಿಸಿದ್ದಾರೆ. ಯಕ್ಷಗಾನ ಸಾಹಿತ್ಯದಲ್ಲಿಯೇ ಅತ್ಯಂತ ಹಳೆಯ ಆದಿಪರ್ವ ಪ್ರಸಂಗವೂ ಸೇರಿದಂತೆ ಹಸ್ತಪ್ರತಿಗಳ ಸಂಗ್ರಹ ಸಂಶೋಧನೆಯಲ್ಲಿ ತೊಡಗಿ ಹಲವು ಅಮೂಲ್ಯ ಹಳೆಯ ಪ್ರಸಂಗಗಳನ್ನು ಸಂಪಾದಿಸಿದ್ದಾರೆ. ಪ್ರಸಕ್ತ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಸ್ಥಾನದ ಹೊಣೆಗಾರಿಕೆ ಇವರನ್ನು ಅರಸಿ ಬಂದಿದೆ.

 ಚಂದ್ರಶೇಖರ ರಾವ್‌ 
ಎಂಬತ್ನಾಲ್ಕರ ಹರೆಯದ ಚಂದ್ರಶೇಖರ ರಾವ್‌ ಬಿ. ಅರ್ಥದಾರಿಯಾಗಿ, ಸಂಘಟಕರಾಗಿ ಪ್ರಸಿದ್ಧರು. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆಯವರು. ಬಿ.ವೆಂಕಟರಾವ್‌-ಲಕ್ಷ್ಮೀ ದಂಪತಿಯ ಪುತ್ರರಾದ ಇವರು ಸಿದ್ಧಕಟ್ಟೆ ಹೈಯರ್‌ ಎಲಿಮೆಂಟರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ನಿವೃತ್ತರು.

ಯಕ್ಷಗಾನ ಆಸಕ್ತಿ ಬೆಳಸಿಕೊಂಡು ಪುಚ್ಚಕೆರೆ ರಾಮಕೃಷ್ಣ ಮಯ್ಯರ ಶಿಷ್ಯರಾಗಿ ಹಲವು ಹಿರಿ-ಕಿರಿಯ ಒಡನಾಡಿ ಕಲಾವಿದರೊಂದಿಗೆ ತಾವು ಬೆಳೆದು ಉಳಿದವರನ್ನೂ ಬೆಳೆಸಿದವರು. ಭಾಗವತ ಸುಳ್ಯ ಸುಬ್ರಾಯ ಭಟ್‌, ದಿವಾಣ ಭೀಮ ಭಟ್‌, ಸುಳ್ಯ ಮಹಾಬಲ ಭಟ್‌, ಸಿದ್ಧಕಟ್ಟೆ ವಾಸು ಶೆಟ್ಟಿ ಮೊದಲಾದ ಕಲಾವಿದರೊಂದಿಗೆ ಆ ಭಾಗದಲ್ಲಿ ತಾಳಮದ್ದಳೆ ಕೂಟ ಸಂಘಟಿಸಿದವರು.ಶೇಣಿ, ಸಾಮಗ, ಪೆರ್ಲ, ದೇರಾಜೆ, ಜೋಷಿ ಮೊದಲಾದ ಹಿರಿಯ ಕಲಾವಿದರ ಕೂಟಗಳಲ್ಲೂ ತಮ್ಮ ಅರ್ಥಧಾರಿಕೆಯಿಂದ ಶ್ರೋತೃಗಳ ಮನಗೆದ್ದವರು. ಕೃಷ್ಣ, ಮಾಗಧ, ಉತ್ತರ, ಸುಧನ್ವ, ಭೀಷ್ಮ, ದಶರಥ, ಸುಗ್ರೀವ ಮೊದಲಾದ ಪ್ರಧಾನ ಪಾತ್ರಗಳನ್ನು ಸಾಮಾನ್ಯ ಕೂಟಗಳಲ್ಲಿ ನಿರ್ವಹಿಸಿದರೆ ಹಿರಿಯರ ಕೂಟಗಳಲ್ಲಿ ಮಂಡೋದರಿ, ಸೀತೆ, ತಾರೆ ಮೊದಲಾದ ಸ್ತ್ರೀ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡವರು. ಚೊಕ್ಕ ಭಾಷೆ, ಪ್ರಸಂಗದ ಮೇಲಿನ ಹಿಡಿತ, ಸಂಭಾಷಣಾ ವಿಧಾನ, ಹೊಂದಾಣಿಕೆ ಮನೋಭಾವದ ಇವರು ಗುಣಮಟ್ಟದ ಅರ್ಥಧಾರಿ ಎಂದು ಗುರುತಿಸಲ್ಪಟ್ಟವರು.

ಯಕ್ಷಗಾನ ಕಲಾವಿಕಾಸ ಸಂಘ ಮಂಚಿ ಇದರ ಸ್ಥಾಪಕರಾಗಿ ಮೂವತ್ತು ವರ್ಷ ತಾಳಮದ್ದಳೆಗಳನ್ನು ನಡೆಸಿಕೊಟ್ಟವರು. ತಾಳಮದ್ದಳೆಗಳ ಸಂಘಟನೆ ಮತ್ತು ಸಂಯೋಜನೆಯ ಮೂಲಕ ತಾಳಮದ್ದಳೆ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದವರು.

 ಪ್ರೊ| ನಾರಾಯಣ ಎಂ. ಹೆಗಡೆ 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.