ಮೆರೆದ ಕೋಮಲರಿಷಭ ಅಸಾವರಿ ತೋಡಿ


Team Udayavani, Sep 6, 2019, 5:10 AM IST

b-1

ರಂಜನಿ ಮೆಮೋರಿಯಲ್‌ ಟ್ರಸ್ಟ್‌ ಈ ವರ್ಷ ಮೇ ತಿಂಗಳಿನಿಂದ ತಿಂಗಳಿಗೊಂದು ಕಾರ್ಯಕ್ರಮವನ್ನು ಲತಾಂಗಿಯಲ್ಲಿ ಆಯೋಜಿಸುತ್ತಾ ಬಂದಿದೆ. ಈ ಬಾರಿ ಆ.15ರಂದು ಅನಿರುದ್ಧ ಐತಾಳ ಇವರಿಂದ ಹಿಂದೂಸ್ಥಾನಿ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಬೆಳಗ್ಗೆಯೇ ಅಪರೂಪದ ಮಧುರ ರಾಗಗಳನ್ನು ಕೇಳುವ ಅವಕಾಶ ದೊರಕಿತು.

ಕುಂದಾಪುರ ಮೂಲದ ಅನಿರುದ್ಧ ಐತಾಳ್‌ ಇನ್ನೂ ವಿದ್ಯಾರ್ಥಿ. ಚಿಕ್ಕ ವಯಸ್ಸಿನಲ್ಲೇ ಸಂಗೀತ ಅಭ್ಯಾಸ ಮಾಡಿ ಸುಲಲಿತವಾಗಿ ಹಾಡಬಲ್ಲ ಪ್ರತಿಭಾವಂತ ಕಲಾವಿದ. ವಾಡಿಕೆಗಿಂತ ಮೇಲಿನ ಶ್ರುತಿಯಲ್ಲಿ ಹಾಡುವ ಇವರ ಸಣ್ಣ ಸಣ್ಣ ಕುಸುರಿ ಕೆಲಸಗಳು ಹಾಗೂ ಅತಿ ಧೃತ್‌ ಗತಿಯ ತಾನ್‌ಗಳು ಬಹು ಸ್ಪಷ್ಟ. ಈಗಾಗಲೇ ಹಲವಾರು ಹೆಸರಾಂತ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿ ಉತ್ತಮ ಕಲಾವಿದನಾಗಿ ರೂಪುಗೊಳ್ಳುವ ಭರವಸೆಯನ್ನು ಮೂಡಿಸಿದ್ದಾರೆ. ಕಛೇರಿಯಲ್ಲಿ ಮೊದಲಿಗೆ ರಾಗ ಕೋಮಲ ರಿಷಭ ಅಸಾವರಿಯನ್ನು ಆಯ್ದುಕೊಂಡಿದ್ದರು. ಇದರಲ್ಲಿ ಲಂಬಿತ್‌ ಏಕ್‌ತಾಲ್‌ನಲ್ಲಿ ರಬ ಮೆ ರವೊ ಎಂಬ ಪಾರಂಪಾರಿಕ ಬಂದಿಶ್‌ ಹಾಗೂ ಧೃತ್‌ನಲ್ಲಿ ಕಾಜ ಕೀಜಿಯೆ ಎಂಬ ಪಂಡಿತ್‌ ಪುಟ್ಟರಾಜ ಗವಾಯಿಗಳು ರಚಿಸಿದ ಬಂದಿಶ್‌ನ್ನು ಪ್ರಸ್ತುತ ಪಡಿಸಿದರು. ಅನಂತರ ರಾಗ ದೇಸಿಯಲ್ಲಿ ಮಧ್ಯಲಯ ತೀನ್‌ತಾಲ್‌ನಲ್ಲಿ ಬಂದಿಶ್‌ ಒಂದನ್ನು ಹಾಡಿದರು. ಬಳಿಕ ರಾಗ ದೇಸ್‌ಕಾರ್‌ನಲ್ಲಿ, ಪ್ರಸಿದ್ಧವಾದ ಹೂತೊ ತೋರೆ ಕಾರನ ಎಂಬ ರಚನೆಯನ್ನು ಹಾಡಿದರು. ತುಂಬಾ ವಿರಳವಾಗಿ ಕೇಳ ಸಿಗುವ ಕೆಲವು ಕನ್ನಡ ರಂಗಗೀತೆಗಳನ್ನು, ಅವುಗಳ ಸಂದರ್ಭವನ್ನೂ ತಿಳಿಸಿ ಸುಂದರವಾಗಿ ಹಾಡಿದರು. ಮರಾಠಿ ನಾಟ್ಯಸಂಗೀತವನ್ನು ಹಾಡುವ ಪರಿಪಾಠ ಎಲ್ಲಾ ಕಡೆ ಇದೆಯಾದರೂ ಕನ್ನಡ ರಂಗಗೀತೆಗಳು ಅಷ್ಟು ಜನಪ್ರಿಯತೆಯನ್ನು ಪಡೆದಿಲ್ಲ. ಈ ನಿಟ್ಟಿನಲ್ಲಿ, ಅನಿರುದ್ಧ ಅವರು ಇಟ್ಟ ಹೆಜ್ಜೆ ಸ್ತುತ್ಯರ್ಹವಾದದ್ದು. ವಚನ ಹಾಗೂ ಅಭಂಗವೊಂದನ್ನು ಹಾಡಿ, ನಂತರ ಭೈರವಿಯಲ್ಲಿ ಕನ್ನಡ ಹಾಡಿನೊಂದಿಗೆ ಮುಕ್ತಾಯಗೊಳಿಸಿದರು.ಹಾರ್ಮೋನಿಯಂನಲ್ಲಿ ಸತೀಶ್‌ ಭಟ್‌ ಹೆಗ್ಗಾರ ಹಾಗೂ ತಬಲಾದಲ್ಲಿ ಶ್ರೀದತ್ತ ಎಂ.ಜಿ. ಸಾಥ್‌ ನೀಡಿದರು.

ಶ್ರೀಮತಿದೇವಿ, ಮೈಸೂರು

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.