ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಿದ ಯಕ್ಷೋತ್ಸವ

ಅಂತರ್‌ ಕಾಲೇಜು ಯಕ್ಷಗಾನ ಸ್ಪರ್ಧೆ

Team Udayavani, Mar 13, 2020, 6:28 PM IST

yaksotsava-

ಒಟ್ಟಿನಲ್ಲಿ ಯಕ್ಷೋತ್ಸವ ಹಲವಾರು ಯುವ ಯಕ್ಷ ಪ್ರತಿಭೆಗಳನ್ನು ಅನಾವರಣಗೊಳಿಸುವ ಮೂಲಕ ಕಾಲೇಜು ವಿದ್ಯಾರ್ಥಿಗಳು ಯಕ್ಷಗಾನದ ಆಸಕ್ತಿಯಿಂದ ದೂರ ಸರಿಯುತ್ತಿದ್ದಾರೆ ಎಂಬ ಆರೋಪಕ್ಕೆ ತಕ್ಕ ಉತ್ತರ ಕೊಟ್ಟಿತು ಎಂದರೆ ಅತಿಶಯೋಕ್ತಿಯಾಗಲಾರದು.

ಯುವ ಜನತೆ ಯಕ್ಷಗಾನದ ಆಸಕ್ತಿಯಿಂದ ವಿಮುಖರಾಗುತ್ತಿದ್ದಾರೆ ಎನ್ನುವುದು ಸಾಮಾನ್ಯವಾಗಿ ಕೇಳಿ ಬರುತ್ತಿರುವ ಆರೋಪ. ಆದರೆ ಇದಕ್ಕೆ ಅಪವಾದ ಎನ್ನುವ ರೀತಿಯಲ್ಲಿ ಮೂಡಿಬಂದ ಯಕ್ಷ ಹಬ್ಬವೇ ಯಕ್ಷೊàತ್ಸವ -2020.ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯವು ಡಾ| ಡಿ. ವಿರೇಂದ್ರ ಹೆಗ್ಗಡೆಯವರ ಆಶಯದಂತೆ 1991ರಲ್ಲಿ ಪ್ರಾರಂಭಿಸಿದ ಅಂತರ್‌ ಕಾಲೇಜು ಯಕ್ಷಗಾನ ಸ್ಪರ್ಧೆ “ಯಕ್ಷೋತ್ಸವ’ ಯಶಸ್ವಿ 28 ಸಂವತ್ಸರಗಳನ್ನು ಪೂರೈಸಿ 29ನೇ ವರ್ಷಕ್ಕೆ ಪಾದಾರ್ಪಣೆ ಮಾಡಿತು. ಫೆ. 22 ಮತ್ತು 23 ರಂದು ಕಾಲೇಜಿನ ಆವರಣದಲ್ಲಿ ಅದ್ದೂರಿಯಾಗಿ ನಡೆದ ಈ ಯಕ್ಷಹಬ್ಬ ಹಲವಾರು ಯುವ ಯಕ್ಷ ಪ್ರತಿಭೆಗಳ ಅನಾವರಣಕ್ಕೆ ಸಾಕ್ಷಿಯಾಯಿತು.

ಯಕ್ಷ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಟ್ಟ 8 ಮಹಾವಿದ್ಯಾಲಯಗಳು ಸ್ಪರ್ಧಿಸಿದ್ದವು. ಅತಿಥೇಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಿದ “ಏಕಾದಶಿ ಶ್ರೀ ದೇವಿ ಮಹಾತ್ಮೆ’ ಪ್ರಸಂಗ ಯಕ್ಷ ಪ್ರೇಮಿಗಳನ್ನು ಸಭಾಂಗಣದೊಳಕ್ಕೆ ಸೆಳೆಯುವಲ್ಲಿ ಯಶಸ್ವಿಯಾಯಿತು. ಬಳಿಕ ಪ್ರಾರಂಭಗೊಂಡ ಸ್ಪರ್ಧೆಯಲ್ಲಿ ಮೊದಲಿಗೆ ಪ್ರದರ್ಶಿಸಲ್ಪಟ್ಟ ಪ್ರಸಂಗ “ದಕ್ಷಾಧ್ವರ’. ಸುಬ್ರಹ್ಮಣ್ಯದ ಕೆ.ಎಸ್‌.ಎಸ್‌. ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಿದ ಈ ಪ್ರಸಂಗ ಆರಂಭದಲ್ಲಿ ಕೊಂಚ ನೀರಸವೆನಿಸಿದರೂ ಆ ಬಳಿಕ ತನ್ನ ಲಯವನ್ನು ಕಂಡುಕೊಂಡಿತು. ದಾಕ್ಷಾಯಣಿ ಪಾತ್ರದಾರಿ ಕು| ಅನಘಾ ಎಂ.ಜಿ. ಅಭಿನಯದಲ್ಲಿ ತೋರಿದ ಪ್ರೌಢಿಮೆ ಮೆಚ್ಚುಗೆಗೆ ಪಾತ್ರವಾಯಿತು. ಆ ಬಳಿಕ ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜು, ಕಟೀಲು ಇವರು ಪ್ರದರ್ಶಿಸಿದ “ನರಕಾಸುರ ಮೋಕ್ಷ’ ಪ್ರಸಂಗದಲ್ಲಿ ವಿದ್ಯಾರ್ಥಿಗಳು ತೋರಿದ ವೃತ್ತಿಪರತೆ ಯಾವುದೇ ಯಕ್ಷಗಾನ ಮೇಳಗಳಿಗಿಂತ ಕಡಿಮೆಯಾಗಿರಲಿಲ್ಲ. ಮೊದಲ ದಿನದ ಕೊನೆಯ ಪ್ರಸಂಗ “ಕೃಷ್ಣಲೀಲೆ ಕಂಸವಧೆ’. ಪ್ರದರ್ಶನ ನೀಡಿದವರು ಡಾ| ದಯಾನಂದ ಪೈ ಮತ್ತು ಸತೀಶ್‌ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು. ಕೊನೆಯ ಪ್ರದರ್ಶನವಾದರೂ ಪ್ರೇಕ್ಷಕರನ್ನು ಕೊನೆಯವರೆಗೂ ಉಳಿಸಿಕೊಳ್ಳುವಲ್ಲಿ ಸಫ‌ಲವಾಯಿತು.

ಯಕ್ಷ ಹಬ್ಬದ ಎರಡನೇ ದಿನ ಆರಂಭಗೊಂಡಿದ್ದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಉದ್ಯಮಾಡಳಿತ ಕಾಲೇಜಿನ “ನರಕಾಸುರ ಮೋಕ್ಷ’ ಪ್ರಸಂಗ‌ದೊಂದಿಗೆ. ಇಲ್ಲಿಯೂ ವಿದ್ಯಾರ್ಥಿಗಳು ತಾವು ಯಾವುದೇ ವೃತ್ತಿಪರ ಕಲಾವಿದರಿಗೆ ಸರಿಸಾಟಿಯಾಗಿ ನಿಲ್ಲಬಲ್ಲೆವು ಎಂಬುದನ್ನು ತೋರಿಸಿಕೊಟ್ಟರು. ಅನಂತರ ಪ್ರದರ್ಶನಗೊಂಡ ಪ್ರಸಂಗ “ಸಾಯುಜ್ಯ ಸಂಗ್ರಾಮ’. ಪ್ರದರ್ಶಿಸಿದವರು ಆಳ್ವಾಸ್‌ ಕಾಲೇಜು ಮೂಡಬಿದ್ರೆ. ಯಕ್ಷೋತ್ಸವದ ಒಟ್ಟು ಪ್ರದರ್ಶನಗಳಲ್ಲಿ ಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ಅಗ್ರಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಯಿತು. ತರಣಿಸೇನ ಪಾತ್ರದಾರಿ ಶಬರೀಶ ಆಚಾರ್ಯ ಮೆಚ್ಚುಗೆಯನ್ನು ಗಳಿಸುವುದರ ಜೊತೆಗೆ ಸ್ಪರ್ಧೆಯಲ್ಲಿ ಪ್ರಥಮ ವೈಯಕ್ತಿಕ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡರು. ಶ್ರೀ ಗೋವಿಂದ ದಾಸ ಕಾಲೇಜು ಸುರತ್ಕಲ್‌ ಇವರು ಪ್ರದರ್ಶಿಸಿದ “ಸುಧನ್ವಮೋಕ್ಷ’ ಪ್ರಸಂಗ ಆಳ್ವಾಸ್‌ ಕಾಲೇಜಿನ ಪ್ರದರ್ಶನವನ್ನು ಸರಿಗಟ್ಟುವಂತೆ ಕಂಡಿತು. ಸುಧನ್ವ ಪಾತ್ರದಾರಿ ಕು| ಪೂಜಾ ಯು.ಎ. ಅದ್ಭುತ ಹಾವಭಾವ ಹಾಗೂ ಕುಣಿತದ ಮೂಲಕ ಪದೇಪದೆ ಚಪ್ಪಾಳೆ ಗಿಟ್ಟಿಸಿಕೊಂಡರು.

ಸ್ಪರ್ಧೆಯ ಅಂತಿಮ ಭಾಗದಲ್ಲಿ ಎಸ್‌.ಡಿ.ಎಂ. ಕಾಲೇಜು ಉಜಿರೆ ಇವರಿಂದ ಪ್ರದರ್ಶಿಸಲ್ಪಟ್ಟ “ಸುದರ್ಶನ ಗರ್ವಭಂಗ’ ಪ್ರಸಂಗ ಉತ್ಕೃಷ್ಟ ಮಟ್ಟವನ್ನೇ ಕಾಯ್ದುಕೊಂಡಿತು ಶತ್ರುಪ್ರಸೂದನ ಪಾತ್ರದಾರಿ ಮುಖೇಶ್‌ ದೇವಧರ ಉತ್ತಮ ಪ್ರದರ್ಶನದ ಮೂಲಕ ತೃತೀಯ ವೈಯಕ್ತಿಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

ಒಟ್ಟಿನಲ್ಲಿ ಯಕ್ಷೋತ್ಸವ ಹಲವಾರು ಯುವ ಯಕ್ಷ ಪ್ರತಿಭೆಗಳನ್ನು ಅನಾವರಣಗೊಳಿಸುವ ಮೂಲಕ ಕಾಲೇಜು ವಿದ್ಯಾರ್ಥಿಗಳು ಯಕ್ಷಗಾನದ ಆಸಕ್ತಿಯಿಂದ ದೂರ ಸರಿಯುತ್ತಿದ್ದಾರೆ ಎಂಬ ಆರೋಪಕ್ಕೆ ತಕ್ಕ ಉತ್ತರ ಕೊಟ್ಟಿತು ಎಂದರೆ ಅತಿಶಯೋಕ್ತಿಯಾಗಲಾರದು. ಯಾವುದೇ ನಿಯಮಗಳಲ್ಲಿಯೂ ಕಿಂಚಿತ್ತೂ ರಾಜಿ ಮಾಡಿಕೊಳ್ಳದೆ ಯಕ್ಷಗಾನದ ಘನತೆ, ಗಾಂಭೀರ್ಯವನ್ನು ಉಳಿಸಿಕೊಂಡು ಪ್ರೇಕ್ಷಕರ ಮೆಚ್ಚುಗೆಯನ್ನು ಪಡೆಯುವಲ್ಲಿ ಎಸ್‌.ಡಿ.ಎಂ. ಕಾನೂನು ಕಾಲೇಜಿನ ತಂಡ ಯಶಸ್ವಿಯಾಯಿತು.

ಪುಷ್ಪರಾಜ್‌ ಕೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.