ಜೂನ್‌ 9ಕ್ಕೆ “ರಾತ್ರಿ ಆಟ’


Team Udayavani, Jun 9, 2018, 6:00 AM IST

c-1.jpg

“ಕಲಾ ಪ್ರೇಕ್ಷಕರಿಗಾಗಿ’ ಎಂಬ ಘೋಷವಾಕ್ಯದೊಂದಿಗೆ ಸಮಾನ ಮನಸ್ಕ ಯಕ್ಷಗಾನ ಆಸಕ್ತರ ಕೂಡುವಿಕೆಯಿಂದ ಹುಟ್ಟಿಕೊಂಡ ಉಡುಪಿಯ ತೆಂಕುತಿಟ್ಟು ವೇದಿಕೆ ಈ ಬಾರಿ ಐದನೇ ವರ್ಷದ “ರಾತ್ರಿ ಆಟ’ಕ್ಕೆ ಸಜ್ಜಾಗುತ್ತಿದೆ. ಈ ಸಂಘಟನೆಯ ಮೂಲ ಉದ್ದೇಶ ಒಂದೇ – ವರ್ಷದಲ್ಲಿ ಒಂದು ಅಥವಾ ಎರಡು ಸದಭಿರುಚಿಯ ಯಕ್ಷಗಾನ ಪ್ರದರ್ಶನಗಳನ್ನು ಇಡೀ ರಾತ್ರಿ ಕಾಲ ಆಯೋಜಿಸಿ ಆಸಕ್ತ ಕಲಾಭಿಮಾನಿಗಳಿಗೆ ಯಕ್ಷಾನಂದವನ್ನು ಉಣಬಡಿಸುವುದು. 

ಕಳೆದ ನಾಲ್ಕು ವರ್ಷಗಳಿಂದ ಜೂನ್‌ ಆದಿಭಾಗದಲ್ಲಿ ಇಂತಹ ಯಕ್ಷಗಾನ ಪ್ರದರ್ಶನಗಳನ್ನು ಆಯೋಜಿಸಿದ ತೆಂಕುತಿಟ್ಟು ವೇದಿಕೆ ಈಗ ನಾಲ್ಕನೆಯ ವರ್ಷದ ಯಕ್ಷಗಾನ ಪ್ರದರ್ಶನವನ್ನು ಅರ್ಪಿಸಲು ಸಜ್ಜಾಗಿದೆ. ಉಡುಪಿ ಮತ್ತು ಆಸುಪಾಸಿನಲ್ಲಿ “ರಾತ್ರಿ ಆಟ’ ಎಂಬುದಾಗಿಯೇ ಹೆಸರನ್ನು ಗಳಿಸಿಕೊಂಡಿರುವ ಈ ಪ್ರದರ್ಶನ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜೂನ್‌ 9ರಂದು ಸಂಜೆ 7 ಗಂಟೆಗೆ ಆರಂಭವಾಗಿ ಮರುದಿನ ಪ್ರಾತಃ ಕಾಲದ ತನಕ ನಡೆಯಲಿದೆ. 

ಆರಂಭದಲ್ಲಿ ಕಟೀಲು ಶ್ರೀ ದುರ್ಗಾ ಮಕ್ಕಳ ಮೇಳದ ಬಾಲರಿಂದ ಸಾಂಪ್ರದಾಯಿಕ ಪೂರ್ವರಂಗದಲ್ಲಿ ಪರಂಪರೆಯ ಪಾಂಡವರ ಒಡ್ಡೋಲಗ ಪ್ರದರ್ಶನ ಕಾಣಲಿದೆ. ಆ ಬಳಿಕ ಬೆಳಗಿನ ತನಕ “ಅಕ್ಷಯಾಂಬರ- ಬಭುವಾಹನ- ರತಿ ಕಲ್ಯಾಣ’ ಪ್ರಸಂಗಗಳು ವೇದಿಕೆಯೇರಲಿವೆ. ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟರಿಗೆ ಈ ವರ್ಷದ ತೆಂಕು ತಿಟ್ಟು ವೇದಿಕೆ ಪ್ರಶಸ್ತಿ ಪ್ರದಾನದೊಂದಿಗೆ 10,000 ರೂ. ಗೌರವನಿಧಿ ಅರ್ಪಿಸಲಾಗುತ್ತದೆ.

ತೆಂಕುತಿಟ್ಟು ವೇದಿಕೆ ಹುಟ್ಟಿಕೊಂಡದ್ದು ಕುತೂಹಲಕರ ರೀತಿಯಲ್ಲಿ. ಯಕ್ಷಗಾನ ಆಸಕ್ತ ಉದ್ಯಮಿ ಸುಧಾಕರ ಆಚಾರ್ಯರು ಅನೇಕ ವರ್ಷಗಳಿಂದ “ಸ್ವಾತಂತ್ರೊéàತ್ಸವ ತಾಳಮದ್ದಲೆ’ಯನ್ನು ಆಯೋಜಿಸುತ್ತ ಬಂದಿದ್ದಾರೆ. ಇದರ ರಜತ ಮಹೋತ್ಸವದ ಸಂದರ್ಭದಲ್ಲಿ 2014ರ ಆಗಸ್ಟ್‌ 15ರಂದು ಸಮಾನಮನಸ್ಕ ಕಲಾಪೋಷಕರ ಸಹಕಾರದೊಂದಿಗೆ ಉದ್ಭವವಾದದ್ದು ತೆಂಕುತಿಟ್ಟು ವೇದಿಕೆ. ಪೌರಾಣಿಕ ಪ್ರಸಂಗಗಳ ಪೂರ್ಣರಾತ್ರಿಯ ಕಲಾಪ್ರದರ್ಶನವನ್ನು ಏರ್ಪಡಿಸುವುದರ ಜತೆಗೆ ಹಿರಿಯ, ಸಾಧಕ ಯಕ್ಷಗಾನ ಕಲಾವಿದರಿಗೆ ಗೌರವ ನಿಧಿಯ ಅರ್ಪಣೆಯ ಜತೆಗೆ ಪ್ರಶಸ್ತಿ ಪ್ರದಾನವನ್ನೂ ತೆಂಕುತಿಟ್ಟು ವೇದಿಕೆ ನಡೆಸುತ್ತ ಬಂದಿದೆ. ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಅನುಗ್ರಹ, ಶ್ರೀಕೃಷ್ಣ ಮಠದ ಆಶ್ರಯ, ಸುಧಾಕರ ಆಚಾರ್ಯ ಮತ್ತು ಅವರ ಸಮಾನಮನಸ್ಕ ಕಲಾ ಪೋಷಕರ ಸಹಕಾರಗಳಿಂದ ತೆಂಕುತಿಟ್ಟಿನ ಚತುರ ಕಲಾವಿದರ ಕೂಡುವಿಕೆಯಲ್ಲಿ ನಡೆಯುವ ಈ ವಿಶಿಷ್ಟ ಯಕ್ಷಗಾನ ಪ್ರದರ್ಶನ ರಸಿಕರ ಕಣ್ಮನಗಳನ್ನು ಸೆಳೆಯಲಿದೆ.

ಕಲಾಪ್ರಿಯ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.