ಪುಟ್ಟ ಕಲಾವಿದರು ಹಚ್ಚಿದ ಹಣತೆಗಳು


Team Udayavani, Mar 3, 2017, 3:50 AM IST

01-KALA-3.jpg

ಕತ್ತಲೆಯೆಂಬ ಅಳುಕಿಗೆ ಎದುರಾಗಿ ಚಿಕ್ಕದೊಂದು ಹಣತೆಯು ಬೆಳಕಿನ ಪಾತ್ರಧಾರಿಯಾಗಬಹುದು. ಒಂದಷ್ಟು ಹಣತೆಗಳು ಒಟ್ಟು ಸೇರಿ ಲೋಕವನ್ನೇ ಬೆಳಗಬಹುದು. ಮಂಗಳೂರಿನ ದಯಾ ಸ್ಕೂಲ್‌ ಆಫ್ ಆರ್ಟ್ಸ್ನ ಶಿಕ್ಷಕ ದಯಾನಂದ್‌ ಅವರು ತಾನು ತರಬೇತಿ ನೀಡುವ ಮಕ್ಕಳಿಂದಲೇ ವರ್ಣಬೆಳಕು ಹರಡಿಸುವ ಸಲುವಾಗಿ ಹಣತೆಗಳು ಎಂಬ ಚಿತ್ರ ಕಲಾಪ್ರದರ್ಶನವನ್ನು ಮಂಗಳೂರಿನ ಪ್ರಸಾದ್‌ ಆರ್ಟ್‌ ಗ್ಯಾಲರಿಯಲ್ಲಿ ನಡೆಸಿದ್ದರು.

ಬಾಲ ಕಲಾವಿದರ ಕಲಾಕೃತಿಗಳು ಈ ಪ್ರದರ್ಶನದಲ್ಲಿದ್ದವು. ಪ್ರತಿಯೊಂದು ಕಲಾಕೃತಿಯಲ್ಲಿಯೂ ಮಕ್ಕಳ ವಯಸ್ಸಿಗೆ ಮೀರಿದ ಪ್ರತಿಭೆ ಸಿಂಚನವಾಗಿದ್ದು ಹಣತೆಗಳ ವರ್ಣಕಾಂತಿ ವ್ಯಾಪ್ತಿ ಮೀರಿ ವಿಸ್ತಾರಗೊಂಡಿತ್ತು. ಜಲವರ್ಣ, ಚಾರ್ಕೋಲ್‌, ಅಕ್ರಿಲಿಕ್‌, ಕ್ರೆಯಾನ್‌ ಮುಂತಾದವುಗಳಿಂದ ರಚಿಸಿದ ವಿವಿಧ ವಸ್ತು ವಿಚಾರಗಳ ಕಲಾಕೃತಿಗಳಿದ್ದರೂ ದಯಾನಂದ್‌ ಅವರ ವಿಶಿಷ್ಟ ಶೈಲಿಯಾಗಿರುವ ಚಾರ್ಕೋಲ್‌ ಮಾದರಿಯಲ್ಲಿ ಮಕ್ಕಳ ವಿಶೇಷ ಪರಿಣತಿಯು ವಿಕಸನಗೊಂಡಂತಿತ್ತು. ಯಾವ ಮಕ್ಕಳಿಗೂ ಈ ಪ್ರದರ್ಶನಕ್ಕೋಸ್ಕರ ಇಂತಹುದೇ ನಿರ್ದಿಷ್ಟ ಕಲಾಕೃತಿ ರಚಿಸಬೇಕೆಂದು ಒತ್ತಡ ಹೇರದೆ ವಿದ್ಯಾರ್ಥಿಗಳ ಸ್ವಇಚ್ಛೆಗೆ ಬಿಟ್ಟ ಕಾರಣ ಹೆಚ್ಚಿನ ಕಲಾಕೃತಿಗಳು ಮಕ್ಕಳು ದಿನಂಪ್ರತಿ ವೀಕ್ಷಿಸುವ ವಸ್ತು ವಿಷಯಗಳನ್ನು ಆಧರಿಸಿದ್ದವು. ಜತೆಗೆ ವರ್ಣರಚನೆಯ ಸಂದರ್ಭದಲ್ಲಿ ಕಲಿಯುವಿಕೆಗೆ ಬಳಸಿಕೊಂಡ ಚಿತ್ತಾರಗಳನ್ನು ಅಭಿವ್ಯಕ್ತಗೊಳಿಸಿದ್ದು ವಿಶೇಷವಾಗಿತ್ತು. ಅನುಷಾ, ನಿಹಿರ, ಸಮನ್ವಿತಾ, ಅನಘಾ, ನಿರೀಕ್ಷಾ, ವೀಣ, ಕರಣ್‌, ತಾರುಣ್ಯ, ಡಿಯಾನ್‌, ಜಾಯ್ಲಿನ್‌, ಶ್ರುತಿ, ನೇಹಾ, ಚೈತ್ರಾ, ಅನ್ವಿತಾ, ಶ್ರೀಪತಿ, ಸುಪ್ರಭಾ ಇವರು ಕಲಾಕೃತಿಗಳ ಮೂಲಕ ತಮ್ಮ ವರ್ಣಪ್ರತಿಭೆಯನ್ನು ಅರಳಿಸಿದ ಬಾಲಕಲಾವಿದರು. 

ಕಲಾ ಪ್ರದರ್ಶನದಲ್ಲಿ ಭಾಗವಹಿಸಿದ್ದ ಬಾಲಕಲಾವಿದರು ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಟ್ಟದವರು. ಮಕ್ಕಳ ವರ್ಣಪ್ರತಿಭೆಗಳನ್ನು ಅರಸಿ, ಬೋಧಿಸಿ, ಶೋಧಿಸುವಂಥದ್ದು ಕಲಾಕ್ಷೇತ್ರದ ಮುಂದಿನ ಬೆಳವಣಿಗೆಗೆ ದಿಕ್ಕಾಗುತ್ತದೆ. 

ದಿನೇಶ್‌ ಹೊಳ್ಳ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.