ಮಹಿಳೆಯರನ್ನು ಸಂಘಟಿಸಿದ ಮಾತೃ ಕೀರ್ತನಾ


Team Udayavani, Jul 6, 2018, 6:00 AM IST

u-4.jpg

ನವವಿಧ ಭಕ್ತಿಯಲ್ಲಿ ಭಜನೆ-ಸಂಕೀರ್ತನೆಗೆ ಮಹತ್ವದ ಸ್ಥಾನವುಂಟು. ದಾಸತ್ವದ ಭಾವದಿಂದ ಮಾಡುವ ಭಗವಂತನ ಗುಣಗಾನವೇ ಇದರ ಸಾರವಾದರೂ ಸಾಮಾಜಿಕವಾಗಿ ಭಜನೆಯಿಂದು ಸಾಮುದಾಯಿಕ ಕ್ರಿಯಾಶೀಲತೆ ಹೆಚ್ಚಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಿದೆ. ಮನೆಯಲ್ಲಿ ಮಕ್ಕಳು ಮರಿಗಳು ಸಂಜೆ ಹೊತ್ತು ಕುಳಿತು ಭಜನೆ ಮಾಡುವುದು ಒಂದು ಕಾಲದಲ್ಲಿದ್ದ ಸಂಪ್ರದಾಯ. ಎಲ್ಲೆಡೆ ಧಾರಾವಾಹಿಗಳೇ ಮೊಳಗುತ್ತಿರುವ ಇಂದಿನ ಸಂಧ್ಯಾ ಕಾಲಗಳಲ್ಲಿ ಭಜನೆ ಕೇವಲ ವಯಸ್ಸಾದವರ ಪ್ರವೃತ್ತಿಯಾಗಿ ಉಳಿದುಕೊಂಡಿದೆ. ಕೆಲವು ಸಮುದಾಯಗಳಲ್ಲಿ ಜನಪದ ಸಂಸ್ಕೃತಿಯ ಭಾಗವೇ ಆಗಿರುವಷ್ಟು ಪ್ರಚಲಿತವಾಗಿದ್ದ ಭಜನೆ ಇಂದು ವಿವಿಧ ಮಾಧ್ಯಮಗಳ ಮೇಲಾಟದಿಂದ ಹಿನ್ನೆಡೆ ಅನುಭವಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಭಜನೆಯನ್ನು ಜನಪ್ರಿಯಗೊಳಿಸುವ ಸಲುವಾಗಿ ಇತ್ತೀಚಿಗೆ ಕಾಸರಗೋಡಿನ ಶ್ರೀ ವರದರಾಜ ವೆಂಕಟರಮಣ ದೇವಸ್ಥಾನದಲ್ಲಿ ನಡೆದ “ಮಾತೃ ಕೀರ್ತನಾ’ ಕಾರ್ಯಕ್ರಮ ಸ್ತುತ್ಯರ್ಹ. ಸಾಂಸ್ಕೃತಿಕ ಮತ್ತು ಸಾಮಾಜಿಕ ಕಳಕಳಿಯ ಸಂಸ್ಥೆಯಾದ ರಂಗಚಿನ್ನಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದನ್ನು ಸಂಘಟಿಸಿತ್ತು. ರಾಮಕೃಷ್ಣ ಕಾಟುಕುಕ್ಕೆ ಮತ್ತು ಜಯಾನಂದ ಕುಮಾರ್‌ ಹೊಸದುರ್ಗ ಇವರ ನೇತೃತ್ವದಲ್ಲಿ ಕಾಸರಗೋಡು, ಕಾಂಞಂಗಾಡ್‌, ಮಂಗಳೂರು, ಪುತ್ತೂರು ಮುಂತಾದ ಕಡೆಗಳಿಂದ ಬಂದ 35 ತಂಡಗಳ ಸುಮಾರು 500 ಮಹಿಳೆಯರು ದಾಸಕೀರ್ತನೆಯನ್ನು ಹಾಡಿದರು. ಅಪರಾಹ್ನ ಸಂಶೋಧಕಿ ಡಾ| ಕಾತ್ಯಾಯಿನಿ ಕುಂಜಿಬೆಟ್ಟು ಉಪನ್ಯಾಸ ನೀಡಿದರು.ಕೊನೆಗೆ ಭಜನೆಗಳನ್ನು ಹಾಡುವ ವಿಧಾನದ ಬಗ್ಗೆ ಖ್ಯಾತಗಾಯಕರಾದ ಶಂಕರ್‌ ಶ್ಯಾನುಭೋಗ್‌ ಪ್ರಾತ್ಯಕ್ಷಿಕೆ ನೀಡಿದರು.

ಮಾತೃಕೀರ್ತನಾ ಕಾರ್ಯಕ್ರಮದಲ್ಲಿ ಹೆಸರು ಕರೆದೊಡನೆ ವೇದಿಕೆ ಏರಿ ತಮ್ಮ ಸ್ಥಾನಗಳಲ್ಲಿ ಕುಳಿತು ಶ್ರದ್ಧಾಪೂರ್ವಕವಾಗಿ ಹಾಡಿದ್ದು ಕಂಡಾಗ ಮಹಿಳೆಯರಿಗೆ ಅವರ ಅಸ್ಮಿತೆಯನ್ನು ಉಳಿಸಿಕೊಳ್ಳುವುದರಲ್ಲಿ ಯಾವ ನಿರ್ಬಂಧವೂ ಲೆಕ್ಕವೇ ಅಲ್ಲ ಎನ್ನಿಸಿತು. ಕೊಟ್ಟ ಅವಕಾಶವನ್ನು ಉಪಯೋಗ ಪಡಿಸಿಕೊಂಡು ತಮ್ಮ ಒಗ್ಗಟ್ಟನ್ನು ಪ್ರತಿಭೆಯನ್ನು ಮೆರೆಸಬೇಕೆಂಬ ಹಂಬಲ ಎಲ್ಲರಲ್ಲಿಯೂ ಇತ್ತು.ಇಲ್ಲಿ ನಡೆದದ್ದು ಸ್ಪರ್ಧೆಯಲ್ಲ. ಆದರೆ ಸ್ಪರ್ಧಾ ಮನೋಭಾವದಿಂದಾಗಿ ಕಾರ್ಯಕ್ರಮ ಮೆರಗು ಪಡೆದುಕೊಂಡಿತ್ತು. ಮಾತೆಯರ ಭಜನೆಗೆ ಸತ್ಯನಾರಾಯಣ ಐಲ, ಜಗನ್ನಾಥ ಶೆಣೈ, ಪುರುಷೋತ್ತಮ ಕೊಪ್ಪಳ ಹಾಮೋನಿಯಂ ಮತ್ತು ಸುಜೀರ್‌ ಗಿರೀಶ್‌ ನಾಯಕ್‌ ಹಾಗೂ ಸಂತೋಷ ಶೆಣೈ ತಬ್ಲಾ ಸಾಥ್‌ ನೀಡಿದರು. ಚೇತೋಹಾರಿಯಾದ ನಿರೂಪಣೆ ಕಾರ್ಯಕ್ರಮವನ್ನು ಇನ್ನಷ್ಟು ಚಂದವಾಗಿಸಿತು. 

 ಸ್ಮಿತಾ ಶೆಣೈ

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.