ಮಧುರಗೀತೆಗಳಿಂದ ಮಂತ್ರಮುಗ್ಧಗೊಳಿಸಿದ “ಇನಿದನಿ’


Team Udayavani, Feb 1, 2019, 12:30 AM IST

x-5.jpg

ಅದೊಂದು ಸುಮಧುರ ಗೀತೆಗಳ ಅಲೆ. ಅಲ್ಲಿಗೆ ಬಂದವರೆಲ್ಲರೂ ಮೂರ್ನಾಲ್ಕು ದಶಕದ ಹಿಂದಿನ ಹಾಡುಗಳನ್ನು ಕೇಳುತ್ತಾ ಭಾವಪರವಶವಾದರು. ಇದಕ್ಕೆಲ್ಲ ಸಾಕ್ಷಿಯಾದದ್ದು ಕಲಾಕ್ಷೇತ್ರ ಕುಂದಾಪುರ 9 ವರ್ಷಗಳಿಂದ ಕುಂದಾಪುರದದಲ್ಲಿ ಆಯೋಜಿಸುತ್ತಿರುವ “ಇನಿದನಿ’ ಸಂಗೀತ ಸಂಜೆ ಮಧುರ ಗೀತೆಗಳ ಗಾಯನ.

ಕುಂದಾಪುರದ ಬೋರ್ಡ್‌ ಹೈಸ್ಕೂಲ್‌ ಮೈದಾನ ದಲ್ಲಿ ಕಿಶೋರ್‌ ಕುಮಾರ್‌ ಸಾರಥ್ಯ ದ ಕಲಾಕ್ಷೇತ್ರ ಕುಂದಾಪುರದ ವತಿಯಿಂದ ನಡೆದ ಇನಿದನಿ ಸಂಗೀತ ಸಂಜೆಯೂ ಹಳೆಯ ಚಿತ್ರಗೀತೆಗಳನ್ನು ಮತ್ತೂಮ್ಮೆ ಕೇಳುವ ಅಪೂರ್ವ ಅವಕಾಶವನ್ನು ಒದಗಿಸಿತ್ತು. 

ಗಗನದಲಿ ಮಳೆಯ ದಿನ ಗುಡುಗಿನ ತನನ ಆ ತನನ ದಿನ ಧರಣಿಯಲಿ ಹಸುರಿನ ಜನನ, ನಗುವ ನಯನ ಮಧುರ ಮೌನ, ಹೋದೆಯ ದೂರ ಓ ಜೊತೆಗಾರ ಸೇರಲು ಬಂದಾಗ, ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ ಹೀಗೆ ಅನೇಕ ಹಾಡುಗಳು ಸುಪ್ರಸಿದ್ಧ ಕಲಾವಿದರ ಕಂಠಸಿರಿಯಲ್ಲಿ ಮೂಡಿ ಬಂದವು. 

ಸಂಗೀತ ಸಂಜೆಗೆ ಜನಸಾಗರ 
ಕೇವಲ 150 ಮಂದಿ ನೋಡುಗರಿಂದ ಆರಂಭಗೊಂಡ ಈ “ಇನಿದನಿ’ ಸಂಗೀತ ಸಂಜೆಗೆ ಈ ಕಳೆದ ಬಾರಿ 8 ಸಾವಿರಕ್ಕೂ ಹೆಚ್ಚು ಮಂದಿ ಕೇಳುಗರು ಬಂದಿದ್ದರೆ, ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಮಂದಿ ತಮ್ಮಿಷ್ಟ ಹಳೆಯ ಹಾಡುಗಳನ್ನು ಮೆಲುಕು ಹಾಕಲು ಬಂದಿದ್ದು ವಿಶೇಷ. ಖ್ಯಾತ ಗಾಯಕರಾದ ಅಜಯ್‌ ವಾರಿಯರ್‌, ಶೃತಿ ಭಿಡೆ, ದಿವ್ಯ ರಾಮಚಂದ್ರ, ವಿನಯ್‌ ಅಡಿಗ, ನಯನ ರಾಜಗೋಪಾಲ್‌, ವೈ.ಎನ್‌. ರವೀಂದ್ರ, ಅಶೋಕ್‌ ಸಾರಂಗ್‌, ಸ್ಥಳೀಯ ಪ್ರತಿಭೆ ಅನನ್ಯ ಕಾಂಚನ್‌ ಅವರು ನೆಚ್ಚಿನ ಗೀತೆಗಳಿಗೆ ಧ್ವನಿಯಾದರು. ಇವರೆಲ್ಲರೂ ಅಂದಿನ ಗೀತೆಗಳ ಗಾಯಕರಂತೆ ತಮ್ಮ ಮಧುರ ಕಂಠದಿಂದ ಹಾಡಿನ ಭಾವ, ರಸಕ್ಕೆ ಅನುಗುಣವಾಗಿ ಧ್ವನಿಯಲ್ಲಿ ಏರಿಳಿತ ತೋರಿ ಮಾಧುರ್ಯ ಗೀತೆಗಳನ್ನು ಹಾಡಿ, ಪ್ರಾವಿಣ್ಯತೆ ಮೆರೆದಿರುವುದು ವಿಶೇಷ. 

 ಡ್ರಮ್ಸ್‌ ವಾದಕ ಕಾರ್ಕಳ ದ ವಾಮನ್‌ ಹಾಗೂ ತಬಲ ವಾದಕ ರಾಜೇಶ್‌ ಭಾಗವತ್‌ ಮೋಡಿ ಮಾಡಿ ದರೆ, ಗಿಟಾರ್‌ನಲ್ಲಿ ರಾಜಗೋಪಾಲ್‌, ಬೇಸ್‌ ಗಿಟಾರ್‌ನಲ್ಲಿ ಟೋನಿ ಡಿಸಿಲ್ವ ಉಡುಪಿ, ಕೊಳಲು ಜಯ ಪ್ರಕಾಶ್‌, ಸಿತಾರ್‌ನಲ್ಲಿ ಸುಮುಖ್‌, ಕೀಬೋರ್ಡ್‌ನಲ್ಲಿ ದೀಪಕ್‌ ಶಿವಮೊಗ್ಗ, ಶಿಜಿಮೋನ್‌, ಕಾಂಗೊದಲ್ಲಿ ಗಣೇಶ್‌ ಹೊಸಬೆಟ್ಟು ಸುರತ್ಕಲ್‌, ಡೋಲಕ್‌ನಲ್ಲಿ ಭಾಸ್ಕರ ಕುಂಬ್ಳೆ ಹಿನ್ನೆಲೆಯಲ್ಲಿ ಸಹಕರಿಸಿದರೆ, ಕೆ.ವಿ. ರಮಣ್‌ ಮೂಡಬಿದಿರೆ ನಿರೂಪಣೆ ಸಂಗೀತ ಸಮ್ಮೊಹನಕ್ಕೆ ಮತ್ತಷ್ಟು ಮೆರುಗು ತಂದುಕೊಟ್ಟಿತು. 

70-80 ರ ದಶಕದ ಹಾಡುಗಳನ್ನು ಕೇಳುತ್ತಿದ್ದರೆ, ಯಾವುದೋ ಒಂದು ಲೋಕಕ್ಕೆ ಕರೆದೊಯ್ಯುವಂತೆ ಭಾಸವಾಗುತ್ತಿದೆ. ಕಿವಿಯಲ್ಲಿ ಒಂದಾದ ಮೇಲೊಂದರಂತೆ ಆ ಹಳೆಯ ಹಾಡುಗಳು ಮೊಳಗುತ್ತಲೇ ಇರುತ್ತವೆ. ಒಟ್ಟಾರೆ ಸುಮಾರು 4 ಗಂಟೆಗೂ ಹೆಚ್ಚು ಕಾಲ ನಡೆದ ಈ ಇನಿದನಿ ಸಂಗೀತ ಸಂಜೆಯೂ ಮಧುರ ಗೀತೆಗಳಿಂದಲೇ ಕೇಳುಗರನ್ನು ಮಂತ್ರಮುಗ್ಧಗೊಳಿಸಿತು. 

ಪ್ರಶಾಂತ್‌ ಪಾದೆ 

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.