ಅಗಲಿದ ಹಿರಿಯ ವಿದ್ವಾಂಸ ಗೋಪಾಲಕೃಷ್ಣ ಅಯ್ಯರ್‌


Team Udayavani, Jan 24, 2020, 7:02 PM IST

jan-5

ದಶಕಗಳ ಕಾಲ ಶುದ್ಧ ಶೈಲಿಯ ಕರ್ನಾಟಕ ಶಾಸ್ತ್ರೀಯ ಸಂಗೀತದ ವಿದ್ವಾಂಸರಾಗಿದ್ದ, ಮಂಗಳೂರು ಕೊಡಿಯಾಲಬೈಲಿನ ಕಲಾನಿಕೇತನದ ಬೆನ್ನೆಲುಬಾಗಿದ್ದ ವಿ| ಗೋಪಾಲಕೃಷ್ಣ ಅಯ್ಯರ್‌ ಇತ್ತೀಚೆಗೆ ಇಹಲೋಕ ತ್ಯಜಿಸಿದರು. ಅಂತರರಾಷ್ಟ್ರೀಯ ಖ್ಯಾತಿ ಪಡೆದವರೂ ಸೇರಿದಂತೆ ಸಾವಿರಾರು ಶಿಷ್ಯರನ್ನು ತಯಾರು ಮಾಡಿದ ಅವರು ಮಾತ್ರ ಕೊನೆವರೆಗೂ ಎಲೆಮರೆಯ ಹಣ್ಣಾಗಿಯೇ ಉಳಿದವರು.

ಕೇರಳದ ತ್ರಿಪುಣಿತ್ತುರದ ತಮಿಳು ಕುಟುಂಬದಲ್ಲಿ ಜನಿಸಿದ ಅವರು ಸಂಗೀತ ಶಿಕ್ಷಣ ಪಡೆದದ್ದು ತನ್ನ ತಂದೆ ಮತ್ತು ಸೋದರಮಾವ ವಿಶ್ವನಾಥ ಅಯ್ಯರ್‌ ಅವರಿಂದ. ಗೋಪಾಲಕೃಷ್ಣ ಅಯ್ಯರ್‌ ಮೂಲತಃ ವೇಣುವಾದಕರಾದರೂ ಅಷ್ಟೇ ಪ್ರಾವೀಣ್ಯವನ್ನು ಹಾಡುಗಾರಿಕೆಯಲ್ಲೂ ಹೊಂದಿದ್ದವರು. ಹೀಗಾಗಿ ಕೊಳಲು, ಹಾಡುಗಾರಿಕೆ ಎರಡನ್ನೂ ಅವರು ಕಲಾನಿಕೇತನದಲ್ಲಿ ಕಲಿಸುತ್ತಿದ್ದರು. ವಿದ್ಯಾರ್ಥಿಗಳಿಗೆ ಅವರು ಸ್ವಂತ ಕೈಬರಹದಲ್ಲಿ ಅಚ್ಚುಕಟ್ಟಾದ ಕನ್ನಡ ಸ್ವರಲಿಪಿ ಬಳಸಿ ಪಾಠಗಳನ್ನು ಬರೆದು ಕೊಡುತ್ತಿದ್ದರು. ಸಾಹಿತ್ಯ, ತಾಳ, ಕಾಲ, ಸ್ಥಾಯಿ ಎಲ್ಲವನ್ನೂ ಕರಾರುವಾಕ್ಕಾಗಿ ಹೊಂದಿರುತ್ತಿದ್ದ ಸ್ವರಲಿಪಿಯಿಂದಾಗಿ ಅಭ್ಯಾಸ ಮಾಡುವಾಗ ಪಾಠಗಳು ಟೇಪ್‌ ರೆಕಾರ್ಡರಿನಿಂದ ಹೊಮ್ಮಿದಂತೆ ಯಥಾವತ್ತಾಗಿ ಮೂಡಿಬರುತ್ತಿದ್ದವು. ಎಷ್ಟೇ ವಿದ್ಯಾರ್ಥಿಗಳಿದ್ದರೂ ಅವರವರ ಕಲಿಕೆಯ ಹಂತಕ್ಕೆ ಹೊಂದಿಕೊಂಡು ಬೇರೆ ಬೇರೆಯಾಗಿಯೇ ಹೇಳಿ ಕೊಡುವುದು ಅವರ ಪದ್ಧತಿಯಾಗಿತ್ತು.

ಏಸುದಾಸ್‌ ಮಂಗಳೂರಿನಲ್ಲಿ ಕಾರ್ಯಕ್ರಮ ನೀಡಲು ಬಂದರೆ ತಪ್ಪದೆ ಅಯ್ಯರ್‌ ಅವರನ್ನು ಭೇಟಿಯಾಗುತ್ತಿದ್ದರು. ಒಂದು ಸಲ ಕಚೇರಿ ನಡೆಸುವಾಗ ತಾಳ ತೋರಿಸಲು ಪಕ್ಕದಲ್ಲಿ ಕುಳ್ಳಿರಿಸಿಕೊಂಡಿದ್ದರು.

ಗೋಪಾಲಕೃಷ್ಣ ಅಯ್ಯರ್‌ ಆಕಾಶವಾಣಿಯ ಗ್ರೇಡೆಡ್‌ ಕಲಾವಿದರಾಗಿದ್ದು ಕಲ್ಲಿಕೋಟೆ ನಿಲಯದಿಂದ ನಿಯಮಿತವಾಗಿ ಅವರ ವೇಣುವಾದನ ಪ್ರಸಾರವಾಗುತ್ತಿತ್ತು. 1976ರಲ್ಲಿ ಮಂಗಳೂರು ನಿಲಯ ಆರಂಭವಾದ ಮೇಲೆ ಇಲ್ಲಿಂದ ಕಾರ್ಯಕ್ರಮ ನೀಡಲಾರಂಭಿಸಿದರು.

ದೈಹಿಕವಾಗಿ ಸದೃಢವಾಗಿಯೇ ಇದ್ದರೂ ಈಚಿನ ದಿನಗಳಲ್ಲಿ ಅವರ ಗ್ರಹಣ ಶಕ್ತಿ ತುಂಬಾ ಕಮ್ಮಿಯಾಗಿತ್ತು. ಎಂದೂ ಪ್ರಶಸ್ತಿಗಳ, ಬಿರುದುಗಳ ಬೆನ್ನತ್ತಿ ಹೋಗದಿದ್ದ ಅವರು ಸಹಸ್ರಾರು ಶಿಷ್ಯರ, ಅಭಿಮಾನಿಗಳ ಮನದಲ್ಲಿ ಸದಾ ನೆಲೆಸಿರುತ್ತಾರೆ.

ಚಿದಂಬರ ಕಾಕತ್ಕರ್‌, ಮಂಗಳೂರು

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.