ಆಷಾಢ ಮಾಸದ ಸಂಗೀತ ರಸಧಾರೆ


Team Udayavani, Aug 16, 2019, 5:00 AM IST

q-10

ಉಡುಪಿಯ “ರಾಗಧನ’ ಸಂಸ್ಥೆಯವರು ಈ ವರ್ಷದ ಆಷಾಢ ಸಂಗೀತ ಕಾರ್ಯಕ್ರಮವನ್ನು ಜು. 23ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿದ್ದರು. ಅಂದಿನ ಕಲಾವಿದ ಚೆನ್ನೈನ ಕಾಂತಿ ಸ್ವರೂಪ್‌ ಮುಲ್ಲೇಲ.

ಒಳ್ಳೆ ಆತ್ಮವಿಶ್ವಾಸದಿಂದ ಗಟ್ಟಿದನಿಯಲ್ಲಿ ಮೂರು ಸ್ಥಾಯಿಗಳಲ್ಲಿ ಆರಾಮವಾಗಿ ಸಂಚರಿಸುತ್ತ ಹಾಡುವ ಯುವಕ.ಆರಂಭದ ಬೇಗಡೆ ವರ್ಣವನ್ನು ಹೊರತು ಪಡಿಸಿದರೆ ಉಳಿದಂತೆ ಎಲ್ಲಾ ಹೊಸ ಕೃತಿಗಳನ್ನೇ ಹಾಡಲಾಗಿದ್ದು ಕಛೇರಿಯ ವಿಶೇಷ. ರಾಗಮಾಲಿಕೆ ಶ್ಲೋಕದ ಬೆನ್ನಲ್ಲೇ ಮಾಯಾಮಾಳವ ಗೌಳದ (ವಿಮಲಕು) ಕೃತಿಯಲ್ಲಿ ನೆರವಲ್‌, ಸ್ವರ ವಿನಿಕೆಗಳನ್ನೇ ನೀಡಿದ ಗಾಯಕರು ಪ್ರಧಾನವಾಗಿ ಶಹನ (ದೇಹಿ ತವ ಪದ ಭಕ್ಷ್ಯಂ – ವೈ) ಮತ್ತು ಮೋಹನ (ಕ್ಷೇಮಂ ಕುರು ಗೋಪಾಲ) ರಾಗಗಳನ್ನು ಎತ್ತಿಕೊಂಡರು.

ಈ ಎರಡು ಪ್ರಸ್ತುತಿಗಳಲ್ಲಿ, ದಾಟು, ಜಂಟಿ, ಅಲಂಕಾರಾದಿ ಪ್ರಯೋಗಗಳಿಂದ ಕೂಡಿದ ಸವಿಸ್ತಾರವಾದ ಆಲಾಪನೆ, ನೆರವಲ್‌, ಸ್ವರ ಗಣಿತಗಳು ಮತ್ತು ಸುದೀರ್ಘ‌ವಾದ ಮುಕ್ತಾಯಗಳು ಎಂದು ಹತ್ತಾರು ಮಗ್ಗುಲುಗಳಿಂದ ಗಾಯಕರು ತಮ್ಮ ಪಾಂಡಿತ್ಯದ ಪರಿಚಯ ನೀಡಿದರು. ಆದರೂ ಆಯಾ ರಾಗಗಳಿಗೇ ಮೀಸಲಾದ ನಿಜ ಭಾವಗಳ ಅಭಿವ್ಯಕ್ತಿಗೆ ಮತ್ತು ಅಲ್ಲಲ್ಲಿ ಸೌಖ್ಯವಾದ ವಿಶ್ರಾಂತಿಗೆ ಇನ್ನೂ ಒತ್ತು ಕೊಡಬೇಕಿತ್ತೇನೋ ಅನಿಸಿತು.

ರಾಗಮಾಲಿಕೆಯಲ್ಲಿ ತಿರುಪ್ಪುಗಳ್‌, ಸಿಂಧು ಭೈರವಿಯಲ್ಲಿ ಅನ್ನಮಾಚಾರ್ಯರ ರಚನೆ ಮತ್ತು ಬಿಂದು ಮಾಲಿನಿಯ ತಿಲ್ಲಾನದೊಂದಿಗೆ ಕಛೇರಿ ಸಂಪನ್ನಗೊಂಡಿತು.ಅನುಭವದಿಂದ ಪಕ್ವವಾದ ಉತ್ತಮ ಬಿಲ್ಲುಗಾರಿಕೆಯನ್ನು ತೋರಿದ ವೇಣುಗೋಪಾಲ ಶಾನುಭೋಗ ಮತ್ತು ಪ್ರಬುದ್ಧವಾದ ಅಂತೆಯೇ ಹದವರಿತ ಲಯಗಾರಿಕೆಯನ್ನು ಪ್ರದರ್ಶಿಸಿದ ಬಾಲಚಂದ್ರ ಆಚಾರ್ಯ ಈ ಕಛೇರಿಗೆ ಹೆಚ್ಚಿನ ಮೆರುಗನ್ನು ನೀಡಿದ್ದಾರೆ.

ಸರೋಜಾ ಆರ್‌. ಆಚಾರ್ಯ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.