ಹೊಸಂಗಡಿ ಯಕ್ಷಬಳಗ ಸಮ್ಮಾನಿತ: ತಾರಾನಾಥ ವರ್ಕಾಡಿ


Team Udayavani, Aug 18, 2017, 8:15 AM IST

18-KALA-1.jpg

ಗಡಿನಾಡು ಕಾಸರಗೋಡಿನಲ್ಲಿ ಯಕ್ಷಗಾನವನ್ನು ಬೆಳೆಸುವಲ್ಲಿ ಕಳೆದ ಎರಡೂವರೆ ದಶಕಗಳಿಂದ ತನ್ನನ್ನು ತಾನು ಸಮರ್ಪಿಸಿಕೊಂಡಿರುವ ಕಲಾಸಂಸ್ಥೆ ಯಕ್ಷಬಳಗ ಹೊಸಂಗಡಿ. 25 ವರ್ಷಗಳಿಂದ ಆಷಾಢ ಮಾಸ ಸರಣಿ ತಾಳಮದ್ದಳೆ ಕೂಟ ಹಾಗೂ ಸಾಧಕರಿಗೆ ಸಮ್ಮಾನವನ್ನು ನಡೆಸುತ್ತಾ ಬಂದಿದೆ. ಈ ಬಾರಿ ಈ ಸರಣಿ ಆಗಸ್ಟ್‌ 19ರಂದು ದೇವಸ್ಥಾನದಲ್ಲಿ ಸಮಾರೋಪಗೊಳ್ಳಲಿದ್ದು ತೆಂಕುತಿಟ್ಟಿನ ಕಲಾವಿದ, ಪ್ರಸಂಗಕರ್ತ, ಯಕ್ಷಪತ್ರಕರ್ತ ತಾರಾನಾಥ ವರ್ಕಾಡಿ ಸಮ್ಮಾನ ಸ್ವೀಕರಿಸಲಿದ್ದಾರೆ.

ತಾರಾನಾಥ ವರ್ಕಾಡಿ ಯಕ್ಷಗಾನ ರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಿ ದವರು. ಪುಟ್ಟ ವಾಕ್ಯಗಳ ಸಂಭಾಷಣೆ, ಸ್ಪಷ್ಟ  ಉಚ್ಛಾರ, ಮೋಹಕ ಲಾಲಿತ್ಯ ಪೂರ್ಣ ಮಾತುಗಾರಿಕೆಯಿಂದಲೇ ಪ್ರೇಕ್ಷಕರನ್ನು ಹಿಡಿದಿಡಬಲ್ಲವರು. ಸಂತುಲಿತ ನಾಟ್ಯದಿಂದ ತನಗೆ ದೊರೆತ ಯಾವುದೇ ಪಾತ್ರವನ್ನು ಚೊಕ್ಕ ವಾಗಿ ಮಾಡಬಲ್ಲ ಕೌಶಲ ವರ್ಕಾಡಿಯವರ ಹಿರಿಮೆ. ವಿಷ್ಣು, ರಾಮ, ಕೃಷ್ಣ, ಸುಧನ್ವ, ಪಾತ್ರಗಳು ಇವರಿಗೆ ತಾರಾಮೌಲ್ಯ ತಂದುಕೊಟ್ಟಿವೆ.  

ಯಕ್ಷಗಾನದ ಪಾತ್ರದ ಜತೆಜತೆಯಲ್ಲೇ ಪ್ರಸಂಗ ರಚನೆ, ಸಾಹಿತ್ಯ ರಚನೆ, ಪತ್ರಿಕೆಗಳಲ್ಲಿ ಸಾಹಿತ್ಯ ಕೃಷಿಯನ್ನು ನಡೆಸುತ್ತಾ ಬಂದವರು.  ನಿತ್ಯ ಅಧ್ಯಯನಶೀಲರಾಗಿ ಯಕ್ಷಗಾನ, ತಾಳಮದ್ದಳೆ, ಕನ್ನಡ ತುಳು ಪ್ರಸಂಗರಚನೆ, ಜ್ಯೋತಿಷ, ವಾಸ್ತು, ಆಯುರ್ವೇದ ಪರಿಣತರಾಗಿದ್ದಾರೆ, ಯಕ್ಷಗಾನ ಪತ್ರಿಕೋದ್ಯಮಿಯಾಗಿದ್ದಾರೆ.

 ಧರ್ಮಸ್ಥಳ ಯಕ್ಷಗಾನ ಕಲಾಕೇಂದ್ರದಲ್ಲಿ ತರಬೇತಿ ಪಡೆದ ವರ್ಕಾಡಿಯವರಿಗೆ ಕರ್ಗಲ್ಲು ವಿಶ್ವೇಶ್ವರ ಭಟ್‌ ಹಾಗೂ ಕೆ. ಗೋವಿಂದ ಭಟ್‌ ನಾಟ್ಯ ಗುರುಗಳು. ಪ್ರಸಂಗ ರಚನೆಗೆ ಡಾ| ಶಿಮಂತೂರು ನಾರಾಯಣ ಶೆಟ್ಟಿ, ಅರ್ಥಗಾರಿಕೆಗೆ ಕೊರ್ಗಿ ವೆಂಕಟೇಶ್ವರ ಉಪಾಧ್ಯಾಯರು ಗುರುಗಳು. ವಿವಿಧ ಮೇಳಗಳಲ್ಲಿ ಸುದೀರ್ಘ‌ ಮೂರೂವರೆ ದಶಕ ತಿರುಗಾಟ ನಡೆಸಿದ್ದಾರೆ. “ಬಲ್ಲಿರೇನಯ್ಯ’ ಯಕ್ಷಗಾನ ಮಾಸಪತ್ರಿಕೆ ಹೊರ ತರುತ್ತಿದ್ದು, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಸದಸ್ಯರೂ ಆಗಿದ್ದಾರೆ. 

ಯೋಗೀಶ ರಾವ್‌ ಚಿಗುರುಪಾದೆ

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.