ಯಕ್ಷಾಲಯದ ವನಿತೆಯರ ಮನೋಜ್ಞ ಮಾ ನಿಷಾದ

ರಂಗಮನೆಯ ಯಕ್ಷ ಸಂಭ್ರಮ

Team Udayavani, Sep 6, 2019, 5:26 AM IST

b-5

ಪಾಪಪುಣ್ಯದ ಪಾಲು ಅವರವರಿಗೆ ಸೇರಿದ್ದು. ನಿಮ್ಮ ಪಾಪವನ್ನು ನಾನು ಹೊರಲು ಸಾಧ್ಯವಿಲ್ಲವೆಂದು ಖಡಾಖಂಡಿತವಾಗಿ ಹೇಳಿಬಿಟ್ಟಳು. ಇದರಿಂದ ಭ್ರಮನಿರಸನಗೊಂಡ ಬೇಡ ಸಪ್ತರ್ಷಿ ಬಳಿ ತನ್ನನ್ನು ಸನ್ಮಾರ್ಗದಲ್ಲಿ ನಡೆಸುವಂತೆ ಬೇಡಿಕೊಳ್ಳುತ್ತಾನೆ ರಾಮನಾಮ ತಾರಕ ಮಂತ್ರವನ್ನು ಸಪ್ತರ್ಷಿಯು ಆತನಿಗೆ ಉಪದೇಶಿಸುತ್ತಾರೆ.

ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಯಕ್ಷ ಸಂಭ್ರಮ ವರ್ಷಾಧಾರೆಯ ನಡುವೆ ವಿಜೃಂಭಿಸಿತು. ರಂಗಮನೆಯ ಅಮ್ಮ ವನಜಾ ಜಯರಾಮ ನೆನಪಿನಲ್ಲಿ ಕೊಡಮಾಡುವ ಪ್ರಶಸ್ತಿಗೆ ಈ ಬಾರಿಗೆ ಆಯ್ಕೆಯಾದವರು ಲೀಲಾವತಿ ಬೈಪಾಡಿತ್ತಾಯ ಅವರು. ಪ್ರಾರಂಭದಲ್ಲಿ ಲೀಲಾವತಿ ಬೈಪಾಡಿತ್ತಾಯ ಅವರು ಪಾರಂಪರಿಕ ಶೈಲಿಯಲ್ಲಿ ಯಕ್ಷಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಮದ್ದಲೆಯಲ್ಲಿ ಹರಿನಾರಾಯಣ ಬೈಪಾಡಿತ್ತಾಯ ಸಹಕರಿಸಿದರು.

ಅಂದಿನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಂಗು ನೀಡಿದವರು ಮಂಗಳೂರಿನ ಸನಾತನ ಯಕ್ಷಾಲಯದ ಮಹಿಳಾ ಕಲಾವಿದೆಯರು. ಹೀಗೆ ಅಮ್ಮನ ನೆನಪಿಗೆ ಮಹಿಳಾ ಮಣಿಗಳೆಲ್ಲ ಸಾಕ್ಷಿಯಾದರು. ಕಾರ್ಯಕ್ರಮವನ್ನು ಈ ಮೂಲಕ ಸಾರ್ಥಕ್ಯಗೊಳಿಸಿದರು. ರಂಗಮನೆ ರೂವಾರಿ ಜೀವನ್‌ರಾಂ ಸುಳ್ಯ ತಮ್ಮ ಅಮ್ಮನಿಗೆ ಕಲಾತರ್ಪಣಗೈದರು.

ಶ್ರೀರಾಮ ಕಥೆ ಹುಟ್ಟು
ಬೇಡನೊಬ್ಬ ದಾರಿಹೋಕರನ್ನು ತಡೆದು ಹಿಂಸಿಸಿ ಅವರಲ್ಲಿದ್ದ ಹಣ ವಸ್ತುಗಳನ್ನು ದರೋಡೆ ಮಾಡುತ್ತಿದ್ದ. ಆ ದಾರಿಯಲ್ಲಿ ಬಂದ ಸಪ್ತರ್ಷಿಯೊಬ್ಬರನ್ನು ಹಣಕ್ಕಾಗಿ ಪೀಡಿಸಿದಾಗ ಅವರು ದರೋಡೆ, ಹಿಂಸೆ ಮಾಡುವುದು ಪಾಪದ ಕಾರ್ಯ. ಈ ಪಾಪದ ಫಲವನ್ನು ನಿಮ್ಮ ಮನೆಯವರು ಹಂಚಿಕೊಳ್ಳುತ್ತಾರೆಯೇ ಎಂದು ಪ್ರಶ್ನಿಸುತ್ತಾರೆ. ಇದನ್ನು ತಿಳಿದುಕೊಂಡು ಬರಲು ಬೇಡ ಮನೆಗೆ ಬಂದು ಪತ್ನಿಯಲ್ಲಿ ಕೇಳಿದಾಗ ಪಾಪಪುಣ್ಯದ ಪಾಲು ಅವರವರಿಗೆ ಸೇರಿದ್ದು. ನಿಮ್ಮ ಪಾಪವನ್ನು ನಾನು ಹೊರಲು ಸಾಧ್ಯವಿಲ್ಲವೆಂದು ಖಡಾಖಂಡಿತವಾಗಿ ಹೇಳಿಬಿಟ್ಟಳು. ಇದರಿಂದ ಭ್ರಮನಿರಸನಗೊಂಡ ಬೇಡ ಸಪ್ತರ್ಷಿ ಬಳಿ ತನ್ನನ್ನು ಸನ್ಮಾರ್ಗದಲ್ಲಿ ನಡೆಸುವಂತೆ ಬೇಡಿಕೊಳ್ಳುತ್ತಾನೆ ರಾಮನಾಮ ತಾರಕ ಮಂತ್ರವನ್ನು ಸಪ್ತರ್ಷಿಯು ಆತನಿಗೆ ಉಪದೇಶಿಸುತ್ತಾರೆ.

ಮುಂದೆ ದೀರ್ಘ‌ ತಪಸ್ಸಿನ ಬಳಿಕ ಆ ಬೇಡ ವಾಲ್ಮೀಕಿ ಎಂಬ ಹೆಸರಿನಿಂದ ಪ್ರಖ್ಯಾತರಾಗುತ್ತಾರೆ.ಕ್ರೌಂಚ ಪಕ್ಷಿಗಳು ಪ್ರೇಮದಾಟದಲ್ಲಿರುವಾಗ ಬೇಟೆಗಾರನೊಬ್ಬ ಬಾಣ ಬಿಟ್ಟು ಪಕ್ಷಿಯೊಂದನ್ನು ಕೊಲ್ಲುತ್ತಾನೆ. ಆ ಪಕ್ಷಿಯ ಆರ್ತನಾದವನ್ನು ಕಂಡ ವಾಲ್ಮೀಕಿ ಮನದಲ್ಲಿ ಶೋಕ ಮಡುಗಟ್ಟುತ್ತದೆ. ಆಗ ಅವರ ಬಾಯಿಯಿಂದ ಹೊರ ಬಂದ ಶ್ಲೋಕವೇ ಮುಂದೆ ರಾಮಾಯಣ ಬರೆಯಲು ನಾಂದಿಯಾಗುತ್ತದೆ. ರಾಮನ ಜನ್ಮಕ್ಕೆ ಮೊದಲೇ ರಾಮ ಕಥೆ ಹುಟ್ಟುತ್ತದೆ.

ಮುಂದೆ ಶ್ರೀರಾಮಚಂದ್ರನ ಪಟ್ಟಾಭಿಷೇಕ,ಅಗಸನ ಆಪಾದನೆ, ಸೀತಾ ಪರಿತ್ಯಾಗ, ವಾಲ್ಮೀಕಿ ಮುನಿಯ ಆಶ್ರಮದಲ್ಲಿ ತುಂಬು ಗರ್ಭಿಣಿ ಸೀತೆ ಆಶ್ರಯ ಪಡೆಯುವುದು. ಲವ – ಕುಶರ ಜನನ ಹೀಗೆ ಪ್ರಸಂಗ ಮುಂದುವರಿದು ಭೂಗರ್ಭ ಸಂಜಾತೆ ಸೀತೆ ಮತ್ತೆ ಭೂಗರ್ಭದೊಳಗೆ ಐಕ್ಯವಾಗುವುದರೊಂದಿಗೆ ಪ್ರಸಂಗ ಅಂತ್ಯಗೊಳ್ಳುತ್ತದೆ.

ಬೊಟ್ಟಿಕೆರೆ ಪುರುಷೋತ್ತಮ ಪೂಂಜ ರಚಿಸಿದ ಮಾನಿಷಾದ ಯಕ್ಷಗಾನ ಪ್ರಸಂಗವನ್ನು ಯಕ್ಷ ಗುರು ರಾಕೇಶ್‌ ರೈ ಅಡ್ಕ ಅವರ ನಿರ್ದೇಶನದಲ್ಲಿ ಮಂಗಳೂರಿನ ಸನಾತನ ಯಕ್ಷಾಲಯದ ಮಹಿಳಾ ಕಲಾವಿದೆಯರು ಮನೋಜ್ಞವಾಗಿ ಪ್ರಸ್ತುತಪಡಿಸಿದರು.

ರಾಮಾಯಣದ ಕಥನ ಕಾವ್ಯದ ನಾಯಕಿ ಸೀತಾಮಾತೆ ತುಂಬು ಗರ್ಭಿಣಿಯಾಗಿ ಅದರ ನೋವು ನಲಿವನ್ನು ಅನುಭವಿಸುತ್ತಾ ಮಹಿಮಾ ರಾವ್‌ ತನ್ನ ಆಂಗಿಕ ಅಭಿನಯ ಮತ್ತು ಅರ್ಥಗರ್ಭಿತ ಮಾತಿನೊಂದಿಗೆ ಗಮನ ಸೆಳೆದರು. ಕಥಾ ನಾಯಕ ಸೀತಾರಾಮನಾಗಿ ವೃಂದಾ ಕೊನ್ನೀರ್‌ ಮೊದಲು ಉಲ್ಲಾಸ ತುಂಬಿ, ಉತ್ತರಾರ್ಧದಲ್ಲಿ ರಾಜಾರಾಮನಾಗಿ ಗಾಂಭೀರ್ಯದಿಂದ ಪಾತ್ರ ಪೋಷಣೆ ಮಾಡಿದರು. ವಾಲ್ಮೀಕಿಯಾಗಿ ಸಾವಿತ್ರಿ ಎಸ್‌.ರಾವ್‌, ಲವಣಾಸುರನಾಗಿ ಕಾವ್ಯ ಎನ್‌.ಶೆಟ್ಟಿ, ಲಕ್ಷ್ಮಣನಾಗಿ ಸತ್ಯಾಜೀವನ್‌,ಮಾಲತಿ ವಿ.ರಾವ್‌ ಶತ್ರುಘ್ನನಾಗಿ ಮನೋಜ್ಞವಾಗಿ ಅಭಿನಯಿಸಿದರು.ರೂಕ್ಷನಾಗಿ ವಸುಂಧರಾ ಹರೀಶ್‌ ಮತ್ತು ದಿಶಾ ಶೆಟ್ಟಿ, ವಿಕ್ಷಿಪ್ತ ಪಾತ್ರದಲ್ಲಿ ಕಾವ್ಯಶ್ರೀ, ಕಿರಾತರಾಗಿ ಅಭಿನವಿ ಹೊಳ್ಳ, ಸಮನ್ವಿತಾ, ಕಾವ್ಯಶ್ರೀ, ಕಾವ್ಯ ಎನ್‌.ಶೆಟ್ಟಿ, ಸ್ಪೈರಿಣಿಯಾಗಿ ವಿಂಧ್ಯಾ ಆಚಾರ್ಯ, ಬ್ರಹ್ಮನಾಗಿ ಶ್ರೇಯಾ ರಾವ್‌, ಸಪ್ತರ್ಷಿಯಾಗಿ ಕಾವ್ಯಶ್ರೀ, ಕ್ರೌಂಚ ಪಕ್ಷಿಗಳಾಗಿ ಅಭಿನವಿ ಹೊಳ್ಳ, ಸಮನ್ವಿತಾ, ಬೇಟೆಗಾರನಾಗಿ ಸುರೇಖಾ, ಭದ್ರನಾಗಿ ಕಾವ್ಯಶ್ರೀ, ಲವನಾಗಿ ಅಭಿನವಿ ಹೊಳ್ಳ, ಕುಶನಾಗಿ ಸಮನ್ವಿತಾ, ಋಷಿಗಳಾಗಿ ಸುರೇಖಾ, ಕಾವ್ಯಶ್ರೀ ಪಾತ್ರಗಳಿಗೆ ಜೀವ ತುಂಬಿದರು.ಭಾಗವತರಾಗಿ ಗಿರೀಶ್‌ ರೈ ಕಕ್ಕೆಪದವು. ಚಂಡೆಯಲ್ಲಿ ಮುರಾರಿ ಕಡಂಬಳಿತ್ತಾಯ, ಮದ್ದಳೆಯಲ್ಲಿ ನೆಕ್ಕರೆಮೂಲೆ ಗಣೇಶ್‌ ಭಟ್‌, ಚಕ್ರತಾಳದಲ್ಲಿ ಅಭಿಜಿತ್‌ ಬಂಟ್ವಾಳ ಸಹಕರಿಸಿದರು.

ಗಂಗಾಧರ ಮಟ್ಟಿ ಸುಳ್ಯ

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.