ವಿಶ್ವದ ವಿಭಿನ್ನ ಕಲೆಯನ್ನು ವೇಷದಲ್ಲಿ ಪರಿಚಯಿಸುವ ರಾಮಾಂಜಿ


Team Udayavani, Nov 29, 2019, 4:25 AM IST

dd-2

ನಾಗಾಸಾಧು, ಮಾಯಾನ್‌, ತೆಯ್ಯಂ, ಅಪಕಲಿಪ್ಟೊ, ಮಾರಿಕಾಡು, ಡ್ರಗ್ಸ್‌ ಕಾರ್ಕೋಟಕ, ಹಾವುಗಳ್ರಾಣಿಎಡೊಸ ಮುಂತಾದ ವೇಷಗಳನ್ನು ಧರಿಸಿದ್ದಾರೆ.

ಇತ್ತೀಚೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ “ಸಮರ್ಪಣಾ’ ಎಂಬ ವಿಶಿಷ್ಟ ಕಾರ್ಯಕ್ರಮನಡೆಯಿತು. ಸಂಸ್ಕೃತಿ ಮತ್ತು ಕಲೆಯನ್ನು ಪ್ರೀತಿಸುವ ರಾಮಾಂಜಿ ಎಂಬ ಯುವಕನ ಸಾಮಾಜಿಕ ಸೇವೆಗೆ ಈ ಕಾರ್ಯಕ್ರಮ ಸಾಕ್ಷಿಯಾಗಿತ್ತು. ಜಿಲ್ಲಾಧಿಕಾರಿಗಳು, ವಿಶ್ವದ್ಯಾನಿಲಯ ಕುಲಪತಿಗಳ ಜತೆಗೆ ಹಲವು ಗಣ್ಯರು ರಾಮಾಂಜಿಯ ಕಾರ್ಯವನ್ನು ಶ್ಲಾಘಿಸಿದ್ದಾರೆ. ರಾಮಾಂಜಿಯು ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಗೆ ವಿಭಿನ್ನ ವೇಷ ತೊಡುವ ಮೂಲಕ ವಿಶ್ವದ ವಿವಿಧ ಕಲಾ ಪ್ರಕಾರಗಳನ್ನು ಪರಿಚಯಿಸಿ ಕೊಡುತ್ತಿದ್ದಾರೆ. ಈ ಮೂಲಕ ಕಲೆ ಮತ್ತು ಸಂಸ್ಕೃತಿಯ ಸೇವೆ ಮಾಡುವ ಇವರು ಸಂಗ್ರಹವಾಗುವ ಮೊತ್ತವನ್ನು ಸಮಾಜದ ಅಶಕ್ತರಿಗೆ ನೀಡಿ ಸಾಮಾಜಿಕ ಕಾಳಜಿಯನ್ನು ತೋರಿಸುತ್ತಿದ್ದಾರೆ.

ಏಳು ವರ್ಷಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ನಾಗಾಸಾಧು, ಮಾಯಾನ್‌ (ಬುಡಕಟ್ಟು ಜನಾಂಗ), ಕೇರಳದ ತೆಯ್ಯಂ, ಅಪಕಲಿಪ್ಟೊ (ದಕ್ಷಿಣ ಆಫ್ರಿಕಾದ ಬುಡಕಟ್ಟು ಜನಾಂಗ), ಕಂಬಾರರ ಮಾರಿಕಾಡು, ಡ್ರಗ್ಸ್‌ ಕಾರ್ಕೋಟಕ, ಹಾವುಗಳ ರಾಣಿ “ಮೆಡೂಸ’ ಮುಂತಾದ ವೇಷಗಳನ್ನು ಧರಿಸಿ ಮನೋರಂಜನೆ ನೀಡಿದ್ದಾರೆ. ಅಲ್ಲದೆ ಆ ವೇಷಗಳ ಹಿಂದಿನ ಸಂಸ್ಕೃತಿ ಮತ್ತು ಕಲೆಯನ್ನು ತಿಳಿದುಕೊಳ್ಳುವಂಥ ಕುತೂಹಲವನ್ನು ಜನರಲ್ಲಿ ಮೂಡಿಸಿದ್ದಾರೆ. ಇವರ ವೇಷಗಾರಿಕೆಯ ಹಿಂದೆ ಕಲಾವಿದ ಪ್ರಶಾಂತ್‌ ಉದ್ಯಾವರ ಸಹಿತ ದೊಡ್ಡ ಬಳಗವೇ ದುಡಿಯುತ್ತಿದೆ.

ಪ್ರತಿವರ್ಷ ವೇಷ ಧರಿಸುವ ಮೊದಲು ತುಂಬಾ ಹೋಂವರ್ಕ್‌ ಮಾಡುತ್ತಾರೆ. ವೇಷದ ವಿಷಯವನ್ನು ಆರಿಸಿಕೊಳ್ಳಲು ಹಾಗೂ ಅದಕ್ಕೆ ಬೇಕಾದ ಪೂರಕ ಸಿದ್ಧತೆಗಾಗಿ ಸಾಕಷ್ಟು ಸಮಯವನ್ನು ಕಳೆಯುವ ಇವರು ಈ ವರೆಗೆ ಸುಮಾರು 10 ಲಕ್ಷದಷ್ಟು ಹಣವನ್ನು ಸಂಗ್ರಹಿಸಿ ಅಶಕ್ತರಿಗೆ ಹಾಗೂ ರೋಗಿಗಳಿಗೆ ನೀಡಿದ್ದು, ಏಕಕಾಲಕ್ಕೆ ಹಲವು ಉದ್ದೇಶಗಳನ್ನು ಈಡೇರಿಸಿಕೊಳ್ಳುವ ಅಪರೂಪದ ವ್ಯಕ್ತಿ.

ಹಾಗೆ ನೋಡಿದರೆ ಈ ರಾಮಾಂಜಿಯೇ ಒಂದು ಒಗಟು. ಇವರ್ಯಾರು ಎಂಬುದಕ್ಕೆ ಸ್ಪಷ್ಟ ಉತ್ತರವಿಲ್ಲ. 15-20 ವರ್ಷಗಳ ಹಿಂದೆ ಅನಾಥ ಬಾಲಕನಾಗಿ ಉಡುಪಿಗೆ ಬಂದಿದ್ದವರು. “ಮಕ್ಕಳ ಮಿತ್ರ’ ಹಾಗೂ ‘ಭೀಮಾ ಸಂಘ’ದ ಸಹಕಾರದಿಂದ ಬೆಳೆದು ಮುಂದೆ ಕುಂದಾಪುರದ “ನಮ್ಮ ಭೂಮಿ’ ಸಂಸ್ಥೆಯಲ್ಲಿ ಆಶ್ರಯ ಪಡೆದವರೇ ರಾಮಂಜನೇಯ ಅಥವಾ ರಾಮಾಂಜಿ. ಶಿರ್ವ ಹಾಗೂ ಉಡುಪಿಯ ಎಂ.ಜಿ.ಎಂ. ಕಾಲೇಜುಗಳಲ್ಲಿ ಶಿಕ್ಷಣ ಪಡೆದವರು. ನಾಟಕ, ಯಕ್ಷಗಾನ, ಸಂಗೀತ, ಸಾಹಿತ್ಯ, ಲಲಿತಕಲೆ ಮೊದಲಾದವುಗಳ ಹವ್ಯಾಸ ಬೆಳೆಸಿಕೊಂಡವರು. ಪ್ರತಿಭಾನ್ವಿತ ಕಲಾವಿದ. ಸಮಾಜದ ಒಳಿತಿಗಾಗಿ ಏನಾದರೂ ಮಾಡಬೇಕು ಎಂಬ ತುಡಿತ ಹೊಂದಿರುವವರು.

– ಅನಂತ ಮೂಡಿತ್ತಾಯ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.