ಶಿವರಾಮ ಜೋಗಿಗೆ ಸಾಮಗ ಪ್ರಶಸ್ತಿ 


Team Udayavani, Jul 6, 2018, 6:00 AM IST

u-1.jpg

ಉಡುಪಿ ತುಳುಕೂಟವು ಪ್ರತಿವರ್ಷ ನೀಡುವ ಮಲ್ಪೆ ರಾಮದಾಸ ಸಾಮಗ ಸ್ಮರಣಾರ್ಥ ಪ್ರಶಸ್ತಿಯು ಈ ಬಾರಿ ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಅವರಿಗೆ ಒಲಿದಿದ್ದು, ಜು. 7ರಂದು ಉಡುಪಿಯ ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನಿಸಲಾಗುವುದು.

13ನೇ ವರ್ಷದಲ್ಲಿಯೇ ಯಕ್ಷಗಾನ ರಂಗಕ್ಕೆ ಪಾದಾರ್ಪಣೆ ಮಾಡಿರುವ ಶಿವರಾಮ ಜೋಗಿ ಅವರು ಕಲಿತದ್ದು ಕೇವಲ 6ನೇ ತರಗತಿ ಮಾತ್ರವಾದರೂ ಈಗ ಯಕ್ಷಗಾನದ ಪ್ರಬುದ್ಧ ಮತ್ತು ಮೇಧಾವಿ ಕಲಾವಿದರಲ್ಲಿ ಓರ್ವರಾಗಿ ಗುರುತಿಸಿಕೊಂಡಿದ್ದಾರೆ. ಶೇಣಿ ಗೋಪಾಲಕೃಷ್ಣ ಭಟ್‌, ವಿಟ್ಲ ಗೋಪಾಲಕೃಷ್ಣ ಜೋಷಿ ಮತ್ತು ಕುಡಾಣ ಗೋಪಾಲಕೃಷ್ಣ ಭಟ್‌ ಎಂಬ ಮೂವರು ಗೋಪಾಲಕೃಷ್ಣರನ್ನು ಗುರುಗಳಾಗಿ ಸ್ವೀಕರಿಸಿ ಈ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಉತ್ತಮ ವಾಗ್ಮಿಯಾಗಿರುವ ಅವರು ತನ್ನ ಮಾತುಗಾರಿಕೆಯಿಂದಲೆ ಪ್ರೇಕ್ಷಕರನ್ನು ಸೆಳೆದು ನಿಲ್ಲಿಸಬಲ್ಲ ಕಲಾವಿದರು. ಸುಮಾರು 63 ವರ್ಷಗಳಿಂದ ಯಕ್ಷಗಾನ ರಂಗದಲ್ಲಿರುವ ಅವರು ಸುರತ್ಕಲ್‌ ಮೇಳವೊಂದರಲ್ಲೇ 40 ವರ್ಷ ಸೇವೆ ಸಲ್ಲಿಸಿರುವುದು ಗಮನಾರ್ಹ ಸಂಗತಿ.

 ಕೂಡ್ಲು, ಮೂಲ್ಕಿ, ಕರ್ನಾಟಕ, ಮಂಗಳಾದೇವಿ, ಎಡನೀರು, ಕುಂಟಾರು ಹಾಗೂ ಹೊಸನಗರ ಮೇಳಗಳಲ್ಲೂ ಸೇವೆ ಸಲ್ಲಿಸಿದ್ದು, ಪ್ರಸ್ತುತ ಹನುಮಗಿರಿ ಮೇಳದಲ್ಲಿದ್ದಾರೆ. 77ರ ಹರಯದಲ್ಲೂ ಅದ್ಭುತವಾದ ಅಭಿನಯ ಮತ್ತು ಆಕರ್ಷಕ ಮಾತಿನಿಂದ ಪ್ರೇಕ್ಷಕರನ್ನು ಹಿಡಿದಿಡುವಂಥ ಪ್ರತಿಭಾಸಂಪನ್ನ. 

ಯಕ್ಷಗಾನಕ್ಕೆ ಅಗತ್ಯವಾಗಿರುವ ಕುಣಿತ, ಅರ್ಥಗಾರಿಕೆ ಮತ್ತು ಗಾಂಭೀರ್ಯವನ್ನು ಅಳವಡಿಸಿಕೊಂಡಿರುವ ಇವರು ದುಶ್ಯಾಸನ, ಹಿರಣ್ಯಾಕ್ಷ, ದುಷ್ಯಂತ, ರಾವಣ, ಕರ್ಣ, ಕೋಟಿ ಮುಂತಾದ ಪ್ರಮುಖ ಪಾತ್ರಗಳಿಗೆ ಮನೋಜ್ಞವಾಗಿ ರಂಗದಲ್ಲಿ ಜೀವ ತುಂಬಿದ್ದಾರೆ. ಜತೆಗೆ ಬಪ್ಪ ಬ್ಯಾರಿಯ ಪಾತ್ರದಲ್ಲೂ ಮಿಂಚಿದವರು. ನಾಯಕ ಮತ್ತು ಖಳನಾಯಕ ಪಾತ್ರಕ್ಕೂ ಸೈ ಎನಿಸಿಕೊಂಡವರು. ಮತ್ತೆ ಮತ್ತೆ ಕೇಳಬೇಕು ಎನಿಸುವಂಥ ಅವರ ಮಾತಿನ ಶೈಲಿಯೇ ಅವರಿಗೆ ದೊಡ್ಡ ಅಭಿಮಾನಿ ವರ್ಗವನ್ನು ಹುಟ್ಟು ಹಾಕಿದೆ. ರಂಗಕ್ಕೆ ಒಂದು ಗಾಂಭೀರ್ಯ ತಂದುಕೊಡುವಲ್ಲಿ ಸಫ‌ಲರಾಗಿರುವ ಕೆಲವು ಅಪರೂಪದ ಕಲಾವಿದರ ಸಾಲಿಗೆ ಸೇರಿರುವ ಇವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಒಲಿದಿದೆ.

1941 ಜೂನ್‌ 7ರಂದು ಗುರುವಪ್ಪ ಜೋಗಿ ಮತ್ತು ಸೀತಮ್ಮ ದಂಪತಿಯ ಪುತ್ರನಾಗಿ ಜನಿಸಿರುವ ಇವರು ಪ್ರಸ್ತುತ ಬಿ.ಸಿ.ರೋಡ್‌ನ‌ಲ್ಲಿ ನೆಲೆಸಿದ್ದಾರೆ. 

ಪ್ರಶಸ್ತಿಗಳು
ಇವರ ಸಾಧನೆಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಜತೆಗೆ ಡಾ| ಕಿಲಾರು ಗೋಪಾಲಕೃಷ್ಣಯ್ಯ ಪ್ರಶಸ್ತಿ, ಶೇಣಿ ಪ್ರಶಸ್ತಿ, ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿಗಳು ಸಂದಿವೆ. ಅವುಗಳ ಸಾಲಿಗೆ ಈಗ ತುಳುಕೂಟದ ಮಲ್ಪೆ ರಾಮದಾಸ ಸಾಮಗ ಪ್ರಶಸ್ತಿಯೂ ಸೇರುತ್ತಿದೆ.

ಪದುಮ 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.