- Friday 06 Dec 2019
ಸಂಜೀವ ಬಳೆಗಾರ ಅವರಿಗೆ ಸರ್ಪಂಗಳ ಪ್ರಶಸ್ತಿ
Team Udayavani, Jul 26, 2019, 5:00 AM IST
ಕಟೀಲು ಮೇಳದ ಸುಮಾರು ನಾಲ್ಕು ದಶಕಗಳ ಇತಿಹಾಸವನ್ನು ಅವಲೋಕಿಸುವಾಗ ಉಲ್ಲೇಖೀಸಬಹುದಾದ ಮೇಲ್ಪಂಕ್ತಿಯ ಕಲಾವಿದರಲ್ಲಿ ಸಂಜೀವ ಬಳೆಗಾರ, ಶಂಕರನಾರಾಯಣ ಓರ್ವರು. ಅವರು “ಯಶೋಮತಿ ಸಂಜೀವಣ್ಣ’ ಎಂದೇ ಜನಪ್ರಿಯರು. ಕಟೀಲು ಕ್ಷೇತ್ರ ಮಹಾತ್ಮೆ ಪ್ರಸಂಗದಲ್ಲಿ ಬೆಳಗಿನ ಜಾವ ಕರುಣರಸ ಪೂರ್ಣವಾಗಿ ಅನಾವರಣಗೊಳ್ಳುವ ಕಥಾಕಲ್ಪನೆಗೆ ಕಳೆಗಟ್ಟಿದ್ದೇ ಸಂಜೀವ ಬಳೆಗಾರರಿಂದಾಗಿ. ಪೌರಾಣಿಕ ಕಥಾವರಣದಲ್ಲಿದ್ದುಕೊಂಡೇ ವರ್ತಮಾನದ ಸದ್ಗಹಿಣಿಯ ಮಾನಸಿಕ ತುಮುಲವನ್ನು ಅಭಿವ್ಯಕ್ತಿಸುವ ಯಶೋಮತಿಯ ಪಾತ್ರ ಜನಮಾನಸದಲ್ಲಿ ಉಳಿದಿದೆ. ಬಳೆಗಾರರ ಜೊತೆಗೆ ಅರುಣಾಸುರನಾಗಿ ಮೆರೆದವರು ಹಲವರಿದ್ದಾರೆ. ಈ ನೆಪದಲ್ಲಿ ಕೀರ್ತಿಶೇಷ ಕೇದಗಡಿ ಗುಡ್ಡಪ್ಪ ಗೌಡರನ್ನು ಇಲ್ಲಿ ಸ್ಮರಿಸಿಕೊಳ್ಳಬೇಕು.
ಬಳೆಗಾರರು ಗರತಿಯಾಗಿ ರಂಗದ ಮೇಲೆ ಹೇಗೆ ಸಾತ್ವಿಕ ಭಾವದಿಂದ ಕಾಣಿಸಿಕೊಳ್ಳುತ್ತಾರೊ ಹಾಗೆಯೇ ನಿಜ ಬದುಕಿನಲ್ಲಿಯೂ. ಬಡಗಿನ ಇಡಗುಂಜಿ, ಅಮೃತೇಶ್ವರಿ ಮೇಳಗಳಲ್ಲಿ ತಿರುಗಾಟ ನಡೆಸಿದ ಅವರು ತೆಂಕು ತಿ ಟ್ಟಿನ ಬಗ್ಗೆ ಒಲವನ್ನು ಹೊಂದಿ ಸುರತ್ಕಲ್ ಮೇಳಕ್ಕೆ ಬಂದರು. ಬಡಗುತಿಟ್ಟಿನವರಾಗಿದ್ದಾಗ್ಯೂ ಕಟೀಲು ಮೇಳ ಸೇರಿ ಶ್ರೀದೇವಿಯ ಪಾತ್ರದಲ್ಲಿ ಮೆರೆದಂಥ ಕೋಡಿ ಕುಷ್ಟ ಗಾಣಿಗರ ಹಾದಿಯನ್ನು ಸಂಜೀವ ಬಳೆಗಾರರು ಅನು ಸರಿಸಿದರು. ಇವರಿಬ್ಬರು ಮುಂದೆ ಬಡಗುತಿಟ್ಟಿನ ಅನೇಕ ವೇಷಧಾರಿಗಳು ತೆಂಕುತಿಟ್ಟಿಗೆ ವಲಸೆ ಬರಲು ಕಾರಣರಾದರು.
ಈಗ ವೃತ್ತಿಕ್ಷೇತ್ರದಿಂದ ನಿವೃತ್ತರಾಗಿರುವ ಕೋಡಿ ಕುಷ್ಟ ಗಾಣಿಗರಾಗಲಿ, ಪ್ರವೃತ್ತರಾಗಿರುವ ಸಂಜೀವ ಬಳೆಗಾರರಾಗಲಿ, ಹಾರಾಡಿ ನಾರಾಯಣ ಗಾಣಿಗ-ಕೋಟ ವೈಕುಂಠರಿಂದ ಪ್ರತ್ಯಕ್ಷ-ಪರೋಕ್ಷ ಪ್ರಭಾವಕ್ಕೆ ಒಳಗಾದವರು ಎಂಬುದನ್ನು ಬಲ್ಲವರು ಬಲ್ಲರು. ಬಡಗುತಿಟ್ಟಿನ ಶೈಲಿಯ ವೇಷಧಾರಿಗಳಾದ್ದರೂ ತೆಂಕುತಿಟ್ಟಿನ “ಸ್ವ-ರೂಪ’ಕ್ಕೆ ಬೆಸೆದುಕೊಳ್ಳುವ ಕುಶಲಕರ್ಮಿಗಳಿವರು. ಚಂದ್ರಮತಿ, ದಮಯಂತಿ, ರೇಣುಕೆ, ಸುಭದ್ರೆಯಂಥ ಪಾತ್ರಗಳಲ್ಲಿ ಸ್ವಂತ ಛಾಪು ಮೂಡಿಸಿದ ಸಂಜೀವ ಬಳೆಗಾರರಿಗೆ ಸುಮಾರು 45 ವರ್ಷಗಳ ಅವಿ ಚ್ಛಿನ್ನ ತಿರುಗಾಟದ ಅನುಭವವಿದೆ. ಎಪ್ಪತ್ತರ ಹರೆಯದ ಅವರು ಈಗಲೂ ಕಟೀಲು ಮೇಳದಲ್ಲಿ ಸೇವಾನಿರತ. ಸಂಜೀವ ಬಳೆಗಾರರವರನ್ನು ಜು. 27ರಂದು ಉಡುಪಿಯ ಪುರಭವನದಲ್ಲಿ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ನೇಪಥ್ಯ ಕಲಾವಿದ ವಿಷ್ಣು ಸಜಂಕಿಲ ಅವರಿಗೆ ಸರ್ಪಂಗಳ ಪುರಸ್ಕಾರ ನೀಡಲಾಗುತ್ತಿದೆ. “ಭೀಮಭಾರತ’ ಯಕ್ಷಗಾನ ಪ್ರದರ್ಶನವೂ ಇದೆ.
ಎನ್. ಟಿ. ರಾವ್
ಈ ವಿಭಾಗದಿಂದ ಇನ್ನಷ್ಟು
-
ಸಾಲಿಗ್ರಾಮ ಮೇಳ ಈ ಸಾಲಿನ ತಿರುಗಾಟದ ದೇವದಾಸ ಈಶ್ವರಮಂಗಲ ವಿರಚಿತ "ಚಂದ್ರಮುಖೀ ಸೂರ್ಯಸಖೀ' ಆಖ್ಯಾನ ಜಯಭೇರಿ ಕಾಣುವ ಎಲ್ಲಾ ಲಕ್ಷಣವನ್ನು ಹೊಂದಿದೆ. ಚಲನಚಿತ್ರಗಳ...
-
ಈ ಈರ್ವರು ಕಲಾವಿದೆಯರ ನೃತ್ಯ ಸಾಂಗತ್ಯವು ವೇಣುನಾದ ಎಂಬ ನವೀನ ಹಿನ್ನೆಲೆ ಸಂಗೀತ, ಬರೀ ಕೊಳಲಿನ ನಾದ ಮಾತ್ರ, ಗಾಯನ ಇಲ್ಲದೆ ನೃತ್ಯಕ್ಕೆ ಹೆಚ್ಚು ಒತ್ತುಕೊಟ್ಟು...
-
ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ನೃತ್ಯಾಂತರಂಗದ 80ನೇ ಸರಣಿ ಕಾರ್ಯಕ್ರಮದಲ್ಲಿ ಅಂತರಾಷ್ಟೀಯ ಖ್ಯಾತಿಯ ನೃತ್ಯ ಗುರು ರಮಾ ವೈದ್ಯನಾಥನ್ ಮತ್ತು ಸನಾತನ ನಾಟ್ಯಾಲಯದ...
-
ಚುಮು ಚುಮು ಚಳಿ. ಸುತ್ತಲೂ ಹಿಮದ ರಾಶಿ. ಬೆಳೆದು ನಿಂತಿರುವ ಬೆಟ್ಟಗಳ ಸಾಲು. ಅದೇ ಹಿಮಾಚಲ ಪ್ರದೇಶದ ಸುಂದರ ತಾಣ ಮನಾಲಿಯಾಗಿತ್ತು. ಎಂದೂ ಕಂಡಿರದ ಆ ದೃಶ್ಯವನ್ನು...
-
ಸುಮಾರು ನಾಲ್ಕೈದು ದಶಕಗಳ ಹಿಂದೆ ವೇಷಗಳ ಹಿಂಭಾಗದಲ್ಲಿ ಪಾಕು ಸೀರೆಯನ್ನು ಕಟ್ಟುವ ಕ್ರಮ ಇದ್ದಂತಿಲ್ಲ. ಕಿರೀಟ ವೇಷಗಳಿಗೆ ಕಿರೀಟದ ಕೆಳಭಾಗಕ್ಕೆ ಕಟ್ಟಿದ ಚೌರಿ...
ಹೊಸ ಸೇರ್ಪಡೆ
-
ಮಂಗಳೂರು: ಕಜಕಿಸ್ತಾನದ ಆಲ್ಮಾಟಿಯಲ್ಲಿ ಗುರುವಾರ ನಡೆದ ಏಷ್ಯನ್ ಪವರ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕದ್ರಿಯ ದೀಪಾ ಕೆ.ಎಸ್. ಮಹಿಳೆಯರ 72 ಕಿಲೋ ವಿಭಾಗದಲ್ಲಿ...
-
ಹೈದರಾಬಾದ್: ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬಳಿಕ ಆಕೆಯ ದೇಹವನ್ನು ಸುಟ್ಟುಹಾಕಿದ್ದ ಆರೋಪಿಗಳನ್ನು ಇಂದು ಬೆಳ್ಳಂಬೆಳಿಗ್ಗೆ ಸೈಬರಾಬಾದ್ ಪೊಲೀಸ್...
-
ಬಾಗಲಕೋಟೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಸ್ಲಿಂರನ್ನು ಕಂಡರೆ ದ್ವೇಷವಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಬಾದಾಮಿ...
-
ಮುಂಬೈ: ಕರ್ನಾಟಕ ಕ್ರಿಕೆಟಿಗ ಮನೀಷ್ ಪಾಂಡೆ - ನಟಿ ಅಶ್ರಿತಾ ಶೆಟ್ಟಿ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಖ್ಯಾತ ಕ್ರಿಕೆಟಿಗ ಯುವರಾಜ್ ಸಿಂಗ್ "ಪಂಜಾಬಿ...
-
ನವದೆಹಲಿ:ಬಹುಕೋಟಿ ಮೇವು ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಶಿಕ್ಷೆ ಅನುಭವಿಸುತ್ತಿರುವ ರಾಷ್ಟ್ರೀಯ ಜನತಾ ಪಕ್ಷ(ಆರ್ ಜೆಡಿ)ದ ಮುಖ್ಯಸ್ಥ, ಬಿಹಾರದ ಮಾಜಿ...