ಶಿವಣ್ಣ ಆಚಾರ್ಯರಿಗೆ ದೋಗ್ರ ಪೂಜಾರಿ ಪ್ರಶಸ್ತಿ


Team Udayavani, Jul 13, 2018, 6:00 AM IST

b-1.jpg

ಹಿರಿಯ ಯಕ್ಷಗಾನ ಕಲಾವಿದ, ಸ್ತ್ರೀ ಪಾತ್ರಧಾರಿ ಕುರ್ನಾಡು ಶಿವಣ್ಣ ಆಚಾರ್ಯರಿಗೆ ಈ ವರ್ಷದ ಬೋಳೂರು ದೋಗ್ರ ಪೂಜಾರಿ ಪ್ರಶಸ್ತಿ ಪ್ರಕಟವಾಗಿದೆ.ದಮಯಂತಿ, ಕಯಾದು, ಗುಣಸುಂದರಿ, ದೇಯಿ ಬೈದೆತಿ ,ಕಟೀಲು ಕ್ಷೇತ್ರ ಮಹಾತ್ಮೆಯ ಜಾಬಾಲಿ, ಪಂಚವಟಿಯ ರಾಮ, ದೇವಿ ಮಹಾತ್ಮೆಯ ಮಾಲಿನಿ, ದಿತಿ, ದೇವಿ, ಇಂದ್ರಜಿತು ಕಾಳಗದ ಲಕ್ಷ್ಮಣ ಇತ್ಯಾದಿ ವೇಷಗಳನ್ನು ನಿರ್ವಹಿಸಿರುವ ಶಿವಣ್ಣ ಆಚಾರ್ಯ ಹಲವಾರು ವರ್ಷಗಳ ಕಾಲ ಪೋಷಕ ಪಾತ್ರಗಳನ್ನು ನಿರ್ವಹಿಸಿ ಅನುಭವ ಸಾಧಿಸಿದ ಬಳಿಕ ಪ್ರಧಾನ ಪಾತ್ರಗಳತ್ತ ಹೆಜ್ಜೆ ಹಾಕಿದರು.

ಬಂಟ್ವಾಳ ತಾಲೂಕಿನ ಪುಣಚ ಇವರ ಹುಟ್ಟೂರು. ಅಚ್ಚುತ ಆಚಾರ್ಯ ಮತ್ತು ಸರಸ್ವತಿ ದಂಪತಿಗಳ ಪುತ್ರ. 15.6.1942ರಂದು ಜನನ. ಶೈಕ್ಷಣಿಕ ವಿದ್ಯಾಭ್ಯಾಸ 4ನೇ ತರಗತಿಯವರೆಗೆ. ಪುಣಚ ನಾಗಪ್ಪ ಭಂಡಾರಿ ಅವರಿಂದ ಯಕ್ಷಗಾನ ನಾಟ್ಯ ಕಲಿತರು. ಪುಳಿಂಚ ರಾಮಯ್ಯ ಶೆಟ್ಟಿ, ಕೋಳ್ಯೂರು ನಾರಾಯಣ ಭಟ್‌ ಅವರುಗಳಿಂದಲೂ ನಾಟ್ಯಗಾರಿಕೆಯನ್ನು ಅಭ್ಯಾಸ ಮಾಡಿದ ಇವರು ಹಿರಿಯ ಕಲಾವಿದರ ಒಡನಾಟ ಗಳಿಸಿದರು. ಭಾಗವತರಾಗಿದ್ದ ಚಿಕ್ಕಪ್ಪ ಶ್ರೀನಿವಾಸ ಆಚಾರ್ಯ ಅವರಿಂದಲೂ ಪ್ರೇರಣೆ ಪಡೆದಿದ್ದಾರೆ. 

ಸ್ತ್ರೀಪಾತ್ರಕ್ಕೆ ಬೇಕಾದ ರೂಪವಿದ್ದುದರಿಂದ ಈ ಪಾತ್ರಗಳಿಗೆ ಇವರನ್ನು ಆಯ್ಕೆ ಮಾಡಿದ್ದರು. ರೂಪಕ್ಕೆ ತಕ್ಕ ಅಭಿನಯ, ನಾಟ್ಯ, ಭಾವಪೂರ್ಣ ಪಾತ್ರ ನಿರ್ವಹಣೆ ಇವರಿಗೆ ಪ್ರಸಿದ್ಧಿಯನ್ನು ತಂದು ಕೊಟ್ಟಿತು. ಪುಂಡು ವೇಷ, ಕಿರೀಟ ವೇಷಗಳನ್ನೂ ಮಾಡಿದ್ದಾರೆ. ಧರ್ಮಸ್ಥಳ, ಕೂಡ್ಲು, ಮೂಲ್ಕಿ, ವೇಣೂರು, ಸುಂಕದಕಟ್ಟೆ, ಮಲ್ಲ, ನಂದಾವರ ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದ ಇವರು ಪ್ರಸಿದ್ಧ ಕಲಾವಿದರೊಂದಿಗೆ ಪಾತ್ರ ನಿರ್ವಹಿಸಿದ್ದಾರೆ. 

ಸುಭದ್ರೆ, ಚಂದ್ರಮತಿ ಮೊದಲಾದ ಪಾತ್ರಗಳನ್ನು ಭಾವನಾತ್ಮಕವಾಗಿ ನಿರ್ವಹಿಸುತ್ತಿದ್ದರು. ರಾವಣ ವಧೆ ಪ್ರಸಂಗದಲ್ಲಿ ಶೇಣಿಯವರ ರಾವಣ, ಶಿವಣ್ಣ ಆಚಾರ್ಯರ ಮಂಡೋದರಿ ಕೆಲವು ಬಾರಿ ನಡೆದಿತ್ತು. ಪೆರುವಡಿ ನಾರಾಯಣ ಭಟ್ಟರ ಬಾಹುಕ, ಇವರ ದಮಯಂತಿ, ಪೆರುವಡಿಯವರ ಪಾಪಣ್ಣ, ಆಚಾರ್ಯರ ಗುಣಸುಂದರಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. 

17ರಂದು ಪ್ರಶಸ್ತಿ ಪ್ರದಾನ 
ಮೇಳಗಳ ಸಂಚಾಲಕರೂ ಆಗಿದ್ದ ಕೀರ್ತಿಶೇಷ ಬೋಳೂರು ದೋಗ್ರ ಪೂಜಾರಿ ಅವರ 38ನೆಯ ವರ್ಷದ ಸಂಸ್ಮರಣಾ ಪ್ರಶಸ್ತಿ ಮಂಗಳೂರು ಪುರಭವನದಲ್ಲಿ ಜುಲೈ 17ರಂದು ಪ್ರದಾನವಾಗಲಿದೆ. ಇದೇ ಸಂದರ್ಭದಲ್ಲಿ ಪ್ರಸಿದ್ದ ಕಲಾದರ ಕೂಡುವಿಕೆಯಿಂದ “ಸುದರ್ಶನ ವಿಜಯ’ ಎಂಬ ತಾಳಮದ್ದಳೆ ನಡೆಯಲಿದೆ. 

ಎಲ್‌.ಎನ್‌.ಭಟ್‌ ಮಳಿ 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.