ಪಂಡಿತ ಪಾಮರರಿಗೆ ಇಷ್ಟವಾಗುವ ಶ್ರೀದೇವಿ ಮಹಾತ್ಮೆ


Team Udayavani, May 17, 2019, 6:00 AM IST

8

ಪಂಡಿತ ಪಾಮರರೆಲ್ಲರನ್ನೂ ತಲೆಬಾಗಿಸಿ ಭಕ್ತಿ ಪಂಥವನ್ನು ಮೆರೆಸುವಲ್ಲಿ ಅಗ್ರಸ್ಥಾನ ಪಡೆದ ಪ್ರಸಂಗವೇ ಶ್ರೀ ದೇವಿಮಹಾತ್ಮೆ. ಈ ಪ್ರಸಂಗವನ್ನು ನಿತ್ಯವೂ ಆಡುತ್ತಾ ದಾಖಲೆಯನ್ನು ನಿರ್ಮಿಸಿ ಶ್ರೀ ದೇವಿ ಮಹಾತ್ಮೆ ಅಂದರೆ ಪಕ್ಕನೆ ಹೊಳೆವುದು ಕಟೀಲು ಮೇಳ ಎಂಬಲ್ಲಿವರೆಗೆ ಪ್ರಸಿದ್ಧಿಯನ್ನು ಪಡೆದು ಇವತ್ತಿಗೂ ಪ್ರತಿನಿತ್ಯ ಅದೇ ಪ್ರಸಂಗವನ್ನು ಆಡಿದರೂ ನಿತ್ಯ ನೂತನವಾಗಿರುವುದು ಇತ್ತೀಚೆಗೆ ಎಕ್ಕಾರ್‌ನಲ್ಲಿ ಕಟೀಲು ದೇವಳದ ಅರ್ಚಕರು ಹಾಗೂ ಅನುವಂಶಿಕ ಮೊಕ್ತೇಸರರಾದ ವಾಸುದೇವಆಸ್ರಣ್ಣರು ಹಾಗೂ ಮನೆಯವರ ಸೇವೆಯಾಟವಾಗಿ ಜರಗಿದ ಕಟೀಲು 2ನೇ ಮೇಳದ ಶ್ರೀ ದೇವಿ ಮಹಾತ್ಮೆ ಆಟದಲ್ಲಿ ಪ್ರಮಾಣೀಕರಣವಾಯಿತು.

ಚೌಕಿ ಪೂಜೆಯೊಂದಿಗೆ ಹರಕೆ ಮೇಳಗಳಲ್ಲಿ ಬಹುತೇಕ ಕಾಣೆಯಾಗಿರುವ ಕೋಡಂಗಿ ವೇಷದ ಜೊತೆ ಬಾಲಗೋಪಾಲ ಮುಖ್ಯ ಸ್ತ್ರೀವೇಷ ಹನುಮ ನಾಯಕ ಹೊಗಳಿಕೆ ಹಾಗೂ ಪೀಠಿಕೆ ಸ್ತ್ರೀವೇಷದೊಂದಿಗೆ ಪೂರ್ವರಂಗವು ಸಮೃದ್ಧವಾಯಿತು

ಆದಿ ಮಾಯೆಯ ಪ್ರತ್ಯಕ್ಷದೊಂದಿಗೆ ಬ್ರಹ್ಮ ವಿಷ್ಣು ಈಶ್ವರರ ಸತ್ವ ತಮ ರಜೋ ಗುಣಗಳಲ್ಲಿ ಮಿಕ್ಕಿದ್ದು ಯಾವುದೆಂಬ ವಾದದಿಂದ ಆರಂಭಗೊಂಡು ಮಧು ಕೈಟಭರ ವಧೆ ತನಕದ ಕಥಾ ಭಾಗವನ್ನು ಕೆಲವು ಮೇಳದಲ್ಲಿ ಅನವಶ್ಯಕವಾದ ಚರ್ಚೆಯಲ್ಲಿ ಹಿಂಜಿ ಎಳೆದು ಕೊನೆಗೆ ಬೆಳಗಿನ ಜಾವಕ್ಕೆ ಆಟವನ್ನು ಹೇಗೋ ಓಡಿಸಿ ಮುಗಿಸುತ್ತಾರೆ. ಆದರೇ ಇಲ್ಲಿ ಹಾಗೆ ಆಗದೆ ಬ್ರಹ್ಮ ವಿಷ್ಣು ಮಹೇಶ್ವರರ ಸಂವಾದವು ಪೂರ್ವ ನಿರ್ದೇಶಿತ ವಾಚಿಕ ಹಾಗೂ ಅಚ್ಚುಕಟ್ಟಿನ ನಾಟ್ಯದಲ್ಲಿ ಕಳೆಗಟ್ಟಿತು. ಕಾವಳ ಕಟ್ಟೆ ದಿನೇಶ್‌ ರವರು ವಿಷ್ಣುವಾಗಿ ಸಂಚಲನ ಮೂಡಿಸಿದರು.

ಸರಪಾಡಿ ವಿಠ್ಠಲ ಶೆಟ್ಟಿ ಹಾಗೂ ನಾರಾಯಣ ಪೇಜಾವರವರು ಮಧು – ಕೈಟಭರಾಗಿ ಅತಿಯಾಗಿ ಸಭೆ ಸುತ್ತದೆ ರಂಗಸ್ಥಳ ಪ್ರವೇಶ ಮಾಡಿ ರಂಗಸ್ಥಳ ಕಾವು ಏರಿಸಿದ್ದು ಮಾತ್ರವಲ್ಲದೆ ಪಾತ್ರೋಚಿತ ಅರ್ಥಗಾರಿಕೆಯಲ್ಲಿಯೂ ಮಿಂಚಿದರು.ಇತ್ತೀಚೆಗೆ ಅತಿಯಾಗಿ ಕುಣಿದು ವಿಮರ್ಶಕರ ಬಾಯಿಗೆ ಆಹಾರವಾದ ಮಾಲಿನಿಯ ಸನ್ನಿವೇಷದ ನಾಲ್ಕು ಪದಗಳು ಈ ವರ್ಷ ಕಟೀಲು ಮೇಳದಲ್ಲಿ ಎಷ್ಟು ಬೇಕೋ ಅಷ್ಟಕ್ಕೇ ಹ್ರಸ್ವಗೊಳಿಸಿದ ಪರಿಣಾಮವಾಗಿ ಹರೀಶ್‌ ಬೆಳ್ಳಾರೆಯವರ ಅಂದದ ಮಾಲಿನಿಯು ಯಾವುದೇ ಪದ್ಯಕ್ಕೂ ವಿಸ್ತರಿತ ಚಾಲು ಕುಣಿಯದೆ ಸ್ಥಾಯಿಭಾವದ ಅಭಿನಯವು ಉತ್ತಮ ನಿರ್ವಹಣೆಯಾಗಿತ್ತು ವಿದ್ಯುನ್ಮಾಲಿ ಹಾಗೂ ದಿತಿಯಾಗಿ ಬಾಬು ಕುಲಾಲ್‌ರು ತೆಂಕುತಿಟ್ಟಿನ ಹಳೆಯ ಸಂಪ್ರದಾಯವನ್ನು ನೆನಪಿಸಿದರು ಮಹಿಷಾಸುರನಾದ ಲಕ್ಷ್ಮಣ ಕೋಟ್ಯಾನ್‌ರು ಬಣ್ಣದ ವೇಷದ ನರ್ತನದ ವೇಗದಲ್ಲಿಯ ನಿಖರತೆಯನ್ನು ತೋರಿಸಿದರು.

ಪ್ರಧಾನ ಪಾತ್ರವಾದ ಶ್ರೀದೇವಿಯಾಗಿ ಅರುಣ್‌ ಕೋಟ್ಯಾನ್‌ರು ಉನ್ನತ ಸ್ವರಭಾರದ ತೂಕದ ಮಾತುಗಳಿಂದ ಲಾಲಿತ್ಯ ಕಠೊರ ಕೋಪ ರೌದ್ರ ಇತ್ಯಾದಿ ಭಾವಗಳನ್ನು ಯಶಸ್ವಿಯಾಗಿ ನಿರ್ವಹಿಸಿದರು.

ಒಂದು ಕಾಲದಲ್ಲಿ ಕಟೀಲು ಮೇಳದಲ್ಲಿ ಶ್ರೀದೇವಿ ಪಾತ್ರವನ್ನು ಮೆರೆಸಿದ ಬಾಯಾರು ರಮೇಶ ಭಟ್‌ ರವರು ರಕ್ತಬೀಜನಾಗಿ ಶ್ರೀದೇವಿಯನ್ನು ಸ್ವಾಮಿ ಶುಂಭನಿಗಾಗಿ ಬಯಸುವ ಪರಿಯನ್ನು ಮನೋಜ್ಞವಾಗಿ ನಿರ್ವಹಿಸಿದರು. ಅವರಿಗೆ ದೇವಿ ಹಾಗೂ ರಕ್ತಬೀಜ ಎರಡೂ ಪಾತ್ರಗಳಲ್ಲಿ ತಾದ್ಯಾತ್ಮತೆ ಹೊಂದಿದ ಅನುಭವ ಎದ್ದು ಕಾಣುತ್ತಾ ಇತ್ತು. ಶಶಿಧರ ಪಂಜರವರ ಶುಂಭ ಹಾಗೂ ಪ್ರಧಾನ ಹಾಸ್ಯಗಾರರಾದ ಚಂದ್ರಹಾಸರವರ ನಿರ್ವಹಣೆಯೂ ಉತ್ತಮವಾಗಿತ್ತು

ಪೂರ್ವಾರ್ಧದ ಹಿಮ್ಮೇಳದಲ್ಲಿ ಅಲಾಪನೆಯ ಅತಿರೇಕ ಸಾಹಿತ್ಯದ ಚರ್ವಿತ ಚರ್ವಣ ಇಲ್ಲದ ಭಾಗವತಿಕೆಯಲ್ಲಿ ಹರಿಪ್ರಸಾದರು ಹಾಗೂ ಪ್ರಫ‌ುಲ್ಲ ಚಂದ್ರ ನೆಲ್ಯಾಡಿಯವರು ತಮ್ಮ ಸಾಥಿಯವರೊಂದಿಗೆ ರಂಗ ಬಯಕೆಯ ಭಾಗವತಿಕೆಯನ್ನು ಉಣಬಡಿಸಿದ್ದು ವಿಶೇಷ. ಇನ್ನು ರಾತ್ರಿಯ ಉತ್ತರಾರ್ಧದಲ್ಲಿ ಬಲಿಪ ಶೈಲಿಯ ಉತ್ತರಾಧಿಕಾರಿ ಪ್ರಸಾದ ಬಲಿಪರು ತೆಂಕಿನ ಪರಂಪರೆಯ ಏರು ಶ್ರುತಿಯ 4ನೇ ಕಾಲದ ಭಾಗವತಿಕೆಯಲ್ಲಿ ಬೆಳಗಿನ ಜಾವದ ರಂಗಸ್ಥಳದ ಕಾವಿನ ಉಠಾವು ತೋರಿಸುವಲ್ಲಿ ಮುರಾರಿ ಕಡಂಬಳಿತ್ತಾಯರ ಚೆಂಡೆ ಹಾಗೂ ಗಣೇಶ ಬೆಳ್ಳಾರೆಯವರ ಮದ್ದಳೆ ಸಾಥ್‌ ಅನನ್ಯ.

– ಸುರೇಂದ್ರ ಪಣಿಯೂರ್‌

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.