ಮಹಿಳೆಯರು ನಡೆಸಿದ ಸುಧನ್ವ ಕಾಳಗ


Team Udayavani, Nov 8, 2019, 3:54 AM IST

cc-8

ಚೇಂಪಿಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಜಿ.ಎಸ್‌.ಬಿ.ಎಸ್‌ ಸೇವಾ ಸಂಘದ ಆಶ್ರಯದಲ್ಲಿ ಸುಧನ್ವ ಕಾಳಗ ಎಂಬ ಯಕ್ಷಗಾನ ಪ್ರದರ್ಶನಗೊಂಡಿತು. ಕಿರಣ್‌ ಪೈ ಮಾರ್ಗದರ್ಶನದಲ್ಲಿ ತರಬೇತುಗೊಂಡ ಮಹಿಳಾ ಯಕ್ಷಗಾನ ತಂಡದ ಈ ಪ್ರದರ್ಶನ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಯಿತು. ಭಾಗವತರಾಗಿ ಲಂಬೋದರ ಹೆಗಡೆ, ಮದ್ದಳೆಯಲ್ಲಿ ರಾಘವೇಂದ್ರ ಹೆಗಡೆ, ಚಂಡೆಯಲ್ಲಿ ರಾಕೇಶ್‌ ಮಲ್ಯ ಸಹಕರಿಸಿದರು.

ಕುರುಕ್ಷೇತ್ರ ಯುದ್ಧದ ಬಳಿಕ ಧರ್ಮರಾಯನು ಅಶ್ವಮೇಧ ಯಾಗವನ್ನು ಕೈಗೊಳ್ಳುತ್ತಾನೆ. ಅರ್ಜುನನ ಬೆಂಗಾವಲಿನಲ್ಲಿ ಯಾಗದ ಕುದುರೆ ಚಂಪಕಾವತಿ ನಗರವನ್ನು ಪ್ರವೇಶಿಸುತ್ತದೆ. ಆಗ ಅಲ್ಲಿಯ ದೊರೆ ಹಂಸಧ್ವಜನು ಶ್ರೀ ಕೃಷ್ಣನ ದರುಶನ ಭಾಗ್ಯ ಸಿಗುತ್ತದೆ ಎಂಬ ಕಾರಣಕ್ಕಾಗಿ ಅಶ್ವವನ್ನು ಕಟ್ಟಿಹಾಕಿ ಮಗನಾದ ಸುಧನ್ವ ನನ್ನು ಅರ್ಜುನನೆದುರು ಯುದ್ಧಕ್ಕೆ ಹೋಗುವಂತೆ ಹೇಳುತ್ತಾನೆ. ಇದಕ್ಕೆ ಒಪ್ಪಿದ ಸುಧನ್ವನು ಹೆಂಡತಿ ಪ್ರಭಾವತಿಗೆ ಹೇಳಿಹೋಗಲು ಬಂದಾಗ ಆಕೆಯು ಸಂತಾನ ಭಾಗ್ಯವನ್ನು ಕರುಣಿಸಿ ಹೋಗಿ ಎಂದು ಕೇಳಿಕೊಳ್ಳುತ್ತಾಳೆ. ಸುಧನ್ವನು ಇದಕ್ಕೆ ಸಮ್ಮತಿಸಿದ್ದರಿಂದ ಯುದ್ಧಕ್ಕೆ ಹೊರಡುವುದು ವಿಳಂಬವಾಗುತ್ತದೆ. ಇದರಿಂದ ಕುಪಿತನಾದ ಹಂಸಧ್ವಜನು ಸುಧನ್ವನನ್ನು ಕುದಿಯುವ ಎಣ್ಣೆಯ ಕೊಪ್ಪರಿಗೆಗೆ ಹಾಕುವಂತೆ ಹೇಳುತ್ತಾನೆ. ಆದರೆ ಕೃಷ್ಣನ ಧ್ಯಾನದಿಂದ ಸುಧನ್ವನಿಗೆ ಬಿಸಿಯ ಅನುಭವವಾಗುವುದಿಲ್ಲ. ಮುಂದೆ ಸುಧನ್ವರ್ಜುನ ಕಾಳಗದಲ್ಲಿ ಅರ್ಜುನನನಿಗೆ ಸುಧನ್ವನನ್ನು ಸೋಲಿಸುವುದು ಕಷ್ಟವಾಗಿ ಆತನು ಕೃಷ್ಣನ ಮೊರೆ ಹೋಗುತ್ತಾನೆ. ನಂತರದ ಯುದ್ಧದಲ್ಲಿ ಸುಧನ್ವನಿಗೆ ಸೋಲಾದರೂ ಭಗವಂತನ ದರುಶನ ಭಾಗ್ಯದಿಂದ ಮೋಕ್ಷ ಪ್ರಾಪ್ತಿಯಾಗುತ್ತದೆ.

ಸುಧನ್ವನಾಗಿ ಕಿರಣ್‌ ಪೈಯವರ ನೃತ್ಯ, ಮಾತುಗಾರಿಕೆ ಮೆಚ್ಚುಗೆಗೆ ಪಾತ್ರವಾಯಿತು. ಪ್ರಭಾವತಿಯಾಗಿ ಕಾವ್ಯಾ ಚಂದ್ರು ಸ್ತ್ರೀ ಸಹಜ ಭಾವನೆಗಳನ್ನು ಉತ್ತಮವಾಗಿ ವ್ಯಕ್ತಪಡಿಸಿದರು.ಅರ್ಜುನನಾಗಿ ಭಾರತಿ ಸುದರ್ಶನ್‌, ಕೃಷ್ಣನಾಗಿ ಪ್ರಗತಿ ಕಾಮತ್‌, ವೃಷಕೇತನಾಗಿ ಐಶ್ವರ್ಯಾ ಕಾಮತ್‌, ಪ್ರದ್ಯುಮ್ನನಾಗಿ ಅನ್ನಪೂರ್ಣಾ ಕಾಮತ್‌, ಬಾಲಗೋಪಾಲನಾಗಿ ಪರಿಣಿತಾ ಶೆಣೈ ಪಾತ್ರ ನಿರ್ವಹಿಸಿದ್ದರು.

ಶಾಂತಲಾ ಎನ್‌ ಹೆಗ್ಡೆ

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.