ಸುಜನಾ ಸುಳ್ಯಗೆ ಯಕ್ಷ ಪ್ರಶಸ್ತಿ


Team Udayavani, Mar 15, 2019, 12:30 AM IST

x-38.jpg

ಯಕ್ಷರಂಗದ ಸವ್ಯಸಾಚಿ ಸುಜನಾ ಸುಳ್ಯ ಮೊಗಸಾಲೆ ಶಾರದಮ್ಮ ಯಕ್ಷ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಾ.17ರಂದು ಮಂಗಳೂರಿನ ರಮಣಶ್ರೀ ಕನ್ವೆನ್‌ಷನಲ್‌ ಹಾಲ್‌ನಲ್ಲಿ ನಡೆಯುವ ಆರಾಧನಾ ಚಾರಿಟೇಬಲ್‌ ಟ್ರಸ್ಟ್‌ ಆರಾಧನಾ ಸಂಭ್ರಮದಲ್ಲಿ ಈ ಪ್ರಶಸ್ತಿಯನ್ನು ಅವರಿಗೆ ಪ್ರದಾನಿಸಲಾಗುವುದು. ಯಕ್ಷಗಾನ ಕಲಾವಿದ ಕೋಳ್ಯೂರು ಗೋಪಾಲಕೃಷ್ಣ ಭಟ್ಟರ ಮಾತೃಶ್ರೀ ಮೊಗಸಾಲೆ ಶಾರದಮ್ಮ ಸ್ಮರಣಾರ್ಥ ನೀಡುವ ಯಕ್ಷ ಪ್ರಶಸ್ತಿ ಇದಾಗಿದೆ. 

ಹೈದ್ರಾಬಾದ್‌ನ ನಾಟಕ ಮಂಡಳಿಯಲ್ಲಿ 2 ವರ್ಷ ನಟನಾಗಿ ದುಡಿದ ಇವರು ಆನಂತರ ಮಾವ ಕಾವು ಶ್ರೀನಿವಾಸ ರಾಯರ ಪ್ರೇರಣೆಯಂತೆ ಯಕ್ಷಗಾನ ಕಲಾವಿದರಾಗಿ ಮೇಳದಲ್ಲಿ ಸೇರ್ಪಡೆಗೊಂಡರು. ಬೆಳ್ಳಂಬೆಟ್ಟು ಶಾಸ್ತಾವೇಶ್ವರ ಮೇಳದಲ್ಲಿ ಪ್ರಥಮ ಗೆಜ್ಜೆಕಟ್ಟಿದ ಸುಜನಾ ಅವರು ಬಳಿಕ ವೇಣೂರು,ಇರಾ, ಧರ್ಮಸ್ಥಳ, ಕುದ್ರೋಳಿ, ಕೂಡ್ಲು, ಆದಿ ಸುಬ್ರಹ್ಮಣ್ಯ, ಸುಂಕದಕಟ್ಟೆ, ಮಾಡಾವು, ಪುತ್ತೂರು, ಕಟೀಲು ಯಕ್ಷಗಾನ ಮೇಳಗಳಲ್ಲಿ ಒಟ್ಟು 38 ವರ್ಷ ಕಲಾಸೇವೆಗೈದರು. ಅತಿಕಾಯ, ಗಜೇಂದ್ರ, ಭಸ್ಮಾಸುರ, ರಕ್ತಬೀಜ, ಅರ್ಜುನ, ದಕ್ಷ, ಜಮದಗ್ನಿ ಮೊದಲಾದ ಗಂಭೀರ ಪಾತ್ರಗಳಿಗೆ ಜೀವತುಂಬಿದಲ್ಲದೆ ಜತೆಯಲ್ಲಿ ಹಾಸ್ಯ , ಸ್ತ್ರೀ ಪಾತ್ರಗಳಲ್ಲೂ ಮಿಂಚಿದ್ದರು. ತಾಳಮದ್ದಳೆ ಕೂಟದಲ್ಲಿ ಅರ್ಥಧಾರಿಯಾಗಿ ವಾಕ್ಚಾತುರ್ಯ ಮೆರೆದಿದ್ದರು. ಭಾಗವತರಾಗಿ ,ಮೃದಂಗ, ಚಂಡೆವಾದಕರಾಗಿ, ರಂಗ ವಿನ್ಯಾಸಗಾರರಾಗಿ ನಾಟ್ಯ ಗುರುವಾಗಿ ವೇಷಧಾರಿಯಾಗಿ ಹೀಗೆ ತಮ್ಮನ್ನು ತೊಡಗಿಸಿಕೊಂಡು ಅಗ್ರಮಾನ್ಯ ಕಲಾವಿದರೆನಿಸಿಕೊಂಡರು. ಪುತ್ರ ಜೀವನ್‌ ರಾಂ ಸುಳ್ಯ ಪ್ರಾರಂಭಿಸಿದ ರಂಗಮನೆಯಲ್ಲಿ ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ 60ಕ್ಕೂ ಹೆಚ್ಚು ಮಕ್ಕಳು ಯಕ್ಷಗಾನದ ನಾಟ್ಯ ಮತ್ತು ಹಿಮ್ಮೇಳನ ಕಲಿಯುತ್ತಿದ್ದಾರೆ. ಆ ಮಕ್ಕಳಿಗೆಲ್ಲಾ ಈ ಅಜ್ಜ ಅಚ್ಚುಮೆಚ್ಚು. ಮನೆಗೆ ಬಂದ ಯಾರೇ ಆಗಲಿ ಅವರಿಗೆ ಆತಿಥ್ಯ ನೀಡದೆ ಇವರು ಕಳುಹಿಸುವುದಿಲ್ಲ.ಮಧ್ಯೆ ಸ್ವಲ್ಪಕಾಲ ಅನಾರೋಗ್ಯ ಪೀಡಿತರಾಗಿದ್ದ ಸುಜನಾ ಅವರಿಗೆ ಈ ರಂಗಮನೆಯೇ ಪುನಶ್ಚೇತನ ನೀಡಿತ್ತು. 

ಗಂಗಾಧರ ಮಟ್ಟಿ ಸುಳ್ಯ

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.