ಗತ ವೈಭವ ನೆನಪಿಸಿದ ವಜ್ರದ ಮೂಂಕುತ್ತಿ


Team Udayavani, Jan 3, 2020, 1:10 AM IST

56

ಹಿಂದೆಲ್ಲಾ ಕರಾವಳಿಯಲ್ಲಿ ಶಾಲಾ ಕಾಲೇಜು, ಸಂಘ ಸಂಸ್ಥೆಗಳ ವಾರ್ಷಿಕೋತ್ಸವ, ಊರ ಜಾತ್ರೆ ಉತ್ಸವಗಳ ಸಂದರ್ಭದಲ್ಲೆಲ್ಲ ಸ್ಥಳೀಯ ಯುವಕರು ಸೇರಿ ಅಭಿನಯಿಸುವ ನಾಟಕಗಳನ್ನು ಕಾಣಬಹುದಿತ್ತು. ಸಂಸಾರ ಧರ್ಮ, ಅತ್ತೆ ಸೊಸೆ, ಅಣ್ಣ ತಂಗಿ, ಕರುಳಬಳ್ಳಿಯ ಅಗಾಧತೆಯನ್ನೂ, ಸಾಮಾಜಿಕ ನ್ಯಾಯ ಮೌಲ್ಯಪ್ರಜ್ಞೆಯನ್ನೂ ಸತ್ವಪೂರ್ಣವಾಗಿ ಮನವರಿಕೆ ಮಾಡುವ ನೂರಾರು ನಾಟಕಗಳು ಪ್ರದರ್ಶನಗೊಳ್ಳುತಿದ್ದವು. ಈ ನಾಟಕಗಳ ಮೂಲಕ ಅನೇಕ ನಾಟಕ ರಚನೆಕಾರರು, ಹಿನ್ನೆಲೆ ಸಂಗೀತ ಕಲಾವಿದರು, ರಂಗಸಜ್ಜಿಕೆ ಕಲಾವಿದರು ಹೆಸರುವಾಸಿಯಾಗಿದ್ದರು. ಸ್ಥಳೀಯ ಪ್ರತಿಭೆಗಳ ಅಭಿನಯದ ಬಗ್ಗೆ ಗದ್ದೆ, ತೋಟ, ಹೋಟೆಲ್, ಸೆಲೂನ್‌ಗಳಲ್ಲಿ ಚರ್ಚೆಯಾಗುತಿದ್ದವು.

ಯುವಕರ ಆಸಕ್ತಿಯ ಕ್ಷೇತ್ರ ಬದಲಾಗುತ್ತಿದ್ದಂತೆ ಹಳ್ಳಿ ನಾಟಕಗಳು ಅಪರೂಪವೆನಿಸತೊಡಗಿದವು. ಹಾಗೂ ಈ ಜಾಗವನ್ನು ಸಂಗೀತ ಕಛೇರಿಗಳು, ನೃತ್ಯತಂಡಗಳು ಆಕ್ರಮಿಸಿದವು. ಇನ್ನೂ ಅನಿವಾರ್ಯವೆನಿಸಿದಾಗ ಪೇಟೆಯ ನಾಟಕ ತಂಡಗಳನ್ನು ಕರೆಸಿ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತಿದೆ.

ಆದರೆ ಹಿಂದಿನ ಸಾಂಸ್ಕೃತಿಕ ಪರಂಪರೆಯನ್ನು ಇನ್ನೂ ಉಳಿಸಿಕೊಂಡು ಬಂದಿರುವ ಕೆಲವೇ ಊರುಗಳಲ್ಲಿ ಬಂಟ್ವಾಳ ತಾಲೂಕಿನ ಇರಾ ಗ್ರಾಮವೂ ಒಂದು. ಇಲ್ಲಿ ಇತ್ತೀಚಿಗೆ ನಡೆದ ಮಲೆಯಾಳಿ ಬಿಲ್ಲವ ಸೇವಾ ಸಂಘದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸ್ಥಳೀಯ ಯುವಕರು ಪ್ರದರ್ಶಿಸಿದ ಶಶಿಧರ ಬಂಡಿತಡ್ಕ ರಚಿಸಿ, ವೈ.ಬಿ. ಸುಂದರ್‌ ಮುಂದಾಳತ್ವದಲ್ಲಿ, ನಿತಿನ್‌ ಹೊಸಂಗಡಿ ನಿರ್ದೇಶಿಸಿದ “ವಜ್ರದ ಮೂಂಕುತ್ತಿ’ ನಾಟಕ ಪ್ರೇಕ್ಷಕರನ್ನು ಮನಸೂರೆಗೊಳಿಸುವುದರಲ್ಲಿ ಯಶಸ್ವಿಯಾಯಿತು.

ಪ್ರೀತಿಸಿದ ಯುವತಿಯನ್ನು ಮದುವೆಯಾಗದೆ ಚಡಪಡಿಸುವ ಮನಮಿಡಿಯುವ ಸೂರಜ್‌ನ ಪಾತ್ರದಲ್ಲಿ ವೈ.ಬಿ. ಪ್ರವೀಣ್‌ ಮನೋಜ್ಞ ಅಭಿನಯ ನೀಡಿದರೆ, ನಾಯಕಿಯ ಮನಮುಟ್ಟುವ ಪಾತ್ರದ ಮೂಲಕ ಮಿಥುನ್‌ ಪ್ರೇಕ್ಷಕರಿಂದ ಶಹಬಾಸ್‌ಗಿರಿ ಪಡೆದರು.ಇನ್ನು ವಿಶೇಷವಾಗಿ ತನ್ನ ವಿಭಿನ್ನ ಹಾಸ್ಯ ಅಭಿನಯದ ಅಜ್ಜಿಯ ಪಾತ್ರದಲ್ಲಿ ದಿನೇಶ್‌ ಚಪ್ಪಾಳೆ ಗಿಟ್ಟಿಸಿದರು. ಧೀರಜ್‌ ಮುಗುಳ್ಯ, ಸಂಜಿತ್‌ ಕುಕ್ಕಾಜೆ, ಅಶೋಕ್‌ ಚಟ್ಟೆಕಲ್ಲು, ಶರತ್‌ ಕೆಂಜಿಲ ಹೊಟ್ಟೆಹುಣ್ಣಾಗುವಷ್ಟು ನಗಿಸುವಲ್ಲಿ ಯಶಸ್ವಿಯಾದರು. ನಾಗೇಶ್‌ ಪೂಜಾರಿ-ದೇಜಪ್ಪ ಪೂಜಾರಿ ಅವರೂ ನಗು ತರಿಸಿದರು. ವೈ.ಬಿ ಸುಂದರ್‌, ಗಣೇಶ್‌ ಕಿನ್ನಿಮಜಲು, ರಕ್ಷಿತ್‌ ಇರಾ, ನಾರಾಯಣ ಸೂತ್ರಬೈಲ್, ಗೋಪಾಲ್‌ ಅಶ್ವಥಡಿ ಮುಂತಾದವರ ಉತ್ತಮ ಅಭಿನಯ ಎರಡೂವರೆ ತಾಸುಗಳ ಕಾಲ ಪ್ರೇಕ್ಷಕರನ್ನು ನಿರಾಸೆಗೊಳಿಸಲಿಲ್ಲ. ಗ್ರಾಮೀಣ ಭಾಗದ ಪ್ರತಿಭೆಗಳಿಗೆ ವೇದಿಕೆ ದೊರಕಿದರೆ ರಂಗಭೂಮಿ ಇನ್ನಷ್ಟು ಪ್ರಜ್ವಲಿಸಬಹುದು ಎಂಬುದು ನಿಜವಾಗಿದೆ.

ಸತೀಶ್‌ ಇರಾ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.