ಕಲಾಪ್ರದರ್ಶನದಲ್ಲಿ ಭಕ್ತಿಯ ಅಭಿವ್ಯಕ್ತಿ


Team Udayavani, Apr 7, 2017, 3:55 PM IST

007-KALA-8.jpg

ಯೋಗ ತಂತ್ರಗಳಲ್ಲಿ ಅತ್ಯಂತ ಪ್ರಾಚೀನವಾದ ರಾಜಯೋಗವನ್ನು ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಜಗತ್ತಿಗೆ ಉಚಿತವಾಗಿ  ಕಲಿಸುತ್ತದೆ. ಇದರ ಕೇಂದ್ರ ರಾಜಸ್ಥಾನದ ಮೌಂಟ್‌ ಅಬು ಪರ್ವತದಲ್ಲಿದ್ದು, ಪ್ರಪಂಚದಾದ್ಯಂತ ಎಂಟೂವರೆ ಸಾವಿರ ಶಾಖೆಗಳನ್ನು ಹೊಂದಿದೆ. ಮಣಿಪಾಲದಲ್ಲಿಯೂ ಒಂದು ಶಾಖೆ ಇದೆ. ಇವರು ಪ್ರತಿವರುಷ ಮಹಾಶಿವರಾತ್ರಿಯಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಈ ಬಾರಿ ಚಿತ್ರಕಲೆ ಮತ್ತು ಶಿವಲಿಂಗ ರಚನಾ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದ್ದರು. ಪ್ರದರ್ಶನಾಂಗಣದಲ್ಲಿ ಹಿರಿ-ಕಿರಿಯರು ರಚಿಸಿದ 120ಕ್ಕೂ ಮಿಕ್ಕಿ ಕಲಾಕೃತಿಗಳಿದ್ದವು. ಇವುಗಳಲ್ಲಿ ಈಶ್ವರೀಯ ತತ್ವ ಮತ್ತು ಚಿಂತನೆಗಳಿಗೆ ಅನುಸಾರವಾಗಿ ಜಲವರ್ಣ, ಕ್ರೇಯಾನ್‌ ಮತ್ತು ಆಯಿಲ್‌ ಪೇಸ್ಟಲ್‌ಗ‌ಳಲ್ಲಿ ಬಹಳ ಅರ್ಥಪೂರ್ಣವಾಗಿ ಅಭಿವ್ಯಕ್ತಿಗೊಳಿಸಿದ್ದರು. ಸುಮಾರು ಇಪ್ಪತ್ತಕ್ಕೂ ಮಿಕ್ಕಿದ ಆವೆ ಮಣ್ಣು ಮತ್ತು ಥರ್ಮಾಕೋಲ್‌ ಹಾಳೆಯಿಂದ ತಯಾರಿಸಿದ ಶಿವಲಿಂಗ ಮಾದರಿಗಳಿದ್ದವು. ಇವುಗಳನ್ನು ವಿವಿಧ ಬಗೆಯ ಹಣ್ಣಿನ ಬೀಜ, ಧಾನ್ಯ, ವಿವಿಧ ಬಣ್ಣದ ಅಂಗಿ ಗುಂಡಿ, ರುದ್ರಾಕ್ಷಿ ಕಾಯಿ, ಟಿಕಲಿ, ಬಣ್ಣದ ರಿಬ್ಬನ್‌ಗಳು, ಪಿ.ಒ.ಪಿ. ಮತ್ತು ಕೃತಕ ಹೂಗಳೊಂದಿಗೆ ಅಲಂಕರಿಸಿ ಭಕ್ತಿ ಭಾವದೊಂದಿಗೆ ಕೌಶಲ ಮೆರೆದಿದ್ದರು. ಇದರ ಜತೆಗೆ ಸಂಸ್ಥೆಯಿಂದ ಪುಷ್ಪಲಿಂಗ, ಜಲಪ್ರಕಾಶ ಲಿಂಗ, ಹಿಮಲಿಂಗ ದರ್ಶನ, ಆಧ್ಯಾತ್ಮಿಕ ಚಿತ್ರ ಪ್ರದರ್ಶನ, ರಾಜಯೋಗ ಧ್ಯಾನ ಅನುಭೂತಿ, ಸಮೂಹ ನೃತ್ಯ, 

ಧ್ಯಾನ ಮತ್ತು ಏಕಾಗ್ರತೆ ಶಕ್ತಿ ಪರೀಕ್ಷಿಸಿಕೊಳ್ಳುವ ಸಾಧನ, ಗ್ಲೂ ಮತ್ತು ಗ್ಲೋ ಆರ್ಟ್‌ ಖ್ಯಾತಿಯ ವಿನಯ 
ಹೆಗಡೆ ಅವರಿಂದ ಗಾಳಿಯಲ್ಲಿ ಚಿತ್ರ ಬರೆಯುವ “”ಕಾಸ್ಮಿಕ್‌ ಸ್ಪಾಷ್‌” ಎನ್ನುವ ವಿನೂತನ ಪ್ರಾತ್ಯಕ್ಷಿಕೆಗಳಿದ್ದವು. 

ಹೀಗೆ ಮನಸ್ಸಿಗೆ ಮುದ ನೀಡುವ ಸುಂದರ ಹಸಿರು ಪ್ರಕೃತಿಯ ಮಡಿಲಲ್ಲಿ ನೂರಾರು ವೀಕ್ಷಕರಿಗೆ ಆಧ್ಯಾತ್ಮಿಕ ಜ್ಞಾನ ಸಿಂಚನದ ಜತೆಗೆ ಕಲಾ ಸಂಸ್ಕೃತಿಯ ಸವಿಯನ್ನೂ ಉಣಿಸಿದ ಈ ಸಂಸ್ಥೆ  ಅಭಿನಂದನೀಯ. 

ಕೆ. ದಿನಮಣಿ ಶಾಸ್ತ್ರೀ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.