ಕಿಶೋರ ಯಕ್ಷಗಾನ ಸಂಭ್ರಮದಲ್ಲಿ ಕಿಶೋರಿಯರ ಮೇಲುಗೈ


Team Udayavani, Dec 13, 2019, 4:15 AM IST

sa-27

ಉಡುಪಿ ಶ್ರೀಕೃಷ್ಣಮಠದಲ್ಲಿ ಈಗ ಪ್ರತಿನಿತ್ಯ ಬಾಲಕ, ಬಾಲಕಿಯರ ಯಕ್ಷಗಾನ “ಕಿಶೋರ ಯಕ್ಷಗಾನ ಸಂಭ್ರಮ’ ನ. 25ರಿಂದ ಪ್ರತಿಭೆ ಪ್ರದರ್ಶನಗೊಳ್ಳುತ್ತಿದೆ. ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ವಿಶೇಷವಾಗಿ ಮುಮ್ಮೇಳದಲ್ಲಿ ಪಾಲ್ಗೊಳ್ಳುತ್ತಿದ್ದು ಅಪರೂಪದಲ್ಲಿ ಹಿಮ್ಮೇಳದಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾರೆ.

ಮಹತ್ವದ ಪ್ರಸಂಗಗಳು
ಚಕ್ರವ್ಯೂಹ, ಶಶಿಪ್ರಭಾ ಪರಿಣಯ, ಅಭಿಮನ್ಯು ಕಾಳಗ, ಸೈಂಧವ ವಧೆ, ವೀರಮಣಿ ಕಾಳಗ, ಶ್ಯಮಂತ ರತ್ನ, ಕಂಸ ವಧೆ, ಪಂಚವಟಿ, ರಾಜಾ ಯಯಾತಿ, ಶ್ರೀಕೃಷ್ಣ ಪಾರಿಜಾತವೇ ಮೊದಲಾದ ಹಿರಿಯ ಕಲಾವಿದರು ಪ್ರದರ್ಶಿಸುವ ಪ್ರಸಂಗಗಳನ್ನು ಪ್ರೌಢಶಾಲಾ ವಿದ್ಯಾರ್ಥಿಗಳು ಆಡಿ ತೋರಿಸುತ್ತಿದ್ದಾರೆ.

12 ವರ್ಷಗಳಿಂದ ಪ್ರದರ್ಶನ
13 ವರ್ಷಗಳ ಹಿಂದೆ ಆರಂಭಗೊಂಡ ಯಕ್ಷ ಶಿಕ್ಷಣ ಟ್ರಸ್ಟ್‌ ನಿರಂತರ 12 ವರ್ಷಗಳಿಂದ ಡಿಸೆಂಬರ್‌ ತಿಂಗಳಲ್ಲಿ ಯಕ್ಷಗಾನ ಮಾಸವೆಂಬಂತೆ ಆಚರಿಸುತ್ತಿದೆ.

47 ಪ್ರದರ್ಶನಗಳು
ರಾಜಾಂಗಣದಲ್ಲಿಉಡುಪಿ ಸನಿಹದ 31 ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ನ. 25ರಿಂದ ಡಿ. 19ರವರೆಗೆ 31 ಪ್ರದರ್ಶನವನ್ನು ಮತ್ತು ಬ್ರಹ್ಮಾವರ ಆಸುಪಾಸಿನ 15 ಶಾಲೆಗಳ ವಿದ್ಯಾರ್ಥಿಗಳು ಡಿ. 20ರಿಂದ 28ರವರೆಗೆ 16 ಪ್ರದರ್ಶನದ ಮೂಲಕ ತಮ್ಮ ಕಲಾಪೌಢಿಮೆ ಮೆರೆಯುತ್ತಿದ್ದಾರೆ. ರಾಜಾಂಗಣದಲ್ಲಿ ಅಪರಾಹ್ನ 3.30ರಿಂದ 5 ಗಂಟೆ ಮತ್ತು ರಾತ್ರಿ 7 ಗಂಟೆಯಿಂದ 8.30ರವರೆಗೆ ಪ್ರದರ್ಶನ ನೀಡಿದರೆ, ಬ್ರಹ್ಮಾವರದ ಬಸ್‌ ನಿಲ್ದಾಣ ಸಮೀಪದ ವೇದಿಕೆಯಲ್ಲಿ ಸಂಜೆ 5ರಿಂದ 6.30 ಮತ್ತು 6.30ರಿಂದ 8ರವರೆಗೆ ಪ್ರದರ್ಶನ ನಡೆಯಲಿದೆ.

1,500 ವಿದ್ಯಾರ್ಥಿಗಳ ಕಲಾ ಪ್ರತಿಭೆ
ಒಂದೊಂದು ತಂಡದಲ್ಲಿ ಸುಮಾರು 40 ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಾರೆ. ಕೆಲವು ತಂಡಗಳಲ್ಲಿ ಹೆಚ್ಚು, ಕೆಲವು ತಂಡಗಳಲ್ಲಿ ಕಡಿಮೆ ಇರುವುದಿದೆ. ಉಡುಪಿ ಮತ್ತು ಬ್ರಹ್ಮಾವರದಲ್ಲಿ ಸುಮಾರು 1,500 ವಿದ್ಯಾರ್ಥಿಗಳು ಕಲಾಪ್ರತಿಭೆ ಮೆರೆಯುತ್ತಿದ್ದಾರೆ. ಇಷ್ಟು ಸಂಖ್ಯೆಯ ವಿದ್ಯಾರ್ಥಿಗಳು 12 ವರ್ಷಗಳಿಂದ ಕಲಾರಾಧನೆಯಲ್ಲಿ ಪಾಲ್ಗೊಳ್ಳುತ್ತಿರುವುದು, ಬಹುಮಂದಿ ವಿದ್ಯಾರ್ಥಿನಿಯರು ಇರುವುದು ವಿಶೇಷವಾಗಿದೆ.

ಸ್ಥಾಯೀ ವ್ಯವಸ್ಥೆ
ಟ್ರಸ್ಟ್‌ ಗೌರವಾಧ್ಯಕ್ಷರಾಗಿ ಶ್ರೀಕೃಷ್ಣಮಠದ ಪರ್ಯಾಯ ಪೀಠಸ್ಥ ಸ್ವಾಮೀಜಿ, ಕಾರ್ಯಾಧ್ಯಕ್ಷರಾಗಿ ಹಾಲಿ ಶಾಸಕರು, ಕಾರ್ಯದರ್ಶಿಗಳಾಗಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿಗಳು ಕಾರ್ಯನಿರ್ವಹಿಸುವ ಸ್ಥಾಯೀ ವ್ಯವಸ್ಥೆ ರೂಪಿಸಲಾಗಿದೆ. ಯಕ್ಷ ಶಿಕ್ಷಣ ಕಲ್ಪನೆಯನ್ನು ತಮ್ಮ ಶಾಸಕತ್ವದ ಅವಧಿಯಲ್ಲಿ ಆರಂಭಿಸಿದ ರಘುಪತಿ ಭಟ್‌ ಅವರೇ ಈಗ ಶಾಸಕರಾಗಿ ಟ್ರಸ್ಟ್‌ ಕಾರ್ಯಾಧ್ಯಕ್ಷರಾಗಿದ್ದಾರೆ.
ಪ್ರದರ್ಶನದಲ್ಲಿ ಪಾಲ್ಗೊಂಡ ತಂಡಗಳು ಶಾಲಾ ವಾರ್ಷಿಕೋತ್ಸವದಲ್ಲಿ ಪ್ರದರ್ಶನ ನೀಡುವುದು, ಪ್ರತಿಭಾ
ಕಾರಂಜಿಯಲ್ಲಿಪ್ರದರ್ಶನ, ಲವೆಡೆಗಣೇಶೋತ್ಸವಗಳಲ್ಲಿಯೂ ಇದೇ ವಿದ್ಯಾರ್ಥಿಗಳ ಪ್ರದರ್ಶನ ನಡೆಯುತ್ತಿರುವುದು ಯಕ್ಷ ಶಿಕ್ಷಣ ಟ್ರಸ್ಟ್‌ನ ಸಾಧನೆಗಳು.

ದಂಪತಿ, 75-25ರ ಯಕ್ಷ ಶಿಕ್ಷಕರು
? ಒಟ್ಟು 22 ಯಕ್ಷಗಾನದ ಗುರುಗಳು ಜೂನ್‌ನಿಂದ ಡಿಸೆಂಬರ್‌ ತನಕ ವಾರದಲ್ಲಿ ಸಮಯ  ಮಾಡಿಕೊಂಡು ಎರಡು ಮೂರು ತರಗತಿಗಳನ್ನು ನಡೆಸಿ ಈ ಮಟ್ಟಕ್ಕೆ ವಿದ್ಯಾರ್ಥಿಗಳನ್ನು ತಂದಿರಿಸುತ್ತಾರೆ.

? ಚೇರ್ಕಾಡಿಯ ಮಂಜುನಾಥ ಪ್ರಭು ಮತ್ತು ಶಶಿಕಲಾ ಪ್ರಭು ದಂಪತಿ ಇಬ್ಬರೂ ಗುರುಗಳಾಗಿ
ಕಾರ್ಯನಿರ್ವಹಿಸುತ್ತಿದ್ದಾರೆ.

? 75ರ ಹರೆಯದ ತೋನ್ಸೆ ಜಯಂತಕುಮಾರರಿಂದ ಹಿಡಿದು 25ರ ಆಸುಪಾಸಿನಲ್ಲಿರುವ ಶೈಲೇಶ್‌, ನಿಶ್ವಲ್‌, ರೋಹಿತ್‌ ಕುಮಾರ್‌ ಶಿಕ್ಷಕರಾಗಿ ಪಾಲ್ಗೊಳ್ಳುತ್ತಿದ್ದಾರೆ.

? ಬ್ರಹ್ಮಾವರ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸುಮಾರು ನೂರು ವಿದ್ಯಾರ್ಥಿಗಳಿರುವ ಕಾರಣ ಅಲ್ಲಿ ಬಾಲಕ ಮತ್ತು ಬಾಲಕಿಯರ ಎರಡು ಪ್ರತ್ಯೇಕ ಪ್ರದರ್ಶನ ನಡೆಯಲಿದೆ. ಉಡುಪಿಯ ಬಾಲಕಿಯರ ಸರಕಾರಿ ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗ, ಸೈಂಟ್‌ ಸಿಸಿಲೀಸ್‌ ಶಾಲಾ ತಂಡದಲ್ಲಿ ವಿಶೇಷವಾಗಿ ಬಾಲಕಿಯರೇ ಇದ್ದಾರೆ.

? ಉಡುಪಿ ಪ್ರದರ್ಶನದ ವಿದ್ಯಾರ್ಥಿಗಳಲ್ಲಿ ಶೇ. 50 ಮಕ್ಕಳು ಯಕ್ಷಗಾನ ಸಂಪರ್ಕವಿಲ್ಲದ ಹೊರ ಜಿಲ್ಲೆಯಿಂದ ಬಂದವರು, ಬ್ರಹ್ಮಾವರದಲ್ಲಿ ಸ್ಥಳೀಯರು ಹೆಚ್ಚು. ಒಟ್ಟು ವಿದ್ಯಾರ್ಥಿಗಳಲ್ಲಿ ಶೇ. 60ರಷ್ಟು ಬಾಲಕಿಯರು.

? ಕನ್ನಡ ಮತ್ತು ಆಂಗ್ಲ ಮಾಧ್ಯಮ ಎರಡೂ ಶಾಲೆಗಳ ಹಿಂದು, ಮುಸ್ಲಿಂ, ಕ್ರೈಸ್ತ ಹೀಗೆ ವಿವಿಧ ಸಮುದಾಯಗಳ ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶಿಸುತ್ತಿದ್ದಾರೆ.

? ಕಳೆದ 13 ವರ್ಷಗಳ ಪ್ರಯತ್ನದಿಂದಾಗಿ ಮೇಳಗಳಿಗೆ ಸೇರಿ ಕಲಾವಿದರ ಮಟ್ಟಕ್ಕೆ ಏರಿದವರಿದ್ದಾರೆ.

? ಶೈಲೇಶ್‌, ನಿಶ್ವಲ್‌, ರೋಹಿತ್‌ಕುಮಾರ್‌ ಅವರು ಯಕ್ಷ ಶಿಕ್ಷಣ ವಿದ್ಯಾರ್ಥಿಗಳಾಗಿ ಬೆಳೆದು ಉಡುಪಿ ಎಂಜಿಎಂ ಯಕ್ಷಗಾನ ಕೇಂದ್ರದಲ್ಲಿಯೂ ಕಲಿತು ಪ್ರಸ್ತುತ ಯಕ್ಷ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಯಕ್ಷಗಾನ ಶಿಕ್ಷಣದಿಂದಾಗಿ ಫ‌ಲಿತಾಂಶದ ಮೇಲೆ ಉತ್ತಮ ಪರಿಣಾಮ ಬೀರಿದೆ ಎನ್ನುವುದನ್ನು ಶಿಕ್ಷಕರೇ ಒಪ್ಪಿಕೊಳ್ಳುತ್ತಿದ್ದಾರೆ. ಯಕ್ಷ ವಿದ್ಯಾರ್ಥಿಗಳು ತರಗತಿಯ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದದ್ದೇ ಇಲ್ಲ ಎನ್ನಬಹುದು.
– ಎಸ್‌.ವಿ.ಭಟ್‌, ಯಕ್ಷ ಶಿಕ್ಷಣ ಟ್ರಸ್ಟ್‌ ಟ್ರಸ್ಟಿ ಮತ್ತು ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರು, ಉಡುಪಿ.

ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.