ಮದ್ದಳೆಗಾರ ಎ.ಪಿ.ಪಾಠಕ್‌ಗೆ ಮಲೆನಾಡ ಸಿರಿ ಪ್ರಶಸ್ತಿ 


Team Udayavani, Feb 2, 2018, 3:03 PM IST

20-40.jpg

ಬಡಗುತಿಟ್ಟಿನ ಮದ್ದಳೆ ವಾದಕ ಅನಂತ ಪದ್ಮನಾಭ ಪಾಠಕ್‌ ಸೋಮೇಶ್ವರದ ಮಲೆನಾಡ ಸಿರಿ ಚಾರಿಟೇಬಲ್‌ ಟ್ರಸ್ಟ್‌ನ “ಮಲೆನಾಡ ಸಿರಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಫೆ.3ರಂದು ಸೋಮೇಶ್ವರ ಸಮೀಪ ನಾಡಾ³ಲುನಲ್ಲಿ ಪ್ರಶಸ್ತಿ ಪ್ರದಾನಿಸಲಾಗುವುದು.ಬಳಿಕ ಪ್ರಸಿದ್ದ ಕಲಾವಿದರಿಂದ “ಮಾರುತಿ ಪ್ರತಾಪ’ ಎಂಬ ಬಯಲಾಟ ನಡೆಯಲಿದೆ.

 ಪಾಠಕ್‌ ಅವರು ಬಡಗುತಿಟ್ಟಿನ ಮದ್ದಳೆವಾದನದ ಜತೆಗೆ ಭಾಗವತಿಕೆ ಮಾಡಬಲ್ಲರು ಮತ್ತು ಚಂಡೆಯನ್ನೂ ನುಡಿಸಬಲ್ಲರು.ನಿಧಾನ ಲಯದಲ್ಲೂ ಬಾರಿಸಬಲ್ಲವರಾದ ಇವರು ವಿದ್ವಾನ್‌ ಗಣಪತಿ ಭಟ್‌,ನೆಬ್ಬೂರು ನಾರಾಯಣ ಬಾಗವತ್‌,ಕೆಪ್ಪೆಕೆರೆ ಸುಬ್ರಾಯ ಭಾಗವತರಂತವರಿಗೆ ಮದ್ದಳೆಗಾರರಾಗಿ ಗುರುತಿಸಿಕೊಂಡಿದ್ದಾರೆ.

ಕಾರ್ಕಳದಲ್ಲಿ 1968ರಲ್ಲಿ ಶ್ರೀಕಾಂತ ಪಾಠಕ್‌ ಮತ್ತು ಗಿರಿಜಾ ಪಾಠಕ್‌ ದಂಪತಿಯ ಪುತ್ರನಾಗಿ ಜನಿಸಿದ ಇವರಿಗೆ ಯಕ್ಷಗಾನ ಬಾಲ್ಯದಲ್ಲೇ ಕರಗತ.ತೆಂಕುತಿಟ್ಟು ಯಕ್ಷಗಾನವನ್ನು ಅಭ್ಯಾಸಮಾಡಿ ಅನಂತರ 1986ರಲ್ಲಿ ಉಡುಪಿಯ ಯಕ್ಷಗಾನ ಕೇಂದ್ರದಲ್ಲಿ ಕೋಟ ಮಹಾಬಲ ಕಾರಂತರಿಂದ ಮದ್ದಳೆ ವಾದನ ಅಭ್ಯಸಿಸಿ ಅಲ್ಲಿಯೇ ಅಧ್ಯಾಪಕರಾಗಿ ನೇಮಕಗೊಂಡರು.ಶಿವರಾಮ ಕಾರಂತರ ಯಕ್ಷಗಾನ ಬ್ಯಾಲೆಯಲ್ಲಿ ಮದ್ದಳೆ ವಾದಕರಾಗಿ ದುಡಿದಿದ್ದಾರೆ.ಇಡಗುಂಜಿ ಮೇಳದಲ್ಲಿ ತಿರುಗಾಟ ಮಾಡಿದ್ದಾರೆ.ಗುಣವಂತೆಯ ಶ್ರೀಮಯ ಯಕ್ಷಗಾನ ಕೇಂದ್ರದಲ್ಲಿ ಅಧ್ಯಾಪಕರಾಗಿ ಸೇವೆಸಲ್ಲಿಸಿದ್ದಾರೆ.ಮಂಟಪ ಉಪಾಧ್ಯರ “ಮೋಹಮೇನಕೆ’ಗೆ ನಿರ್ದೇಶಕರಾಗಿಯೂ, ಏಕವ್ಯಕ್ತಿ ಯಕ್ಷಗಾನ ಪ್ರಯೋಗದಲ್ಲಿ ವಿದ್ವಾನ್‌ ಗಣಪತಿ ಭಟ್ಟರ ಭಾಗವತಿಕೆಗೆ ಮದ್ದಳೆವಾದಕನಾಗಿ ಕಾಣಿಸಿಕೊಂಡಿದ್ದಾರೆ.ಪೂರ್ಣಚಂದ್ರ ಯಕ್ಷಗಾನ ಮೇಳದಲ್ಲಿ ಮದ್ದಳೆಗಾರರಾಗಿ ವಿದೇಶಗಳ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಗರ ಸುಬ್ರಮಣ್ಯ ಆಚಾರ್ಯರ ನಡುಮನೆ ಗಾಯನದಲ್ಲೂ ಮದ್ದಳೆಗಾರರಾಗಿ ಅನೇಕ ಕಾರ್ಯಕ್ರಮದಲಿ ಭಾಗವಹಿಸಿದ್ದಾರೆ. ಹೀಗೆ ನಿರಂತರ 28 ವರ್ಷಗಳಿಂದ ಕಲಾಸೇವೆ ಮಾಡುತ್ತಾ ಬರುತ್ತಿರುವ ಇವರು ಸದ್ಯ ಬೆಂಗಳೂರಿನ ನಾದ ಸೌರಭ ಕಲಾಶಾಲೆಯಲ್ಲಿ ಹಿಮ್ಮೇಳದ ಗುರುವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 ಮದ್ದಳೆ ಮಹಾಬಲ ಕಾರಂತ ಪ್ರಶಸ್ತಿ,ಕವಿ ಮುದ್ದಣ್ಣ ಪುರಸ್ಕಾರ,ಕಲಾಶಾಲೆ ಪುರಸ್ಕಾರ ಸಹಿತ ಅನೇಕ ಸನ್ಮಾನಗಳಿಗೆ ಪಾತ್ರರಾಗಿರುವ ಇವರಿಗೆ ಹುಟ್ಟೂರ ಮಲೆನಾಡ ಸಿರಿ ಪ್ರಶಸ್ತಿ ಯೋಗ್ಯವಾಗಿಯೇ ದೊರೆಯುತ್ತಿದೆ.

ಪ್ರೊ| ಎಸ್‌.ವಿ.ಉದಯ ಕುಮಾರ ಶೆಟ್ಟಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.