ಭ್ರಾಮರೀ ಯಕ್ಷಮಿತ್ರರು ಯಕ್ಷ ವೈಭವ


Team Udayavani, Sep 13, 2019, 5:00 AM IST

Q-1

ಯಕ್ಷಗಾನದ ಪ್ರವರ್ತನೆಗಾಗಿಯೇ ಹುಟ್ಟಿಕೊಂಡ ಭ್ರಾಮರೀ ಯಕ್ಷಮಿತ್ರರು ಗ್ರೂಪ್‌ ಇದೀಗ ಸಾರ್ಥಕ ನಾಲ್ಕನೇ ವರ್ಷದ ಹೊಸ್ತಿಲಲ್ಲಿದೆ. ಪ್ರತಿವರ್ಷವೂ ಯಕ್ಷವೈಭವ ಎಂಬ ಹೆಸರಲ್ಲಿ ವಾರ್ಷಿಕೋತ್ಸವ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಯಕ್ಷಗಾನ ಸಾಧಕರನ್ನು ಗುರುತಿಸಿ ಬ್ರಾಮರಿ ಯಕ್ಷಮಣಿ ಪ್ರಶಸ್ತಿ ನೀಡಿ ಗೌರವಿಸುವುದಲ್ಲದೆ , ನೇಪಥ್ಯದ ಕಲಾವಿದರನ್ನೂ ಗುರುತಿಸಿ ಸಮ್ಮಾನಿಸುವ , ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನ ನೀಡುವ ಪರಂಪರೆಯನ್ನು ಪಾಲಿಸಿಕೊಂಡು ಬಂದಿದೆ.

ವಿನಯಕೃಷ್ಣ ಕುರ್ನಾಡುರವರು 2015ರಲ್ಲಿ ಸಮಾನ ಮನಸ್ಕ ಮಿತ್ರರೊಂದಿಗೆ ಸ್ಥಾಪಿಸಿದ ಬ್ರಾಮರೀ ಯಕ್ಷ ಮಿತ್ರರು ಗ್ರೂಪಿನಲ್ಲಿ ಸಮಾಜದ ಎಲ್ಲ ಸ್ತರಗಳ ಮಂದಿ ಸದಸ್ಯರಾಗಿದ್ದಾರೆ. ಯಕ್ಷಗಾನ ವಾಟ್ಸಾಪ್‌ ಗ್ರೂಪ್‌ಗ್ಳಲ್ಲೇ ಪ್ರಥಮವಾಗಿ ನೋಂದಣಿಗೊಂಡ ಗ್ರೂಪ್‌ ಎಂಬ ಹೆಗ್ಗಳಿಕೆ ಇದಕ್ಕಿದೆ. ಅರ್ಥಪೂರ್ಣವಾದ ಯಕ್ಷಗಾನ ಕಾರ್ಯಕ್ರಮಗಳಿಂದ ಪ್ರತ್ಯೇಕವಾಗಿ ಗುರುತಿಸಿಕೊಂಡಿದೆ.

ನಾಲ್ಕನೇ ವಾರ್ಷಿಕೋತ್ಸವ ಸೆ.14ರಂದು ರಾತ್ರಿ 7.00 ರಿಂದ ಮರುದಿನ ಮುಂಜಾವಿನ ತನಕ ಮಂಗಳೂರಿನ ಪುರಭವನದಲ್ಲಿ ಜರುಗಲಿದ್ದು, ಪಾರೆಕೋಡಿ ಗಣಪತಿ ಭಟ್‌ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ ಪ್ರದಾನ,ನೇಪಥ್ಯ ಕಲಾವಿದರಾದ ಕೃಷ್ಣಪ್ಪ ಪೂಜಾರಿ ಮತ್ತು ನಾರಾಯಣ ಪುರುಷ ಅವರಿಗೆ ಸಮ್ಮಾನ, ಸುರೇಂದ್ರ ಪಣಿಯೂರುರವರು ಬರೆದ “ನಾ ಕಂಡಂತೆ ಕಾಳಿಂಗ ನಾವಡರು’ ಎಂಬ ಕೃತಿಯ ಲೋಕಾರ್ಪಣೆ ನಡೆಯಲಿದೆ . ಅನಂತರ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಚೂಡಾಮಣಿ – ರಾಮಾಂಜನೇಯ – ದ್ರೌಪದೀ ಪ್ರತಾಪ ಯಕ್ಷಗಾನ ಪ್ರದರ್ಶನಗೊಳ್ಳಲಿದೆ .

ಪಾರೆಕೋಡಿ ಗಣಪತಿ ಭಟ್‌
ಕುರುಡುಪದವು ಗ್ರಾಮದ ಪಾರೆಕೋಡಿನವರಾದ ಗಣಪತಿ ಭಟ್‌ 19ನೇ ಹರೆಯದಲ್ಲಿ ಧರ್ಮಸ್ಥಳ ಯಕ್ಷಗಾನ ಕೇಂದ್ರದಲ್ಲಿ ನೆಡ್ಲೆ ನರಸಿಂಹ ಭಟ್ಟರಿಂದ ಭಾಗವತಿಕೆ ಕಲಿತು ಪುತ್ತೂರು ಮೇಳದಲ್ಲಿ ಸಂಗೀತಗಾರರಾಗಿ ವೃತ್ತಿ ಜೀವನ ಪ್ರಾರಂಭಿಸಿದರು. ಮುಂದೆ ಪೂರ್ಣ ಪ್ರಮಾಣದ ಭಾಗವತರಾಗಿ ಬಪ್ಪನಾಡು , ಕಟೀಲು , ಸದಾಶಿವ ಮಹಾಗಣಪತಿ ಮೇಳಗಳಲ್ಲಿ ತಿರುಗಾಟ ನಡೆಸಿದರು . ಉತ್ತಮ ಕಂಠದೊಂದಿಗೆ , ಪೌರಾಣಿಕ ಜ್ಞಾನ ಹೊಂದಿರುವ ಭಟ್ಟರು ರಂಗನಡೆಯಲ್ಲೂ ನಿಷ್ಣಾತರಾಗಿ ಮೆರೆದರು . ಪ್ರಸ್ತುತ ತಿರುಗಾಟ ಮಾಡದಿದ್ದರೂ ಆಗಾಗ ಭಾಗವತಿಕೆ ಮಾಡುತ್ತಾ ಸಕ್ರಿಯರಾಗಿದ್ದಾರೆ . ಹಲವಾರು ಶಿಷ್ಯಂದಿರಿಗೆ ಭಾಗವತಿಕೆ ಕಲಿಸಿ ಗುರುಗಳಾಗಿಯೂ ಗುರುತಿಸಿಕೊಂಡಿದ್ದಾರೆ .

ಕೃಷ್ಣಪ್ಪ ಪೂಜಾರಿ
ಬೆಳ್ಳಾರೆ ಮಣಿಮಜಲು ಗ್ರಾಮದ ಕೃಷ್ಣಪ್ಪರು ಯಕ್ಷಗಾನದ ನೇಪಥ್ಯ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ . ಕಲಿತದ್ದು 2 ತರಗತಿಯವರೆಗಾದರೂ, ಯಕ್ಷಗಾನದ ಪಾತ್ರ , ವೇಷಗಳ ಬಗ್ಗೆ ಅಪಾರ ಜ್ಞಾನ ಹೊಂದಿದ್ದಾರೆ . ಯಾವ ಪಾತ್ರಗಳಿಗೆ ಯಾವ ವೇಷಭೂಷಣ, ಕಿರೀಟ, ಆಯುಧ ಎಂಬುದರ ಬಗ್ಗೆ ಚೆನ್ನಾಗಿ ಅರಿತಿರುವ ಕೃಷ್ಣಪ್ಪರು ಕಲಾವಿದರಿಗೆ ಅನಿವಾರ್ಯ ಎನಿಸಿಕೊಂಡಿದ್ದಾರೆ . ಕಟೀಲು, ಎಡನೀರು , ಹೊಸನಗರ ಮುಂತಾದ ಮೇಳಗಳಲ್ಲಿ 25 ವರ್ಷಗಳ ತಿರುಗಾಟ ನಡೆಸಿರುವ ಕೃಷ್ಣಪ್ಪರು ಪ್ರಸ್ತುತ ಹನುಮಗಿರಿ ಮೇಳದಲ್ಲಿ ಸೇವೆ ಸಲ್ಲಿಸುತ್ತಾ ಇದ್ದಾರೆ .

ನಾರಾಯಣ ಪುರುಷ
ಬಾಯಾರು ಸಮೀಪದ ಪಜಂಕಿಲ ಗ್ರಾಮದ ನಾರಾಯಣ ಪುರುಷರು ವೇಷಗಾರಿಕೆ ಹಾಗೂ ಪ್ರಸಾಧನಗಳ ಬಗ್ಗೆ ಅಭ್ಯಸಿಸಿ 20ನೇ ವಯಸ್ಸಿನಲ್ಲೇ ನೇಪಥ್ಯದ ಕಲಾವಿದರಾಗಿ ಯಕ್ಷಗಾನ ಮೇಳ ಸೇರಿದರು . ಕಟೀಲು , ಎಡನೀರು ಮೇಳಗಳಲ್ಲಿ 20 ವರ್ಷಗಳ ತಿರುಗಾಟ ನಡೆಸಿ , ಗಣೇಶ ಕಲಾವೃಂದ ಪೈವಳಿಕೆ ಸಂಸ್ಥೆಯಲ್ಲಿ ವೇಷಭೂಷಣ ತಯಾರಿಕೆಯಲ್ಲಿ 12 ವರ್ಷಗಳ ಕಾಲ ತೊಡಗಿಸಿಕೊಂಡರು . ಯಕ್ಷಗಾನದ ವೇಷಭೂಷಣಗಳ ತಯಾರಿಕೆಯಲ್ಲಿ ಸಿದ್ಧಿ ಸಾಧಿಸಿರುವ ನಾರಾಯಣ ಪುರುಷರು ಅಸೌಖ್ಯದಿಂದಾಗಿ ಇತ್ತೀಚೆಗೆ ಯಕ್ಷರಂಗದಿಂದ ನಿವೃತ್ತರಾಗಿದ್ದಾರೆ.

ಎಂ.ಶಾಂತರಾಮ ಕುಡ್ವ

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.