ನಾರಾಯಣ ಪೂಜಾರಿಗೆ ಯಕ್ಷಬಳಗದ ಸಮ್ಮಾನ


Team Udayavani, Aug 23, 2019, 5:00 AM IST

1

ಯಕ್ಷಬಳಗ ಹೊಸಂಗಡಿ ಸಂಘದ ವತಿಯಿಂದ ಈ ಬಾರಿಯ ವಾರ್ಷಿಕ ಸಮ್ಮಾನ ಹಿರಿಯ ಹವ್ಯಾಸಿ ಕಲಾವಿದ ನಾರಾಯಣ ಪೂಜಾರಿ ಬೆಜ್ಜಂಗಳ ಅವರಿಗೆ ಸಲ್ಲಲಿದೆ.

ನಾರಾಯಾಣ ಪೂಜಾರಿ ಬೆಜ್ಜಂಗಳ ಹವ್ಯಾಸಿ ಯಕ್ಷಗಾನ ರಂಗದಲ್ಲಿ ಸುಮಾರು ನಾಲ್ಕು ದಶಕಗಳಿಂದ ಸೇವೆಗೈಯುತ್ತಾ ಬಂದವರು. ಬಣ್ಣದ ವೇಷ ಹಾಗೂ ಹಾಸ್ಯಪಾತ್ರಗಳಲ್ಲಿ ಮಿಂಚುತ್ತ, ಯಕ್ಷಗಾನ ಸಂಯೋಜನೆಯನ್ನೂ ನಡೆಸುತ್ತಾ ಸದ್ದಿಲ್ಲದೆ ಯಕ್ಷಗಾನ ಕ್ಕಾಗಿ ದುಡಿಯುತ್ತಿದ್ದಾರೆ. ನಾರಾಯಣಗುರು ಪ್ರಸಾದಿತ ಯಕ್ಷಗಾನ ಕಲಾ ರಂಗವನ್ನು ವರ್ಕಾಡಿ ಸುಂಕದ ಕಟ್ಟೆ ಇದರ ಸ್ಥಾಪಕ ಅಧ್ಯಕ್ಷ ಅವರು. ಯಕ್ಷಗಾನ ಬಣ್ಣದ ವೇಷಕ್ಕೆ ಅನುಕೂಲವಾದಂತಹ ನೀಲಕಾಯ, ಉತ್ತಮ ಕಂಠ, ಪಾತ್ರೋಚಿತವಾಗಿ ಮಾತನಾಡುವ ಕೌಶಲ , ಹಿತಮಿತ ನಾಟ್ಯಗಾರಿಕೆ, ಬದುಕಲ್ಲಿ ಯಕ್ಷಗಾನ ಕಲೆಗಾಗಿ ತಾನೇನಾದರು ಕೊಡುಗೆ ನೀಡಬೇಕೆಂಬ ಅನನ್ಯ ತುಡಿತ ನಾರಾಯಣ ಪೂಜಾರಿಯವರನ್ನು ಇಷ್ಟು ಸುದೀರ್ಘ‌ಕಾಲ ಯಕ್ಷಗಾನರಂಗದಲ್ಲಿ ಬೆಳೆಯುವಂತೆ ಮಾಡಿದೆ.

ಎಳವೆಯಲ್ಲಿ ಹವ್ಯಾಸಿ ನಾಟಕ ತಂಡಗಳಲ್ಲಿ ಭಾಗವಹಿಸುತ್ತಾ ರಂಗಭೂಮಿಯಲ್ಲಿ ಬೇಡಿಕೆಯ ಕಲಾವಿದರಾಗಿದ್ದರು. ಮುಂದೊಂದು ದಿನ ದಿ| ಲೋಕಯ್ಯ ಶೆಟ್ಟಿ ವರ್ಕಾಡಿ ಅವರ ಪ್ರೇರಣೆಯಂತೆ ಯಕ್ಷಗಾನ ರಂಗದೆಡೆಗೆ ಒಲವು ಹರಿಸಿ ಹವ್ಯಾಸಿ ಯಕ್ಷಗಾನ ಕಲಾವಿದ ಕಳಿಯೂರು ತನಿಯಪ್ಪ ಭಂಡಾರಿಯವರಿಂದ ಯಕ್ಷಗಾನದ ಪ್ರಾಥಮಿಕ ಹೆಜ್ಜೆಗಳನ್ನು ಕಲಿತು ಮುಂದೆ ‌ ಹಿರಿಯ ವೇಷಧಾರಿ ಕೋಳ್ಯೂರು ನಾರಾಯಣ ಭಟ್‌ ಅವರು ತನ್ನ ಮನೆಯಲ್ಲೇ ಹೆಚ್ಚಿನ ನಾಟ್ಯಾಭ್ಯಾಸವನ್ನು ಕಲಿತರು. ಮಧುಕೈಟಭ, ಶುಂಭ, ರಾವಣ, ತಾರಕಾಸುರ, ಯಮ, ಭೀಮ, ವೀರಭದ್ರ, ಪಾತ್ರಗಳು ನಾರಾಯಣ ಪೂಜಾರಿಯವರಿಗೆ ಹೆಚ್ಚಿನ ಖ್ಯಾತಿಯನ್ನು ತಂದಿತ್ತು.

– ಯೋಗೀಶ ರಾವ್‌ ಚಿಗುರುಪಾದೆ

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.